ಪಾವಗಡ: ಬುಧವಾರ ಬೆಳಗ್ಗೆ ಸುಮಾರು 7:30ರ ಸಮಯದಲ್ಲಿ ಪಾವಗಡ ಪಟ್ಟಣದಿಂದ ಚಿತ್ರದುರ್ಗದ ಮಾರ್ಗವಾಗಿ ಪ್ರಯಾಣ ಬೆಳೆಸಿದ್ದ ಖಾಸಗಿ KA 16 D 4333 ನಂಬರಿನ ಮಾಧವಿ ಬಸ್ ಮತ್ತು ಚಳ್ಳಕೆರೆಯಿಂದ ಪಾವಗಡದ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ KA 40 F 1174 ನಂಬರ್ ನ ಬಸ್ ಗಳ ನಡುವೆ ಕೋಟಗುಡ್ಡ ಗ್ರಾಮದ ಎಸ್. ಬಿ .ಐ ಬ್ಯಾಂಕ್ ಸಮೀಪದಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕೆ.ಎಸ್.ಆರ್.ಟಿ. ಸಿ ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ
ಕೋಟಗುಡ್ಡ ಗ್ರಾಮದ ಎಸ್ ಬಿ ಐ ಬ್ಯಾಂಕ್ ಬಳಿ ಎರಡು ಬಸ್ ಗಳು ಬಂದ ಸಮಯದಲ್ಲಿ ಮುಖಾಮುಖಿ ಡಿಕ್ಕಿಯಾಗಿವೆ, ಪರಿಣಾಮವಾಗಿ ಎರಡು ಬಸ್ ಗಳ ಮುಂಭಾಗದಲ್ಲಿರುವ ಗಾಜು ಪುಡಿಪುಡಿ ಆಗಿದ್ದು, ಕೆ.ಎಸ್.ಆರ್.ಟಿ. ಸಿ ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ. ಜೊತೆಗೆ ಕೆ.ಎಸ್.ಆರ.ಟಿ.ಸಿ ಬಸ್ ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನ ಚಿಕಿತ್ಸೆಗಾಗಿ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಸಂಭವಿಸಿ ಸುಮಾರು 30 ನಿಮಿಷಗಳಾದರೂ ಸ್ಥಳಕ್ಕೆ ಆ್ಯಂಬುಲೆನ್ಸ್ ಬಾರದ ಕಾರಣ ಜನರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಕೋಟಗುಡ್ಡ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಇಲ್ಲಿನ ಆಂಬುಲೆನ್ಸ್ ಬೇರೊಂದು ಕಡೆಗೆ ತೆರಳಿದೆ. ಇಂತಹ ತುರ್ತು ಪರಿಸ್ಥಿತಿಗಳಲ್ಲಿ ಆಂಬುಲೆನ್ಸ್ ಗಳ ಅವಶ್ಯಕತೆ ಹೆಚ್ಚಾಗಿರುತ್ತದೆ. ಮತ್ತಷ್ಟು ಆಂಬುಲೆನ್ಸ್ ಗಳ ವ್ಯವಸ್ಥೆಯನ್ನು ಮಾಡಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.
ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296