ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ, ಜನ ಅಪ್ಪನನ್ನು ಇಷ್ಟಪಡುತ್ತಾರೆ ಎಂಬ ಕಾರಣಕ್ಕೆ ಮಗನನ್ನೂ ಇಷ್ಟಪಡುತ್ತಾರೆ ಅಂತ ಹೇಳಲಾಗದು ಎಂದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀಳಗಿ ಜನ ತನ್ನನ್ನು ಒಪ್ಪಿಕೊಂಡಿದ್ದಾರೆ ಮತ್ತು ತಿರಸ್ಕರಿಸಿದ್ದಾರೆ. ನನ್ನಂತೆ ನನ್ನ ಮಗನನ್ನು ಅವರು ಇಷ್ಟಪಟ್ಟಾರು ಅಂತ ಹೇಳಲಾಗಲ್ಲ. ಪಕ್ಷದ ನಾಯಕರ ಆಂತರಿಕ ವೈಮನಸ್ಸುಗಳು ಬೀದಿಗೆ ಬರಬಾರದು ಎಂದರು.
ವಿಜಯೇಂದ್ರ ಅವರು ಪ್ರತಿಯೊಬ್ಬ ನಾಯಕರೊಂದಿಗೆ ಮುಖಾಮುಖಿಯಾಗಿ ಮಾತಾಡಬೇಕು ಎಂದು ಸಲಹೆ ನೀಡಿದ ಅವರು, ಬಿ.ಎಸ್. ಯಡಿಯೂರಪ್ಪ ಅವರ ಬಳಿ ಸಹಾಯ ಪಡೆದುಕೊಂಡವರು, ವಿರೋಧಿ ಬಣದ ಆರೋಪಗಳ ಬಗ್ಗೆ ಹಿರಿಯ ನಾಯಕರು ಏನೂ ಮಾತಾಡ್ತಿಲ್ಲ ಎಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ನಿರಾಣಿ, ತಂದೆಯವರ ಕಡೆ ಸಹಾಯ ತಗೊಂಡಾರ ಅಂದ್ರೆ, ಅವರು ಬೇರೆ ಮಾತನಾಡುತ್ತಾರೆ. ಆ ಮಾತು ವಾದ–ವಿವಾದಕ್ಕೆ ಕಾರಣವಾಗುತ್ತೆ. ನಾಲ್ಕು ಗೋಡೆಯ ಮಧ್ಯೆ ಅಸಮಾಧಾನವನ್ನು ಸರಿಪಡಿಸಿಕೊಳ್ಳಬೇಕು. ವಿಜಯೇಂದ್ರ ಎಲ್ಲರನ್ನೂ ಕರೆದು ಮಾತನಾಡಬೇಕು ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx