ಮಧುಗಿರಿ: ಮಾಜಿ ಶಾಸಕ ಕೆ.ಎನ್.ರಾಜಣ್ಣ ನವರು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರ ಬಗ್ಗೆ ಆವಹೇಳನಕಾರಿಯಾಗಿ ಆಡಿದ ಮಾತುಗಳನ್ನು ಖಂಡಿಸಿ, ಮಧುಗಿರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಮಧುಗಿರಿಯ ಶಾಸಕರಾದ ಎಂ.ವಿ.ವೀರಭದ್ರಯ್ಯ ನೇತೃತ್ವದಲ್ಲಿ ಮಧುಗಿರಿ ಪಟ್ಟಣದ ನಿರೀಕ್ಷಣ ಮಂದಿರದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಂ.ವಿ. ವೀರಭದ್ರಯ್ಯ, ಕಾಟಾಚಾರದ ಕ್ಷಮೆ ಯಾಚನೆ ಈಗಿನ ಉದ್ವಿಗ್ನ ಸನ್ನಿವೇಶದಿಂದ ಪಾರಾಗುವ ನರಿ ಬುದ್ದಿಯ ರಾಜಣ್ಣನ ಈ ನಡೆಯಿಂದ ಯಾರೂ ಸಹ ಗೊಂದಲಕ್ಕೆ ಒಳಗಾಗುವುದು ಬೇಡ. ಮುಂದೆ ಬರುವ 2023ರ ಚುನಾವಣೆಯಲ್ಲಿ ರಾಜಣ್ಣನವರಿಗೆ ಜಾತ್ಯತೀತ ಜನತಾದಳದ ಕಾರ್ಯಕರ್ತರು ತಕ್ಕ ಪಾಠ ಕಲಿಸುತ್ತಾರೆ ಎಂದು ತಿಳಿಸಿದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz