nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಚೇರಿಯಲ್ಲೇ ಉಳಿದ ಜನರ ದಾಖಲೆಗಳು | ಕೇಳೋರು ಯಾರು ಅಂಚೆ ಇಲಾಖೆಯ ಗೋಳು
    ಕೊರಟಗೆರೆ January 16, 2023

    ಕಚೇರಿಯಲ್ಲೇ ಉಳಿದ ಜನರ ದಾಖಲೆಗಳು | ಕೇಳೋರು ಯಾರು ಅಂಚೆ ಇಲಾಖೆಯ ಗೋಳು

    By adminJanuary 16, 2023No Comments2 Mins Read
    mallekavu

    Provided by
    Provided by
    • ಮಂಜುಸ್ವಾಮಿ ಎಂ.ಎನ್. ಕೊರಟಗೆರೆ

    ಕೊರಟಗೆರೆ: ನಿಮ್ಮ ಆಧಾರ್ ಕಾರ್ಡು ಮನೆಗೆ ಇನ್ನೂ ಬಂದಿಲ್ವಾ.. ಬ್ಯಾಂಕು ಚೆಕ್ ಬುಕ್ ನಿಮ್ಮ ಕೈಗೆ ಇನ್ನೂ ಸೇರಿಲ್ವಾ.. ರಿಜಿಸ್ಟರ್ ಪೋಸ್ಟ್–ಸ್ಪೀಡ್ ಪೋಸ್ಟ್ ಮನೆಗೆ ಬರ್ತಾ ಇಲ್ವಾ.. ಕೆಲಸದ ಆಹ್ವಾನದ ತುರ್ತುಕರೆ ನಿಮಗೇ ಬರೋದೇ ಇಲ್ಲ ಬಿಡಿ.. ಯಾಕೆ ಗೊತ್ತಾ ಮಲ್ಲೇಕಾವು ಅಂಚೆ ಕಚೇರಿಯ ಅಂಚೆ ಪಾಲಕ ಕಳೆದ 45ದಿನಗಳಿಂದ ಕಚೇರಿಗೆ ಬಂದೇ ಇಲ್ವಂತೆ..!!

    ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟ ಗ್ರಾಪಂ ವ್ಯಾಪ್ತಿಯ ಮಲ್ಲೇಕಾವು ಗ್ರಾಮದ ಅಂಚೆ ಕಚೇರಿಯ ಅಂಚೆ ಪಾಲಕ ನಾಗೇಂದ್ರ ಎಂಬಾತ ಕಳೆದ 45 ದಿನಗಳಿಂದ ಕರ್ತವ್ಯಕ್ಕೆ ಗೈರುಹಾಜರಿಯಾಗಿದ್ದು, ಹತ್ತಾರು ಗ್ರಾಮಗಳಿಗೆ ತುರ್ತುಸೇವೆ ನೀಡಬೇಕಾದ ಅಂಚೆ ಪಾಲಕ ಗೈರಾದ ಹಿನ್ನೆಲೆಯಲ್ಲಿ ನೂರಾರು ಸಮಸ್ಯೆಗಳು ಸೃಷ್ಟಿಯಾಗಿವೆ.

    ಬ್ಯಾಂಕ್ ಬೆಕ್, ಆಧಾರ್ ಕಾರ್ಡು, ಕೋರ್ಟ್ ನೊಟೀಸ್, ಎಟಿಎಂ ಕಾರ್ಡು, ರೇಷನ್‍ ಕಾರ್ಡು, ಎಲ್‍ ಐಸಿ ಬಾಂಡ್, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಜಾಬ್ ನೊಟೀಸ್, ಕೊರಿಯರ್, ಪಾರ್ಸಲ್‍ ಗಳು, ಹತ್ತಾರು ಗ್ರಾಮದ ನೂರಾರು ಜನ ಗ್ರಾಹಕರ ಕೈಸೇರದೇ ಕಳೆದ 45 ದಿನಗಳಿಂದ ಮಲ್ಲೇಕಾವು ಅಂಚೆ ಕಚೇರಿಯಲ್ಲಿ ಧೂಳು ಹಿಡಿಯುತ್ತಿದ್ದು ಕರ್ತವ್ಯಲೋಪ ಪ್ರಶ್ನಿಸುವ ಅಂಚೆ ನಿರೀಕ್ಷಕರು ನಿರ್ಲಕ್ಷ ವಹಿಸಿದ್ದಾರೆ.


    Provided by
    Provided by

    ಅಂಚೆ ಪಾಲಕ ಕಚೇರಿಗೆ ಬರೋದೆ ಇಲ್ವಂತೆ:

    ಮಲ್ಲೇಕಾವು ಅಂಚೆ ಇಲಾಖೆಯ ಅಂಚೆ ಪಾಲಕನ ತಂದೆಯ ಕೆಲಸವನ್ನು ಮಗ ನಾಗೇಂದ್ರನಿಗೆ ನೀಡಲಾಗಿದೆ. ನಾಗೇಂದ್ರ ತನ್ನ ಕೆಲಸವನ್ನೇ ಮರೆತು ಸಂಬಳ ಪಡೆಯುವುದಕ್ಕೇ ಮಾತ್ರ ಸೀಮಿತ ಆಗಿದ್ದಾರೆ.

    ಅಂಚೆ ಇಲಾಖೆಯ ದಾಖಲೆಗಳು ತನ್ನ ಮನೆಯಲ್ಲಿಯೇ ಶೇಖರಣೆ ಮಾಡಿ ಕೊಂಡಿರುವ ಆರೋಪವು ಸಹ ಇದೆ. 30 ದಿನದ ಹಿಂದೆಯೇ ತನಿಖೆ ನಡೆಸಿರುವ ಅಂಚೆ ನಿರೀಕ್ಷಕ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಪರಿಣಾಮ ಸಮಸ್ಯೆಯು ದ್ವಿಗುಣವಾಗಿದೆ.

    ಮಲ್ಲೇಕಾವು ಅಂಚೆ ಉಪಕಚೇರಿಯ ಚನ್ನರಾಯನದುರ್ಗ, ಬೇಂಡೋಣಿ, ಮಲ್ಲೇಕಾವು, ಗೌರಿಗಲ್ಲು, ದೊಗ್ಗನಹಳ್ಳಿ, ಹಂಚಿಮಾರನಹಳ್ಳಿ ಸೇರಿದಂತೆ ಹತ್ತಾರು ಗ್ರಾಮಗಳಿಗೆ ತುರ್ತುಸೇವೆ ನೀಡಬೇಕಾದ ಇಲಾಖೆಯು ಮೌನಕ್ಕೆ ಶರಣಾಗಿದೆ. ಅಂಚೆ ಆಯುಕ್ತರು ಮತ್ತು ಜಿಲ್ಲಾ ಅಧಿಕ್ಷಕರು ಕೊರಟಗೆರೆ ಅಂಚೆ ನಿರೀಕ್ಷಕ ಹರ್ಷ ಮತ್ತು ಮಲ್ಲೇಕಾವು ಅಂಚೆ ಪಾಲಕ ನಾಗೇಂದ್ರ ಮೇಲೆ ಕರ್ತವ್ಯಲೋಪದ ಅಡಿಯಲ್ಲಿ ತುರ್ತು ಕ್ರಮ ಕೈಗೊಳ್ಳಬೇಕಿದೆ.

    ಅಂಚೆ ನಿರೀಕ್ಷಕನ ದಿವ್ಯ ನಿರ್ಲಕ್ಷ:

    ಕೊರಟಗೆರೆಯ 16 ಅಂಚೆ ಉಪಕಚೇರಿಗಳಿಗೆ ಹರ್ಷ ಎಂಬುವರೇ ಅಂಚೆ ನಿರೀಕ್ಷಕ. ತುಮಕೂರು ನಗರಕ್ಕೆ ಮಾತ್ರ ಸೀಮತವಾಗಿದ್ದು, ಕೊರಟಗೆರೆಗೆ ಸದಾ ಗೈರು. ಇವರು ಕೊರಟಗೆರೆಗೆ ಬರೋದು ಯಾರಿಗೂ ಗೊತ್ತಾಗಲ್ಲ–ಮತ್ತೇ ಹೋಗುವ ದಿನಚರಿಯೇ ತಿಳಿಯೊಲ್ಲ. ಮಲ್ಲೇಕಾವು ಕಚೇರಿಗೆ 30ದಿನದ ಹಿಂದೆಯಷ್ಟೆ ಭೇಟಿ ನೀಡಿ ಹತ್ತಾರು ಸಮಸ್ಯೆಯನ್ನು ಕಣ್ಣಾರೇ ಕಂಡ್ರು ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದ್ದಾರೆ. ಅಂಚೆ ಇಲಾಖೆಯು ಇವರ ಮೇಲೆ ಮೊದಲು ಶಿಸ್ತು ಕ್ರಮ ಜರುಗಿಸಬೇಕಿದೆ.

    ಅಂಚೆ ಇಲಾಖೆಯಲ್ಲಿ ಮೇಲ್ವಿಚಾರಕ ತನಿಖೆ:

    anche

    ಕೊರಟಗೆರೆ ಅಂಚೆ ನಿರೀಕ್ಷಕ ಹರ್ಷ ಗೈರು ಹಾಜರಿಯಲ್ಲಿ ನೆಪಮಾತ್ರಕ್ಕೆ ಶಿವಕುಮಾರ್ ಮತ್ತು ಮಂಜುನಾಥ ತಂಡದಿಂದ ತನಿಖೆ ನಡೆದಿದೆ. ತನಿಖೆಯ ವೇಳೆ ತಿಂಗಳಿಂದ ಧೂಳು ಹಿಡಿಯುತ್ತಿದ್ದ ಗ್ರಾಹಕರ ನೂರಾರು ದಾಖಲೆಗಳು ದೊರೆತಿವೆ. ತಿಂಗಳ ಹಿಂದೆಯೇ ತನಿಖೆ ನಡೆಸಿದ ಅಂಚೆ ನಿರೀಕ್ಷಕರ ತನಿಖೆಯು ಎಲ್ಲಿಗೇ ಬಂತು ಎಂಬುದೇ ಯಕ್ಷಪ್ರಶ್ನೆಯಾಗಿ ಜನರ ಮುಂದೆ ಉಳಿದಿದೆ.

    ಅಂಚೆ ಇಲಾಖೆ ಮೂಲಕ ಜನರಿಗೆ ತಲುಪುವ ಯಾವುದೇ ದಾಖಲೆ ನಿಗದಿತ ಸಮಯಕ್ಕೆ ಸಿಗುತ್ತಿಲ್ಲ. ಅಂಚೆ ಪಾಲಕ ಕಳೆದ 45ದಿನಗಳಿಂದ ಗೈರು ಹಾಜರಾಗಿ ಸಮಸ್ಯೆ ಸೃಷ್ಟಿಯಾಗಿದೆ. ನೂರಾರು ಜನರ ದಾಖಲೆಗಳು ಅಂಚೆ ಇಲಾಖೆಯಲ್ಲಿ ಕೊಳೆಯುತ್ತಿವೆ. ಕೊರಟಗೆರೆಯ ಅಂಚೆ ನಿರೀಕ್ಷಕರಿಗೆ ಸ್ಥಳೀಯರು ದೂರು ನೀಡಿದ್ರು ಪ್ರಯೋಜನ ಆಗಿಲ್ಲ.

    –ರಾಘವೇಂದ್ರ, ಸ್ಥಳೀಯ ನಿವಾಸಿ, ಸಿ.ಎನ್.ದುರ್ಗ


    ಮಲ್ಲೇಕಾವು ಅಂಚೆ ಪಾಲಕ ಗೈರು ಹಾಜರಿಯ ಬಗ್ಗೆ ಈಗಾಗಲೇ ತನಿಖೆ ನಡೆದಿದೆ. ಅಂಚೆ ಪಾಲಕ ನಾಗೇಂದ್ರಗೆ ಕಾರಣ ಕೇಳಿ ಶೋಕಾಸ್ ನೊಟೀಸ್ ಜಾರಿ ಮಾಡಲಾಗಿದೆ. ತನಿಖೆಯಲ್ಲಿ ಲೋಪದೋಷ ಕಂಡುಬಂದರೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ತುರ್ತುಸೇವೆಗೆ ಸಮಸ್ಯೆ ಆಗದಂತೆ ಕ್ರಮಕ್ಕೆ ಈಗಾಗಲೇ ಅಂಚೆ ನಿರೀಕ್ಷಕರಿಗೆ ಸೂಚಿಸಿದ್ದೇನೆ.

    –ಗೋವಿಂದರಾಜು, ಅಧೀಕ್ಷಕ, ಅಂಚೆ ಇಲಾಖೆ, ತುಮಕೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    June 22, 2026

    ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.

    June 19, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬೆಂಗಳೂರು: ಪ್ರಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ. ಶ್ರೀನಿವಾಸ್ (ಬೆಂ.ಕೋ.ಶ್ರೀ) ಅವರ ಸಿನಿಮಾ ಜಗತ್ತಿನ ಪಯಣ, ವ್ಯಾಪಾರ, ಹೋರಾಟ ಹಾಗೂ ಅವರ…

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.