ತಿಪಟೂರು: ಶ್ರೀ ಮಂಜುನಾಥ ಗ್ರಾಮೀಣಾಭಿವೃದ್ಧಿ ಯೋಜನೆಯ ತಾಲ್ಲೂಕಿನ ಕರಡಿ ವಲಯದ ಗ್ರಾಮ ಸೇವಾ ಕೇಂದ್ರದ ನೂತನ ಕಛೇರಿಯನ್ನು ಕರಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರು ಸದಸ್ಯರಾದ ಕೆ ಆರ್ ದೇವರಾಜು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಸಂಘದಿಂದ ಬಡವರಿಗೆ ನೀಡುವ ಸಾಲಸೌಲಭ್ಯವನ್ನು ಬಳಸಿಕೊಂಡು ಅಭಿವೃದ್ದಿ ಹೊಂದಲು ಹಾಗೂ ಸರ್ಕಾರ ಕೂಲಿ ಕಾರ್ಮಿಕರಿಗೆ ನೀಡುವ ಇಶರ್ಮ ಕಾರ್ಡ್ ಸೇರಿದಂತೆ ಇತರ ಸೌಲಭ್ಯಗಳನ್ನು ಮಂಜುನಾಥ ಗ್ರಾಮೀಣಾಭಿವೃದ್ಧಿ ಸಂಘವು ಸಾರ್ವಜನಿಕರಿಗೆ ವದಗಿಸುತ್ತಿರುವುದು ಶ್ಲಾಘನೀಯವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿಗಳಾದ ಪ್ರವೀಣ್ ಕುಮಾರ್, ಮೇಲ್ವಿಚಾರಕರುಗಳಾದ ಸಂತೋಷ್, ರಮೇಶ್ ಒಕ್ಕೂಟದ ಅಧ್ಯಕ್ಷರಾದ ರಾಜಮ್ಮ, ಗ್ರಾಮ ಪಂಚಾಯತಿ ಸದಸ್ಯರಾದ ರವೀಶ್ ಎ., ಸೇವಾ ಪ್ರತಿನಿಧಿಗಳಾದ ಮೀನಾಕ್ಷಿ, ಗೀತಾ, ದಾಕ್ಷಾಯಿಣಿ, ದರ್ಶನ್ ಸೇರಿದಂತೆ ಸದಸ್ಯರು ಗ್ರಾಮಸ್ಥರು ಹಾಜರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy