ಬಳ್ಳಾರಿ: ವಾರ್ಷಿಕ ವರದಿಗಳನ್ನು ಸಲ್ಲಿಸದ ಕಾರಣಕ್ಕಾಗಿ ರದ್ದಾಗಿರುವ ಪತ್ರಿಕೆಗಳ ಶೀರ್ಷಿಕೆಗಳನ್ನು ಮರುಸ್ಥಾಪಿಸಲು ಭಾರತ ಸರ್ಕಾರದ ಪತ್ರಿಕೆಗಳ ಪ್ರೆಸ್ ರಿಜಿಸ್ಟರ್ ಜನರಲ್ ಕಚೇರಿಯು ಪ್ರಕಾಶಕರಿಗೆ ಕೊನೆಯ ಅವಕಾಶವನ್ನು ನೀಡಿದೆ.
ಪ್ರೆಸ್ ಮತ್ತು ರಿಜಿಸ್ಟ್ರೇಷನ್ ಆಫ್ ಪಿರಿಯಾಡಿಕಲ್ಸ್ ಕಾಯ್ದೆ, 2023 ರ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ ಹಲವು ಪತ್ರಿಕೆಗಳ ಶೀರ್ಷಿಕೆಗಳನ್ನು ರದ್ದುಗೊಳಿಸಲಾಗಿತ್ತು. ಈ ಕುರಿತು ಪ್ರಕಾಶಕರು ಮತ್ತು ಪಾಲುದಾರರಿಂದ ಬಂದ ಮನವಿಗಳನ್ನು ಪುರಸ್ಕರಿಸಿ, ಇಲಾಖೆಯು ಈ ಅಂತಿಮ ಅವಕಾಶವನ್ನು ಕಲ್ಪಿಸಿದೆ.
ಬಾಕಿ ಇರುವ ದಂಡವನ್ನು ಪಾವತಿಸಲು ಮತ್ತು ವಾರ್ಷಿಕ ವರದಿಯನ್ನು ಸಲ್ಲಿಸಲು 30 ಜೂನ್ 2026 ಕೊನೆಯ ದಿನವಾಗಿದೆ. ರದ್ದಾದ ಪಟ್ಟಿಯಿಂದ ಶೀರ್ಷಿಕೆಯನ್ನು ತೆಗೆದುಹಾಕಲು, ಪ್ರಕಾಶಕರು ಬಾಕಿ ಇರುವ ದಂಡವನ್ನು ಪಾವತಿಸಬೇಕು ಮತ್ತು 2024-25ರ ಆರ್ಥಿಕ ವರ್ಷದ ವಾರ್ಷಿಕ ವರದಿಯನ್ನು ಪ್ರೆಸ್ ಸೇವಾ ಪೋರ್ಟಲ್ (Press Sewa Portal) ಮೂಲಕ ಕಡ್ಡಾಯವಾಗಿ ಸಲ್ಲಿಸಬೇಕು.
ಜೂನ್ 30 ರ ನಂತರ ಯಾವುದೇ ಕಾರಣಕ್ಕೂ ಕಾಲಾವಕಾಶವನ್ನು ವಿಸ್ತರಿಸಲಾಗುವುದಿಲ್ಲ. ಈ ಗಡುವಿನೊಳಗೆ ದಂಡ ಪಾವತಿಸದಿದ್ದರೆ ಶೀರ್ಷಿಕೆಗಳನ್ನು ಶಾಶ್ವತವಾಗಿ ರದ್ದುಗೊಳಿಸಲಾಗುವುದು ಮತ್ತು ಈ ಬಗ್ಗೆ ಯಾವುದೇ ಮೇಲ್ಮನವಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಉಪ ಪ್ರೆಸ್ ರಿಜಿಸ್ಟಾçರ್ ಜನರಲ್ ರತ್ನಾಕರ್ ಪಾಮುಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


