ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಫೆಬ್ರವರಿ 3ರಂದು ಬೆಳಗ್ಗೆ 10.30 ಕ್ಕೆ ಜೆಡಿಎಸ್ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದ್ದು, ಈ ಸಮಾವೇಶದಲ್ಲಿ ಕೆ.ಟಿ.ಶಾಂತಕುಮಾರ್ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ.
ಕೆ.ಟಿ.ಶಾಂತಕುಮಾರ್ ಅವರನ್ನು ಜೆಡಿಎಸ್ ಗೆ ಬರ ಮಾಡಿಕೊಳ್ಳಲು ಜೆಡಿಎಸ್ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಈ ಸಂಬಂಧ ಪೂರ್ವಭಾವಿ ಸಭೆ ನಡೆಸಲಾಗಿದ್ದು, ತಾಲೂಕಿನಲ್ಲಿ ಜೆಡಿಎಸ್ ಗೆ ನಾಯಕತ್ವದ ಕೊರತೆ ಇದ್ದು, ಈ ಕೊರತೆಯನ್ನು ಕೆ.ಟಿ.ಶಾಂತಕುಮಾರ್ ತುಂಬಲಿದ್ದಾರೆ ಎಂದು ಕಾರ್ಯಕರ್ತರು ಅಭಿಪ್ರಾಯಪಟ್ಟಿದ್ದಾರೆ.
ಈ ಬಗ್ಗೆ ಮಾತನಾಡಿದ ಕೆ.ಟಿ.ಶಾಂತಕುಮಾರ್, ಜೆಡಿಎಸ್ ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಜೆಡಿಎಸ್ ಗೆ ಸೇರ್ಪಡೆಯಾಗುತ್ತಿದ್ದೇನೆ. ಕಾರ್ಯಕ್ರಮದ ದಿನದಂದು ತಿಪಟೂರು ಗ್ರಾಮದೇವತೆ ಕೆಂಪಮ್ಮ ದೇವಿ ದೇವಸ್ಥಾನದಿಂದ ತೆರೆದ ವಾಹನದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮೆರವಣಿಗೆ ಮೂಲಕ ಕಲ್ಪತರು ಕ್ರೀಡಾಂಗಣದ ವೇದಿಕೆಗೆ ಕರೆತರಲಾಗುವುದು, ಈ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಸಮಾವೇಶವನ್ನು ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸುವರು. ತುಮಕೂರು ಜಿಲ್ಲೆಯ ಶಾಸಕರಾದ ಗೌರಿಶಂಕರ್, ಸಿ.ಎನ್ .ಬಾಲಕೃಷ್ಣ ,ವೀರಭದ್ರಯ್ಯ, ಸುಧಾಕರ್ ಲಾಲ್, ಚಿಕ್ಕನಾಯಕನಹಳ್ಳಿಯ ಸುರೇಶ್ ಬಾಬು ಹಾಗೂ ವಿಧಾನ ಪರಿಷತ್ ಸದಸ್ಯರು ಜೆಡಿಎಸ್ ಜಿಲ್ಲಾಧ್ಯಕ್ಷ ಅಂಜನಪ್ಪ, ಜಕ್ಕನಹಳ್ಳಿ ಲಿಂಗರಾಜು , ತಾಲೂಕು ಕಾರ್ಯಾಧ್ಯಕ್ಷ ಶಿವ ಸ್ವಾಮಿ, ರಾಜಶೇಖರ್ ಮತ್ತು ಮಹಿಳಾ ಘಟಕದ ರೇಖಾ ಅನುಪ್ ಸಾವಿರಾರು ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1