nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026
    Facebook Twitter Instagram
    ಟ್ರೆಂಡಿಂಗ್
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    • ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!
    • ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು: ಚವ್ಹಾಣ.
    ರಾಜ್ಯ ಸುದ್ದಿ July 22, 2024

    ಪತ್ರಕರ್ತರು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು: ಚವ್ಹಾಣ.

    By adminJuly 22, 2024No Comments2 Mins Read
    awrad

    ಔರಾದ್: ಪತ್ರಕರ್ತರು ಸಾಮಾಜಿಕ ನ್ಯಾಯಕ್ಕಾಗಿ ಜನರ ಧ್ವನಿಯಾಗಬೇಕು ಎಂದು ಮಾಜಿ ಸಚಿವ ಹಾಲಿ ಶಾಸಕ ಪ್ರಭು ಚವ್ಹಾಣ ಕರೆ ನೀಡಿದರು.

    ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಮೀಡಿಯಾ ಜರ್ನಲಿಸ್ಟ್ ಯುನಿಯನ್ ಸಂಘದಿಂದ ಆಯೋಜಿಸಿದ ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು. ಎಲ್ಲೆಡೆ ನಿರೀಕ್ಷೆಗಳು ಹುಸಿಯಾದಾಗ ಜನಸಾಮಾನ್ಯರು ನ್ಯಾಯದ ಭರವಸೆ ಮಾಡುವುದು ಕೇವಲ ಪತ್ರಿಕಾ ಮಾಧ್ಯಮದ ಮೇಲೆ ಎಂಬುದನ್ನು ಅರಿಯಬೇಕು. ಪತ್ರಕರ್ತರ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ಕೆಲಸ ಈ ಹಿಂದಿನಿಂದಲೂ ಮಾಡಿದ್ದು, ಮುಂದೆಯು ಸಹ ಮಾಡುತ್ತೇನೆ. ಪತ್ರಕರ್ತರ ಅನುಕೂಲಕ್ಕೆ ಜೀವವಿಮೆಯಂತಹ ಸೌಲಭ್ಯಗಳು ನೀಡುವ ಕುರಿತು ಯೋಚಿಸುತ್ತೇನೆ ಎಂದರು.

    ತಾಲೂಕಿನಲ್ಲಿ ಪತ್ರಿಕಾ ಭವನ ಇಲ್ಲದಿರುವುದು ನನ್ನ ಗಮನಕ್ಕೂ ಇದೆ. ಹಿಂದಿನಿಂದಲೂ ಭವನ ನಿರ್ಮಾಣದ ಕುರಿತು ಪತ್ರಕರ್ತರ ಜೊತೆ ಚರ್ಚಿಸಿದ್ದೇನೆ. ಪಟ್ಟಣ ಪ್ರದೇಶದಲ್ಲಿ ನಿವೇಶನ ದೊರೆತಲ್ಲಿ ಶೀಘ್ರ ಪತ್ರಿಕಾ ಭವನ ನಿರ್ಮಿಸಲು ಸಿದ್ದನಿರುವುದಾಗಿ ಭರವಸೆ ನೀಡಿದರಲ್ಲದೇ. ಎಲ್ಲ ಪತ್ರಕರ್ತರು ಒಂದಾಗಿ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಿದರೆ ನನ್ನ ಕೆಲಸಕ್ಕೂ ವೇಗ ದೊರೆಯುತ್ತದೆ ಎಂದರು.

    ಹಿರಿಯ ಸಂಪಾದಕ ಸದಾನಂದ ಜೋಶಿ ಉಪನ್ಯಾಸ ನೀಡಿ ಮಾತನಾಡಿ, ಪತ್ರಕರ್ತರು ಸಮಾಜ ಸೇವಕರೇ ಹೊರತು ಅಧಿಪತಿಗಳಲ್ಲ. ಜನರ ನಿರೀಕ್ಷೆ ಹುಸಿಯಾಗದಂತೆ ಆತ್ಮಾವಲೋಕನ ಮಾಡಿಕೊಂಡು ಕೆಲಸ ಮಾಡಬೇಕು. ಪ್ರಸ್ತುತ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಿಂದ ಪತ್ರಿಕೆ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ತೀರ ಹಿನ್ನಡೆ ಉಂಟಾದರೂ ಸಹ ವಿಶ್ವಾಸಾರ್ಹತೆಗೆ ಯಾವ ಧಕ್ಕೆ ಬಂದಿಲ್ಲ. ಸಮಾಜ ಪತ್ರಕರ್ತರಿಗೆ ನೋಡುವ ದೃಷ್ಟಿಕೋನ ಬದಲಾಗಬೇಕು. ಭಯ, ಆಡಂಬರ, ಪ್ರತಿಷ್ಠೆ ಪತ್ರಕರ್ತರ ಹತ್ತಿರಕ್ಕೂ ಸುಳಿಯಬಾರದು ಎಂದು ಕಿವಿಮಾತು ಹೇಳಿದರು.

    ಆಶ್ರಯ ಯೋಜನೆಯಡಿ ಪತ್ರಕರ್ತರಿಗೆ ಮನೆಗಳು ದೊರೆಯಲಿ:

    ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆಎಂಜೆಯು ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ವಾಮಿ ನಕಿರೆಕಂಟಿ ಮಾತನಾಡಿ, ಹಗಲಿರುಳು ಸಮಾಜದ ಅಭಿವೃದ್ಧಿಗಾಗಿ ದುಡಿಯುವ ಪತ್ರಕರ್ತರಿಗೆ ಆಶ್ರಯ ಯೋಜನೆಯಲ್ಲಿ ಮನೆಗಳು ದೊರೆಯಬೇಕು. ಆರೋಗ್ಯದ ದೃಷ್ಟಿಯಿಂದ ಆರೋಗ್ಯ ವಿಮೆಗಳು ಮಾಡಿಸಬೇಕು.

    ಪಪಂ ವಾರ್ಷಿಕ ಬಜೆಟ್‌ನಲ್ಲಿ ಕನಿಷ್ಟ 20 ಲಕ್ಷ ರೂಪಾಯಿ ಮೀಸಲಿಟ್ಟು ತುರ್ತು ಸಂದರ್ಭಗಳಲ್ಲಿ ಪಟ್ಟಣದ, ತಾಲೂಕಿನ ಪತ್ರಕರ್ತರಿಗಾಗಿ ವಿನಿಯೋಗಿಸಬೇಕು ಎಂದರು. ತಾಲೂಕಿನ ಎಲ್ಲ ಪತ್ರಿಕೆ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದವರಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

    ಈ ಸಂದರ್ಭದಲ್ಲಿ ಪೂಜ್ಯ ಬಸವಲಿಂಗ ದೇವರು, ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ, ತಾ.ಪಂ. ಸಹಾಯಕ ನಿರ್ದೇಶಕ ಸುದೇಶ ಕುಮಾರ್, ಶಿವಕುಮಾರ್ ಘಾಟೆ, ಎಪಿಎಂಸಿ ಅಧ್ಯಕ್ಷ ಧೋಂಡಿಬಾ ನರೋಟೆ, ಹಿರಿಯ ಪತ್ರಕರ್ತ ಅನೀಲಕುಮಾರ್ ದೇಶಮುಖ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಶಿವರಾಜ ಅಲಮಾಜೆ, ಶಿವಾಜಿ ಪಾಟೀಲ್, ಸಂಘದ ಜಿಲ್ಲಾಧ್ಯಕ್ಷ ಪ್ರವೀಣಕುಮಾರ್, ತಾಲೂಕಾಧ್ಯಕ್ಷ ಸಂತೋಷ ಚಾಂಡೇಶ್ವರೆ, ಬಸವರಾಜ ಶಿವಪೂಜೆ, ರವೀಂದ್ರ ಮುಕ್ತೆದಾರ್, ರಾಮದಾಸ ಪಾಟೀಲ್, ಶಿವಕುಮಾರ್ ಬಿರಾದಾರ್, ಶಿವಾನಂದ ಬೇದ್ರೆ, ಅಂಕುಶ ವಾಡಿಕರ್, ಬಾಲಾಜಿ ಫಿರಂಗೆ, ಸಂದೀಪ ಪಾಟೀಲ್, ಅಮರ ಮುಕ್ತೆದಾರ್, ಸಂತೋಷ ದಿಂಡೆ, ಪ್ರಭುಲಿಂಗ, ಲಕ್ಷ್ಮಣ, ಶಿವರಾಜ, ದಯಾನಂದ ಬಿರಾದಾರ್ ಸೇರಿದಂತೆ ಇನ್ನಿತರರಿದ್ದರು. ಕಸಾಪ ಅಧ್ಯಕ್ಷ ಶಾಲಿವಾನ ಉದಗಿರೆ ಪ್ರಾಸ್ತಾವಿಕ ಮಾತನಾಡಿದರು. ಬಿಎಂ ಅಮರವಾಡಿ ನಿರೂಪಿಸಿದರು.

    ವರದಿ: ಅರವಿಂದ ಮಲ್ಲಿಗೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!

    August 14, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ತುಮಕೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (EPFO) ಸ್ವಯಂಪ್ರೇರಿತ ನಿಯಮ ಅನುಸರಣೆಯನ್ನು ಉತ್ತೇಜಿಸಲು, ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಹಾಗೂ…

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.