nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ

    April 1, 2026

    ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    • ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ
    • ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ
    • ಮಂಡ್ಯದಲ್ಲಿ ಟ್ರಂಪ್ ವಿರುದ್ಧ ಗುಡುಗಿದ ವಾಟಾಳ್ ನಾಗರಾಜ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ ಪುರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಕಾಳಜಿ ಫೌಂಡೇಶನ್ ಒತ್ತಾಯ
    ಮಧುಗಿರಿ January 17, 2025

    ಮಧುಗಿರಿ ಪುರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಕಾಳಜಿ ಫೌಂಡೇಶನ್ ಒತ್ತಾಯ

    By adminJanuary 17, 2025No Comments3 Mins Read
    karadipura

    ಮಧುಗಿರಿ: ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಪುರಸಭೆ  ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಕಾಳಜಿ ಫೌಂಡೇಶನ್ (ರಿ) ತುಮಕೂರು ತಂಡ ಮನವಿ ಮಾಡಿದೆ.

    ಮಧುಗಿರಿ ಪುರಸಭೆ ವ್ಯಾಪ್ತಿಯಲ್ಲಿ, ವಿಶೇಷವಾಗಿ 23ನೇ ವಾರ್ಡ್‌ನಲ್ಲಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನವರಿ 16ರಂದು ಸಂಜೆ ಎಸ್.ಎಂ. ಕೃಷ್ಣ ಬಡಾವಣೆಯ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಶಾಲೆ ಮುಗಿಸಿ ಮನೆಗೆ ತೆರಳುವಾಗ, ಶಾಲೆಯಿಂದ ಸುಮಾರು 700 ಮೀಟರ್ ದೂರದಲ್ಲಿ ಎರಡು ನಾಯಿಗಳು ಆಕೆಯ ಮೇಲೆ ಬೀದಿನಾಯಿಯೊಂದು ದಾಳಿ ನಡೆಸಿದ್ದು, ಈ ವೇಳೆ ಸ್ಥಳದಲ್ಲಿದ್ದ ಕಾಳಜಿ ಪೌಂಡೇಶನ್ (ರಿ) ತುಮಕೂರು ಇದರ ಸಂಘಟನಾ ಕಾರ್ಯದರ್ಶಿ  ಮಧುಗಿರಿ ಮಹೇಶ್ ವಿದ್ಯಾರ್ಥಿನಿಯನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.


    Provided by
    Provided by

    ಈ ಕುರಿತು ತಕ್ಷಣ ಪುರಸಭೆ ಆರೋಗ್ಯ ನಿರೀಕ್ಷಕರಿಗೆ ಮಾಹಿತಿ ನೀಡಿದಾಗ, ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಬಂದು, ನಾಯಿಗಳನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಕೆಲವರು ನಾಯಿಯನ್ನು ಹಿಡಿಯದಂತೆ ಜಗಳ ಮಾಡಿದ್ದರಿಂದ  ಸಿಬ್ಬಂದಿ ಹಿಂಜರಿಯುವಂತಾಯಿತು. ಹೀಗಾಗಿ  ನಾಯಿಗಳನ್ನು ಸುರಕ್ಷಿತವಾಗಿ ಹಿಡಿಯಲು ಪುರಸಭಾ ಸಿಬ್ಬಂದಿಗೆ ಪೊಲೀಸ್ ರಕ್ಷಣೆ ಒದಗಿಸಿ, ಸಾರ್ವಜನಿಕರ ಸುರಕ್ಷತೆಗಾಗಿ ತಕ್ಷಣ ಸೂಕ್ತ ಕ್ರಮ ವಹಿಸುವಂತೆ ಅವರು ಮನವಿ ಮಾಡಿದ್ದಾರೆ.

    ವಾಟ್ಸಾಪ್ ಗ್ರೂಪ್ ನಲ್ಲಿ ಚರ್ಚೆ:

    ಮಧುಗಿರಿ ಪಟ್ಟಣದ 23ನೇ ವಾರ್ಡ್‌ನಲ್ಲಿ ನಾಯಿಗಳ ಹಾವಳಿಯ ಕುರಿತು ಕಾಳಜಿ ತಂಡ ತುಮಕೂರು ಜಿಲ್ಲೆ ಎಂಬ ವಾಟ್ಸಾಪ್ ಗುಂಪಿನಲ್ಲಿ ಈ ಸಮಸ್ಯೆಯ ಬಗ್ಗೆ ಸದಸ್ಯರು ಚರ್ಚೆ ನಡೆಸಿದ್ದಾರೆ.  ಸಾರ್ವಜನಿಕರ ಸುರಕ್ಷತೆಯನ್ನು ಸುಧಾರಿಸಲು ಸಂಬಂಧಪಟ್ಟವರಿಗೆ  ದೂರು ಸಲ್ಲಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈಗಾಗಲೇ ಸಂಘಟನಾ ಕಾರ್ಯದರ್ಶಿ ಮಧುಗಿರಿ ಮಹೇಶ್ ಅವರು ಮಧುಗಿರಿ ಪುರಸಭಾ ಕಾರ್ಯಾಲಯಕ್ಕೆ ನಾಯಿಗಳ ಹಾವಳಿಯ ನಿಯಂತ್ರಣಕ್ಕಾಗಿ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ. ಇನ್ನಾದರೂ ಬೀದಿನಾಯಿಗಳ ಹಾವಳಿಗೆ ಬ್ರೇಕ್ ಬೀಳುತ್ತಾ ಕಾದು ನೋಡಬೇಕಿದೆ.

     

    ಸಂಬಂಧಪಟ್ಟ ಇಲಾಖೆಯವರು ಹೆಚ್ಚಿನ ಗಮನ ಕೊಟ್ಟು ಬೀದಿನಾಯಿ ಕಾಟ ತಪ್ಪಿಸಿ, ಶಾಲಾ ಮಕ್ಕಳ ಮೇಲೆ ಇದೇ ಮೊದಲ ಬಾರಿಗೆ ಬೀದಿನಾಯಿಗಳು ದಾಳಿ ಮಾಡಿವೆ. ನಾವು ಬೈಕ್ ಗಳಲ್ಲಿ ಹೋಗುವಾಗಲೂ ನಾಯಿ ಓಡಿಸಿಕೊಂಡು ಬರುತ್ತವೆ.  ಕೆಲವೊಮ್ಮೆ ಗಾಡಿಯಿಂದ ಬೀಳುವ ಅವಕಾಶಗಳೂ ಇರುತ್ತವೆ.  ಬೀದಿ ನಾಯಿಯನ್ನು ಸಾಕುತ್ತಿರುವವರಿಗೆ ನಾಯಿಯನ್ನು ಕಟ್ಟಿಹಾಕಿ ಎಂದು ತಿಳಿಸಿದ್ದೇವೆ. ಪುರಸಭೆಯವರು, ಪಶುಸಂಗೋಪನಾ ಇಲಾಖೆಯವರು  ಈ ಬಗ್ಗೆ ಗಮನ ವಹಿಸಬೇಕು.

    —  ಶ್ರೀಧರ್, ಶಾಲೆಯ ಮುಖ್ಯ ಶಿಕ್ಷಕ


    ಬೀದಿನಾಯಿಗಳ ದಾಳಿಯಿಂದಾಗಿ ಮಕ್ಕಳ ಪೋಷಕರು ಆತಂಕದಲ್ಲಿದ್ದಾರೆ. ಸಂಬಂಧಪಟ್ಟ ಪುರಸಭೆ ಮುಖ್ಯಾಧಿಕಾರಿಗಳು ಮತ್ತು ಪಶುವೈದ್ಯ ಇಲಾಖಾ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮವಹಿಸಿ, ಬೀದಿ ನಾಯಿಗಳ ಹಾವಳಿಯಿಂದ ಮಕ್ಕಳ ರಕ್ಷಣೆ ಮಾಡಬೇಕು. ಮಕ್ಕಳಿಗಾಗುವ ಅನಾಹುತಗಳನ್ನು ತಪ್ಪಿಸಬೇಕು.

    — ಹನುಮಂತರಾಯಪ್ಪ, ಬಿ.ಇ.ಒ.


    ಕರಡಿಪುರ ವ್ಯಾಪ್ತಿಯಲ್ಲಿ  ಶಾಲಾ ಮಗುವಿನ ಮೇಲೆ ನಾಯಿ ದಾಳಿ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ. ಹಿಂದೆ ಸಹ ನಮ್ಮ ಸಿಬ್ಬಂದಿಗಳನ್ನು ಅಲ್ಲಿಗೆ ಕಳುಹಿಸಿ ಯಾವ ನಾಯಿಗಳು, ಯಾವ ಥರ ಇದ್ದಾವೆ ಎನ್ನುವುದರ ಬಗ್ಗೆ ಮಾಹಿತಿ ಸಂಗ್ರಹಿಸಿದ್ದೇವೆ. ಪಶುವೈದ್ಯ ಇಲಾಖೆಯವರೊಂದಿಗೆ ಚರ್ಚೆ ಮಾಡಿ, ಪಟ್ಟಣ ವ್ಯಾಪ್ತಿಯಲ್ಲಿ ಹೆಚ್ಚು ನಾಯಿಗಳಾಗಿದ್ದಾವೆ, ಈ ಬಗ್ಗೆ ಹಿಂದೆ ನಾವು ಟೆಂಡರ್ ಪ್ರಕ್ರಿಯೆ ಕರೆದಿದ್ವಿ, ಯಾರೂ ಪಾಲ್ಗೊಂಡಿಲ್ಲ, ಮತ್ತೆ ಟೆಂಡರ್ ಕರೆದು ಆದಷ್ಟು ಬೇಗ, ನಾಯಿಗಳಿಗೆ ಸಂತನಾಹರಣ ಶಸ್ತ್ರ ಚಿಕಿತ್ಸೆ ನಡೆಸಲು ಕ್ರಮವಹಿಸುತ್ತೇವೆ.

    —  ಸುರೇಶ್, ಪುರಸಭೆ ಮುಖ್ಯಾಧಿಕಾರಿ


     

    ಮಗುವಿನ ಮೇಲೆ ನಾಯಿ ದಾಳಿ ಮಾಡಿರುವುದು ಅತ್ಯಂತ ಭಯಭೀತವಾದ ಪರಿಸ್ಥಿತಿ ನಿರ್ಮಾಣ ಮಾಡಿದೆ. ಇಲ್ಲಿ ಮಕ್ಕಳಿಗೆ ಓಡಾಡಲು ಒಂದು ಸುರಕ್ಷಿತ ವಾತಾವರಣವನ್ನು ಸ್ಥಳೀಯ ಆಡಳಿತ ನಿರ್ಮಾಣ ಮಾಡಿಲ್ಲ.  ಅಲ್ಲಿ ಆಡಳಿತ ಅಧಿಕಾರಿ, ನಾವು ನಾಯಿ ಹಿಡಿಯಲು ಟೆಂಡರ್ ಕರೆದಿದ್ವಿ ಆದರೆ ಯಾರೂ ಬಂದಿಲ್ಲ, ಹಾಗಾಗಿ ಮತ್ತೆ ಕರಿತೀನಿ ಅಂತಾರೆ,  ಅಷ್ಟರಲ್ಲಿ ಎಷ್ಟು ಮಕ್ಕಳು ಆ ಬೀದಿ ನಾಯಿಗಳಿಗೆ ಬಲಿಯಾಗುತ್ತಾರೋ?  ಅದನ್ನು ಯೋಚನೆ ಮಾಡಬೇಕಿದೆ. ಬಿಇಒ ಹಾಗೂ ಮುಖ್ಯ ಶಿಕ್ಷಕರು ಅಸಹಾಯಕತೆಯಿಂದ ಕೈಚೆಲ್ಲಿದ್ದಾರೆ. ಹಾಗಾಗಿ ಪುರಸಭೆಯವರು ತಕ್ಷಣವೇ ಕ್ರಮಕೈಗೊಳ್ಳಬೇಕು. ಈಗಾಗಲೇ ನಾವು ಕಾಳಜಿ ತಂಡದಿಂದ ಮನವಿ  ಕೂಡ ನೀಡಿದ್ದೇವೆ.  ಬಡವರ ಮಕ್ಕಳನ್ನು ಬದುಕಲು ಬಿಡಿ, ನಾಯಿಗಳ ಹಾವಳಿಯನ್ನು ನಿಯಂತ್ರಣ ಮಾಡಿ,  ಸಾಕು ನಾಯಿಗಳಿದ್ದರೆ, ಮಾಲಿಕರಿಗೆ ಕಡ್ಡಾಯವಾಗಿ ನಿರ್ದೇಶನ ನೀಡಿ,  ಮಕ್ಕಳನ್ನು ನಾಯಿಗಳಿಂದ ರಕ್ಷಿಸಿ,  ಮುಂದಿನ ದಿನಗಳಲ್ಲಿ ನಾಯಿ ಯಾವುದೇ ಮಕ್ಕಳ ಮೇಲೆ ದಾಳಿ ಮಾಡಿದರೆ ಕಾಳಜಿ ತಂಡ ನಿಮ್ಮ ವಿರುದ್ಧವೇ ಪ್ರಕರಣ ದಾಖಲು ಮಾಡುತ್ತದೆ.

    —  ಶಿವಕುಮಾರ್ ಮೇಷ್ಟ್ರು ಮನೆ

    ಕಾನೂನು ಸಲಹೆಗಾರರು/ ನಿರ್ದೇಶಕರು, ಕಾಳಜಿ ಪೌಂಡೇಶನ್ (ರಿ) ತುಮಕೂರು

     

     


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ನಮ್ಮ ತುಮಕೂರು: ಶ್ರೀ ಶಿವಕುಮಾರ್ ಸ್ವಾಮೀಜಿಯವರು ಕೇವಲ ಒಬ್ಬ ಸಂತನಲ್ಲ, ಬದಲಾಗಿ ನಮ್ಮ ರಾಷ್ಟ್ರದ ಆತ್ಮಕ್ಕೆ ಸ್ವರೂಪ ನೀಡಿದ ಮಹಾನ್…

    ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ

    April 1, 2026

    ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.