nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಚೇರಿಯಲ್ಲೇ ಉಳಿದ ಜನರ ದಾಖಲೆಗಳು | ಕೇಳೋರು ಯಾರು ಅಂಚೆ ಇಲಾಖೆಯ ಗೋಳು
    ಕೊರಟಗೆರೆ January 16, 2023

    ಕಚೇರಿಯಲ್ಲೇ ಉಳಿದ ಜನರ ದಾಖಲೆಗಳು | ಕೇಳೋರು ಯಾರು ಅಂಚೆ ಇಲಾಖೆಯ ಗೋಳು

    By adminJanuary 16, 2023No Comments2 Mins Read
    mallekavu
    • ಮಂಜುಸ್ವಾಮಿ ಎಂ.ಎನ್. ಕೊರಟಗೆರೆ

    ಕೊರಟಗೆರೆ: ನಿಮ್ಮ ಆಧಾರ್ ಕಾರ್ಡು ಮನೆಗೆ ಇನ್ನೂ ಬಂದಿಲ್ವಾ.. ಬ್ಯಾಂಕು ಚೆಕ್ ಬುಕ್ ನಿಮ್ಮ ಕೈಗೆ ಇನ್ನೂ ಸೇರಿಲ್ವಾ.. ರಿಜಿಸ್ಟರ್ ಪೋಸ್ಟ್–ಸ್ಪೀಡ್ ಪೋಸ್ಟ್ ಮನೆಗೆ ಬರ್ತಾ ಇಲ್ವಾ.. ಕೆಲಸದ ಆಹ್ವಾನದ ತುರ್ತುಕರೆ ನಿಮಗೇ ಬರೋದೇ ಇಲ್ಲ ಬಿಡಿ.. ಯಾಕೆ ಗೊತ್ತಾ ಮಲ್ಲೇಕಾವು ಅಂಚೆ ಕಚೇರಿಯ ಅಂಚೆ ಪಾಲಕ ಕಳೆದ 45ದಿನಗಳಿಂದ ಕಚೇರಿಗೆ ಬಂದೇ ಇಲ್ವಂತೆ..!!

    ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟ ಗ್ರಾಪಂ ವ್ಯಾಪ್ತಿಯ ಮಲ್ಲೇಕಾವು ಗ್ರಾಮದ ಅಂಚೆ ಕಚೇರಿಯ ಅಂಚೆ ಪಾಲಕ ನಾಗೇಂದ್ರ ಎಂಬಾತ ಕಳೆದ 45 ದಿನಗಳಿಂದ ಕರ್ತವ್ಯಕ್ಕೆ ಗೈರುಹಾಜರಿಯಾಗಿದ್ದು, ಹತ್ತಾರು ಗ್ರಾಮಗಳಿಗೆ ತುರ್ತುಸೇವೆ ನೀಡಬೇಕಾದ ಅಂಚೆ ಪಾಲಕ ಗೈರಾದ ಹಿನ್ನೆಲೆಯಲ್ಲಿ ನೂರಾರು ಸಮಸ್ಯೆಗಳು ಸೃಷ್ಟಿಯಾಗಿವೆ.


    Provided by
    Provided by

    ಬ್ಯಾಂಕ್ ಬೆಕ್, ಆಧಾರ್ ಕಾರ್ಡು, ಕೋರ್ಟ್ ನೊಟೀಸ್, ಎಟಿಎಂ ಕಾರ್ಡು, ರೇಷನ್‍ ಕಾರ್ಡು, ಎಲ್‍ ಐಸಿ ಬಾಂಡ್, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಜಾಬ್ ನೊಟೀಸ್, ಕೊರಿಯರ್, ಪಾರ್ಸಲ್‍ ಗಳು, ಹತ್ತಾರು ಗ್ರಾಮದ ನೂರಾರು ಜನ ಗ್ರಾಹಕರ ಕೈಸೇರದೇ ಕಳೆದ 45 ದಿನಗಳಿಂದ ಮಲ್ಲೇಕಾವು ಅಂಚೆ ಕಚೇರಿಯಲ್ಲಿ ಧೂಳು ಹಿಡಿಯುತ್ತಿದ್ದು ಕರ್ತವ್ಯಲೋಪ ಪ್ರಶ್ನಿಸುವ ಅಂಚೆ ನಿರೀಕ್ಷಕರು ನಿರ್ಲಕ್ಷ ವಹಿಸಿದ್ದಾರೆ.

    ಅಂಚೆ ಪಾಲಕ ಕಚೇರಿಗೆ ಬರೋದೆ ಇಲ್ವಂತೆ:

    ಮಲ್ಲೇಕಾವು ಅಂಚೆ ಇಲಾಖೆಯ ಅಂಚೆ ಪಾಲಕನ ತಂದೆಯ ಕೆಲಸವನ್ನು ಮಗ ನಾಗೇಂದ್ರನಿಗೆ ನೀಡಲಾಗಿದೆ. ನಾಗೇಂದ್ರ ತನ್ನ ಕೆಲಸವನ್ನೇ ಮರೆತು ಸಂಬಳ ಪಡೆಯುವುದಕ್ಕೇ ಮಾತ್ರ ಸೀಮಿತ ಆಗಿದ್ದಾರೆ.

    ಅಂಚೆ ಇಲಾಖೆಯ ದಾಖಲೆಗಳು ತನ್ನ ಮನೆಯಲ್ಲಿಯೇ ಶೇಖರಣೆ ಮಾಡಿ ಕೊಂಡಿರುವ ಆರೋಪವು ಸಹ ಇದೆ. 30 ದಿನದ ಹಿಂದೆಯೇ ತನಿಖೆ ನಡೆಸಿರುವ ಅಂಚೆ ನಿರೀಕ್ಷಕ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಪರಿಣಾಮ ಸಮಸ್ಯೆಯು ದ್ವಿಗುಣವಾಗಿದೆ.

    ಮಲ್ಲೇಕಾವು ಅಂಚೆ ಉಪಕಚೇರಿಯ ಚನ್ನರಾಯನದುರ್ಗ, ಬೇಂಡೋಣಿ, ಮಲ್ಲೇಕಾವು, ಗೌರಿಗಲ್ಲು, ದೊಗ್ಗನಹಳ್ಳಿ, ಹಂಚಿಮಾರನಹಳ್ಳಿ ಸೇರಿದಂತೆ ಹತ್ತಾರು ಗ್ರಾಮಗಳಿಗೆ ತುರ್ತುಸೇವೆ ನೀಡಬೇಕಾದ ಇಲಾಖೆಯು ಮೌನಕ್ಕೆ ಶರಣಾಗಿದೆ. ಅಂಚೆ ಆಯುಕ್ತರು ಮತ್ತು ಜಿಲ್ಲಾ ಅಧಿಕ್ಷಕರು ಕೊರಟಗೆರೆ ಅಂಚೆ ನಿರೀಕ್ಷಕ ಹರ್ಷ ಮತ್ತು ಮಲ್ಲೇಕಾವು ಅಂಚೆ ಪಾಲಕ ನಾಗೇಂದ್ರ ಮೇಲೆ ಕರ್ತವ್ಯಲೋಪದ ಅಡಿಯಲ್ಲಿ ತುರ್ತು ಕ್ರಮ ಕೈಗೊಳ್ಳಬೇಕಿದೆ.

    ಅಂಚೆ ನಿರೀಕ್ಷಕನ ದಿವ್ಯ ನಿರ್ಲಕ್ಷ:

    ಕೊರಟಗೆರೆಯ 16 ಅಂಚೆ ಉಪಕಚೇರಿಗಳಿಗೆ ಹರ್ಷ ಎಂಬುವರೇ ಅಂಚೆ ನಿರೀಕ್ಷಕ. ತುಮಕೂರು ನಗರಕ್ಕೆ ಮಾತ್ರ ಸೀಮತವಾಗಿದ್ದು, ಕೊರಟಗೆರೆಗೆ ಸದಾ ಗೈರು. ಇವರು ಕೊರಟಗೆರೆಗೆ ಬರೋದು ಯಾರಿಗೂ ಗೊತ್ತಾಗಲ್ಲ–ಮತ್ತೇ ಹೋಗುವ ದಿನಚರಿಯೇ ತಿಳಿಯೊಲ್ಲ. ಮಲ್ಲೇಕಾವು ಕಚೇರಿಗೆ 30ದಿನದ ಹಿಂದೆಯಷ್ಟೆ ಭೇಟಿ ನೀಡಿ ಹತ್ತಾರು ಸಮಸ್ಯೆಯನ್ನು ಕಣ್ಣಾರೇ ಕಂಡ್ರು ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದ್ದಾರೆ. ಅಂಚೆ ಇಲಾಖೆಯು ಇವರ ಮೇಲೆ ಮೊದಲು ಶಿಸ್ತು ಕ್ರಮ ಜರುಗಿಸಬೇಕಿದೆ.

    ಅಂಚೆ ಇಲಾಖೆಯಲ್ಲಿ ಮೇಲ್ವಿಚಾರಕ ತನಿಖೆ:

    anche

    ಕೊರಟಗೆರೆ ಅಂಚೆ ನಿರೀಕ್ಷಕ ಹರ್ಷ ಗೈರು ಹಾಜರಿಯಲ್ಲಿ ನೆಪಮಾತ್ರಕ್ಕೆ ಶಿವಕುಮಾರ್ ಮತ್ತು ಮಂಜುನಾಥ ತಂಡದಿಂದ ತನಿಖೆ ನಡೆದಿದೆ. ತನಿಖೆಯ ವೇಳೆ ತಿಂಗಳಿಂದ ಧೂಳು ಹಿಡಿಯುತ್ತಿದ್ದ ಗ್ರಾಹಕರ ನೂರಾರು ದಾಖಲೆಗಳು ದೊರೆತಿವೆ. ತಿಂಗಳ ಹಿಂದೆಯೇ ತನಿಖೆ ನಡೆಸಿದ ಅಂಚೆ ನಿರೀಕ್ಷಕರ ತನಿಖೆಯು ಎಲ್ಲಿಗೇ ಬಂತು ಎಂಬುದೇ ಯಕ್ಷಪ್ರಶ್ನೆಯಾಗಿ ಜನರ ಮುಂದೆ ಉಳಿದಿದೆ.

    ಅಂಚೆ ಇಲಾಖೆ ಮೂಲಕ ಜನರಿಗೆ ತಲುಪುವ ಯಾವುದೇ ದಾಖಲೆ ನಿಗದಿತ ಸಮಯಕ್ಕೆ ಸಿಗುತ್ತಿಲ್ಲ. ಅಂಚೆ ಪಾಲಕ ಕಳೆದ 45ದಿನಗಳಿಂದ ಗೈರು ಹಾಜರಾಗಿ ಸಮಸ್ಯೆ ಸೃಷ್ಟಿಯಾಗಿದೆ. ನೂರಾರು ಜನರ ದಾಖಲೆಗಳು ಅಂಚೆ ಇಲಾಖೆಯಲ್ಲಿ ಕೊಳೆಯುತ್ತಿವೆ. ಕೊರಟಗೆರೆಯ ಅಂಚೆ ನಿರೀಕ್ಷಕರಿಗೆ ಸ್ಥಳೀಯರು ದೂರು ನೀಡಿದ್ರು ಪ್ರಯೋಜನ ಆಗಿಲ್ಲ.

    –ರಾಘವೇಂದ್ರ, ಸ್ಥಳೀಯ ನಿವಾಸಿ, ಸಿ.ಎನ್.ದುರ್ಗ


    ಮಲ್ಲೇಕಾವು ಅಂಚೆ ಪಾಲಕ ಗೈರು ಹಾಜರಿಯ ಬಗ್ಗೆ ಈಗಾಗಲೇ ತನಿಖೆ ನಡೆದಿದೆ. ಅಂಚೆ ಪಾಲಕ ನಾಗೇಂದ್ರಗೆ ಕಾರಣ ಕೇಳಿ ಶೋಕಾಸ್ ನೊಟೀಸ್ ಜಾರಿ ಮಾಡಲಾಗಿದೆ. ತನಿಖೆಯಲ್ಲಿ ಲೋಪದೋಷ ಕಂಡುಬಂದರೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ತುರ್ತುಸೇವೆಗೆ ಸಮಸ್ಯೆ ಆಗದಂತೆ ಕ್ರಮಕ್ಕೆ ಈಗಾಗಲೇ ಅಂಚೆ ನಿರೀಕ್ಷಕರಿಗೆ ಸೂಚಿಸಿದ್ದೇನೆ.

    –ಗೋವಿಂದರಾಜು, ಅಧೀಕ್ಷಕ, ಅಂಚೆ ಇಲಾಖೆ, ತುಮಕೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.