nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025
    Facebook Twitter Instagram
    ಟ್ರೆಂಡಿಂಗ್
    • ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
    • ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ
    • ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ
    • ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ
    • ನರಹಂತಕ ಹುಲಿಯ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ: ಡ್ರೋನ್‌ ಕ್ಯಾಮೆರಾದಲ್ಲಿ ಹುಲಿ ಪತ್ತೆ!
    • ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
    • ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್
    • ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ಸರ್ಕಾರದಿಂದ ಪದೇ ಪದೇ ಕಾಡುಗೊಲ್ಲರಿಗೆ ಅವಮಾನ: ಗೋಪಿ ಯಾದವ್ ಬೇಸರ
    ಜಿಲ್ಲಾ ಸುದ್ದಿ August 24, 2022

    ಬಿಜೆಪಿ ಸರ್ಕಾರದಿಂದ ಪದೇ ಪದೇ ಕಾಡುಗೊಲ್ಲರಿಗೆ ಅವಮಾನ: ಗೋಪಿ ಯಾದವ್ ಬೇಸರ

    By adminAugust 24, 2022No Comments1 Min Read
    gopi yadav

    ಹಿರಿಯೂರು: ಸರ್ಕಾರ ಬುಡಕಟ್ಟು ಹಿನ್ನೆಲೆ ಹೊಂದಿರುವ ಕಾಡುಗೊಲ್ಲ ಜನಾಂಗವನ್ನು ಅವಮಾನಿಸುತ್ತಿರುವುದು ನಿಜಕ್ಕೂ ಸಹ ನೋವಿನ ಸಂಗತಿ ಎಂದು ಕಾಡುಗೊಲ್ಲ ಮುಖಂಡರಾದ ಗೋಪಿ ಯಾದವ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಜ್ಯ ಸರ್ಕಾರ ಕಾಡು ಗೊಲ್ಲರನ್ನು ಕಡೆಗಣಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಮತ ಚಲಾಯಿಸಿ 15ರಿಂದ 18 ಕ್ಷೇತ್ರದಲ್ಲಿ ಬಿಜೆಪಿ ಶಾಸಕರನ್ನು ಸಮುದಾಯ ಗೆಲ್ಲಿಸಿದೆ. ಆದರೆ ಅಧಿಕಾರ ದೊರಕಿದ ಬಳಿಕ ಬಿಜೆಪಿ ಸಮುದಾಯವನ್ನು ಕಡೆಗಣಿಸಿದೆ ಎಂದರು.


    Provided by
    Provided by

    ಸರ್ಕಾರವು ಕಾಡುಗೊಲ್ಲರ ಅಭಿವೃದ್ಧಿ ನಿಗಮ ಘೋಷಿಸಿದೆಯಾದರೂ ಈವರೆಗೆ ಅದಕ್ಕೆ ಅಧ್ಯಕ್ಷರನ್ನೂ ನೇಮಕ ಮಾಡದೇ ಪದೇ ಪದೇ ಕುಂಟು ನೆಪ ಹೇಳುತ್ತಾ ಸಮುದಾಯವನ್ನು ಅವಮಾನಿಸುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
    ಕಾಡುಗೊಲ್ಲರು 18 ಲಕ್ಷ ಜನಸಂಖ್ಯೆ ಇದ್ದರೂ, ಅವರ ಅಭಿವೃದ್ಧಿಗೆಂದು ಮೂರು ನಾಮ ಹಾಕಿದಂತೆ ಕೇವಲ 3 ಕೋಟಿ ಅನುದಾನ ನೀಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಕಾಡುಗೊಲ್ಲ ರಿಗೆ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿ ಅನುಷ್ಠಾನಕ್ಕೆ ತರಲಾಗಿತ್ತು. ಆ ಸಂದರ್ಭದಲ್ಲಿ ಜಯಮ್ಮ ಬಾಲರಾಜ್ ಅವರನ್ನು ಎಂಎಲ್ಸಿ ಮಾಡಲಾಗಿತ್ತು ಎಂದು ಯಾದವ್ ತಿಳಿಸಿದರು.

    ಕಾಂಗ್ರೆಸ್ ಸರ್ಕಾರವಿದ್ದಾಗ ಸಮುದಾಯದ ನಾಯಕರನ್ನು ಗುರುತಿಸಿ ವಿವಿಧ ಹುದ್ದೆಗಳನ್ನು ನೀಡಲಾಗಿತ್ತು ಎಂದು ಸ್ಮರಿಸಿದ ಅವರು, ಬಿಜೆಪಿಯು ಕಾಡುಗೊಲ್ಲರಿಗೆ ನೀಡಿರುವ ಸವಲತ್ತುಗಳನ್ನೂ ಕಿತ್ತುಕೊಳ್ಳುತ್ತಿದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.

    ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಕಾರ್ಯಕರ್ತರು ಮತ್ತು ಮುಖಂಡರು ಗೊಲ್ಲರಹಟ್ಟಿ ಗೆ ಬರದಂತೆ ತಡೆಯುವ ಸಂದರ್ಭ ಬಂದರೂ ಬರಬಹುದು ಎಂದು ಅವರು ಎಚ್ಚರಿಸಿದರು.

    ಕೇವಲ ಒಬ್ಬ ಜನಪ್ರತಿನಿಧಿ ಮಾತು ಕೇಳಿ ಕಾಡು ಗೊಲ್ಲರನ್ನು ಎಸ್ ಟಿ ಪಟ್ಟಿಯಿಂದ ತಡೆ ಹಿಡಿದಿರುವುದು ದುರದೃಷ್ಟಕರ. ಬಿಜೆಪಿ ಸರ್ಕಾರವು ಕಾಡು ಗೊಲ್ಲರನ್ನು ಎಸ್ ಟಿಗೆ ಸೇರಿಸದಿದ್ದರೆ ಕಾಡುಗೊಲ್ಲರು ದೊಡ್ಡ ಆಂದೋಲನ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

    ವರದಿ: ಮುರುಳಿಧರನ್ ಆರ್, ಚಿತ್ರದುರ್ಗ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ

    November 9, 2025

    ಸರಗೂರು :  ಕನಕದಾಸರು ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಮತ್ತು ದಾರ್ಶನಿಕ 15 — 16ನೇ ಶತಮಾನದಲ್ಲಿ ಜಾತಿ…

    ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು ಕನಕದಾಸರು: ಎಂ.ಬಿ.ಆನಂದ

    November 9, 2025

    ರಾಜ್ಯ ಮಟ್ಟದ ಕನ್ನಡ ಸೇವಾರತ್ನ ಪ್ರಶಸ್ತಿಗೆ ಡಾ.ಸತ್ಯಕ್ಕ ಗಡ್ಡೆ ಆಯ್ಕೆ

    November 9, 2025

    ನರಹಂತಕ ವ್ಯಾಘ್ರನ ಸೆರೆ: ಜನರ ನಿದ್ದೆಗೆಡಿಸಿದ 9 ವರ್ಷದ ಹುಲಿಯನ್ನು ಹಿಡಿದ ಅರಣ್ಯ ಇಲಾಖೆ

    November 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.