nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026
    Facebook Twitter Instagram
    ಟ್ರೆಂಡಿಂಗ್
    • ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ
    • ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ
    • ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ
    • ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು
    • ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    • ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
    • ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ ಪುರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಕಾಳಜಿ ಫೌಂಡೇಶನ್ ಒತ್ತಾಯ
    ಮಧುಗಿರಿ January 17, 2025

    ಮಧುಗಿರಿ ಪುರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಕಾಳಜಿ ಫೌಂಡೇಶನ್ ಒತ್ತಾಯ

    By adminJanuary 17, 2025No Comments3 Mins Read
    karadipura

    ಮಧುಗಿರಿ: ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಪುರಸಭೆ  ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಕಾಳಜಿ ಫೌಂಡೇಶನ್ (ರಿ) ತುಮಕೂರು ತಂಡ ಮನವಿ ಮಾಡಿದೆ.

    ಮಧುಗಿರಿ ಪುರಸಭೆ ವ್ಯಾಪ್ತಿಯಲ್ಲಿ, ವಿಶೇಷವಾಗಿ 23ನೇ ವಾರ್ಡ್‌ನಲ್ಲಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನವರಿ 16ರಂದು ಸಂಜೆ ಎಸ್.ಎಂ. ಕೃಷ್ಣ ಬಡಾವಣೆಯ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಶಾಲೆ ಮುಗಿಸಿ ಮನೆಗೆ ತೆರಳುವಾಗ, ಶಾಲೆಯಿಂದ ಸುಮಾರು 700 ಮೀಟರ್ ದೂರದಲ್ಲಿ ಎರಡು ನಾಯಿಗಳು ಆಕೆಯ ಮೇಲೆ ಬೀದಿನಾಯಿಯೊಂದು ದಾಳಿ ನಡೆಸಿದ್ದು, ಈ ವೇಳೆ ಸ್ಥಳದಲ್ಲಿದ್ದ ಕಾಳಜಿ ಪೌಂಡೇಶನ್ (ರಿ) ತುಮಕೂರು ಇದರ ಸಂಘಟನಾ ಕಾರ್ಯದರ್ಶಿ  ಮಧುಗಿರಿ ಮಹೇಶ್ ವಿದ್ಯಾರ್ಥಿನಿಯನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

    ಈ ಕುರಿತು ತಕ್ಷಣ ಪುರಸಭೆ ಆರೋಗ್ಯ ನಿರೀಕ್ಷಕರಿಗೆ ಮಾಹಿತಿ ನೀಡಿದಾಗ, ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಬಂದು, ನಾಯಿಗಳನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಕೆಲವರು ನಾಯಿಯನ್ನು ಹಿಡಿಯದಂತೆ ಜಗಳ ಮಾಡಿದ್ದರಿಂದ  ಸಿಬ್ಬಂದಿ ಹಿಂಜರಿಯುವಂತಾಯಿತು. ಹೀಗಾಗಿ  ನಾಯಿಗಳನ್ನು ಸುರಕ್ಷಿತವಾಗಿ ಹಿಡಿಯಲು ಪುರಸಭಾ ಸಿಬ್ಬಂದಿಗೆ ಪೊಲೀಸ್ ರಕ್ಷಣೆ ಒದಗಿಸಿ, ಸಾರ್ವಜನಿಕರ ಸುರಕ್ಷತೆಗಾಗಿ ತಕ್ಷಣ ಸೂಕ್ತ ಕ್ರಮ ವಹಿಸುವಂತೆ ಅವರು ಮನವಿ ಮಾಡಿದ್ದಾರೆ.

    ವಾಟ್ಸಾಪ್ ಗ್ರೂಪ್ ನಲ್ಲಿ ಚರ್ಚೆ:

    ಮಧುಗಿರಿ ಪಟ್ಟಣದ 23ನೇ ವಾರ್ಡ್‌ನಲ್ಲಿ ನಾಯಿಗಳ ಹಾವಳಿಯ ಕುರಿತು ಕಾಳಜಿ ತಂಡ ತುಮಕೂರು ಜಿಲ್ಲೆ ಎಂಬ ವಾಟ್ಸಾಪ್ ಗುಂಪಿನಲ್ಲಿ ಈ ಸಮಸ್ಯೆಯ ಬಗ್ಗೆ ಸದಸ್ಯರು ಚರ್ಚೆ ನಡೆಸಿದ್ದಾರೆ.  ಸಾರ್ವಜನಿಕರ ಸುರಕ್ಷತೆಯನ್ನು ಸುಧಾರಿಸಲು ಸಂಬಂಧಪಟ್ಟವರಿಗೆ  ದೂರು ಸಲ್ಲಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈಗಾಗಲೇ ಸಂಘಟನಾ ಕಾರ್ಯದರ್ಶಿ ಮಧುಗಿರಿ ಮಹೇಶ್ ಅವರು ಮಧುಗಿರಿ ಪುರಸಭಾ ಕಾರ್ಯಾಲಯಕ್ಕೆ ನಾಯಿಗಳ ಹಾವಳಿಯ ನಿಯಂತ್ರಣಕ್ಕಾಗಿ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ. ಇನ್ನಾದರೂ ಬೀದಿನಾಯಿಗಳ ಹಾವಳಿಗೆ ಬ್ರೇಕ್ ಬೀಳುತ್ತಾ ಕಾದು ನೋಡಬೇಕಿದೆ.

     

    ಸಂಬಂಧಪಟ್ಟ ಇಲಾಖೆಯವರು ಹೆಚ್ಚಿನ ಗಮನ ಕೊಟ್ಟು ಬೀದಿನಾಯಿ ಕಾಟ ತಪ್ಪಿಸಿ, ಶಾಲಾ ಮಕ್ಕಳ ಮೇಲೆ ಇದೇ ಮೊದಲ ಬಾರಿಗೆ ಬೀದಿನಾಯಿಗಳು ದಾಳಿ ಮಾಡಿವೆ. ನಾವು ಬೈಕ್ ಗಳಲ್ಲಿ ಹೋಗುವಾಗಲೂ ನಾಯಿ ಓಡಿಸಿಕೊಂಡು ಬರುತ್ತವೆ.  ಕೆಲವೊಮ್ಮೆ ಗಾಡಿಯಿಂದ ಬೀಳುವ ಅವಕಾಶಗಳೂ ಇರುತ್ತವೆ.  ಬೀದಿ ನಾಯಿಯನ್ನು ಸಾಕುತ್ತಿರುವವರಿಗೆ ನಾಯಿಯನ್ನು ಕಟ್ಟಿಹಾಕಿ ಎಂದು ತಿಳಿಸಿದ್ದೇವೆ. ಪುರಸಭೆಯವರು, ಪಶುಸಂಗೋಪನಾ ಇಲಾಖೆಯವರು  ಈ ಬಗ್ಗೆ ಗಮನ ವಹಿಸಬೇಕು.

    —  ಶ್ರೀಧರ್, ಶಾಲೆಯ ಮುಖ್ಯ ಶಿಕ್ಷಕ


    ಬೀದಿನಾಯಿಗಳ ದಾಳಿಯಿಂದಾಗಿ ಮಕ್ಕಳ ಪೋಷಕರು ಆತಂಕದಲ್ಲಿದ್ದಾರೆ. ಸಂಬಂಧಪಟ್ಟ ಪುರಸಭೆ ಮುಖ್ಯಾಧಿಕಾರಿಗಳು ಮತ್ತು ಪಶುವೈದ್ಯ ಇಲಾಖಾ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮವಹಿಸಿ, ಬೀದಿ ನಾಯಿಗಳ ಹಾವಳಿಯಿಂದ ಮಕ್ಕಳ ರಕ್ಷಣೆ ಮಾಡಬೇಕು. ಮಕ್ಕಳಿಗಾಗುವ ಅನಾಹುತಗಳನ್ನು ತಪ್ಪಿಸಬೇಕು.

    — ಹನುಮಂತರಾಯಪ್ಪ, ಬಿ.ಇ.ಒ.


    ಕರಡಿಪುರ ವ್ಯಾಪ್ತಿಯಲ್ಲಿ  ಶಾಲಾ ಮಗುವಿನ ಮೇಲೆ ನಾಯಿ ದಾಳಿ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ. ಹಿಂದೆ ಸಹ ನಮ್ಮ ಸಿಬ್ಬಂದಿಗಳನ್ನು ಅಲ್ಲಿಗೆ ಕಳುಹಿಸಿ ಯಾವ ನಾಯಿಗಳು, ಯಾವ ಥರ ಇದ್ದಾವೆ ಎನ್ನುವುದರ ಬಗ್ಗೆ ಮಾಹಿತಿ ಸಂಗ್ರಹಿಸಿದ್ದೇವೆ. ಪಶುವೈದ್ಯ ಇಲಾಖೆಯವರೊಂದಿಗೆ ಚರ್ಚೆ ಮಾಡಿ, ಪಟ್ಟಣ ವ್ಯಾಪ್ತಿಯಲ್ಲಿ ಹೆಚ್ಚು ನಾಯಿಗಳಾಗಿದ್ದಾವೆ, ಈ ಬಗ್ಗೆ ಹಿಂದೆ ನಾವು ಟೆಂಡರ್ ಪ್ರಕ್ರಿಯೆ ಕರೆದಿದ್ವಿ, ಯಾರೂ ಪಾಲ್ಗೊಂಡಿಲ್ಲ, ಮತ್ತೆ ಟೆಂಡರ್ ಕರೆದು ಆದಷ್ಟು ಬೇಗ, ನಾಯಿಗಳಿಗೆ ಸಂತನಾಹರಣ ಶಸ್ತ್ರ ಚಿಕಿತ್ಸೆ ನಡೆಸಲು ಕ್ರಮವಹಿಸುತ್ತೇವೆ.

    —  ಸುರೇಶ್, ಪುರಸಭೆ ಮುಖ್ಯಾಧಿಕಾರಿ


     

    ಮಗುವಿನ ಮೇಲೆ ನಾಯಿ ದಾಳಿ ಮಾಡಿರುವುದು ಅತ್ಯಂತ ಭಯಭೀತವಾದ ಪರಿಸ್ಥಿತಿ ನಿರ್ಮಾಣ ಮಾಡಿದೆ. ಇಲ್ಲಿ ಮಕ್ಕಳಿಗೆ ಓಡಾಡಲು ಒಂದು ಸುರಕ್ಷಿತ ವಾತಾವರಣವನ್ನು ಸ್ಥಳೀಯ ಆಡಳಿತ ನಿರ್ಮಾಣ ಮಾಡಿಲ್ಲ.  ಅಲ್ಲಿ ಆಡಳಿತ ಅಧಿಕಾರಿ, ನಾವು ನಾಯಿ ಹಿಡಿಯಲು ಟೆಂಡರ್ ಕರೆದಿದ್ವಿ ಆದರೆ ಯಾರೂ ಬಂದಿಲ್ಲ, ಹಾಗಾಗಿ ಮತ್ತೆ ಕರಿತೀನಿ ಅಂತಾರೆ,  ಅಷ್ಟರಲ್ಲಿ ಎಷ್ಟು ಮಕ್ಕಳು ಆ ಬೀದಿ ನಾಯಿಗಳಿಗೆ ಬಲಿಯಾಗುತ್ತಾರೋ?  ಅದನ್ನು ಯೋಚನೆ ಮಾಡಬೇಕಿದೆ. ಬಿಇಒ ಹಾಗೂ ಮುಖ್ಯ ಶಿಕ್ಷಕರು ಅಸಹಾಯಕತೆಯಿಂದ ಕೈಚೆಲ್ಲಿದ್ದಾರೆ. ಹಾಗಾಗಿ ಪುರಸಭೆಯವರು ತಕ್ಷಣವೇ ಕ್ರಮಕೈಗೊಳ್ಳಬೇಕು. ಈಗಾಗಲೇ ನಾವು ಕಾಳಜಿ ತಂಡದಿಂದ ಮನವಿ  ಕೂಡ ನೀಡಿದ್ದೇವೆ.  ಬಡವರ ಮಕ್ಕಳನ್ನು ಬದುಕಲು ಬಿಡಿ, ನಾಯಿಗಳ ಹಾವಳಿಯನ್ನು ನಿಯಂತ್ರಣ ಮಾಡಿ,  ಸಾಕು ನಾಯಿಗಳಿದ್ದರೆ, ಮಾಲಿಕರಿಗೆ ಕಡ್ಡಾಯವಾಗಿ ನಿರ್ದೇಶನ ನೀಡಿ,  ಮಕ್ಕಳನ್ನು ನಾಯಿಗಳಿಂದ ರಕ್ಷಿಸಿ,  ಮುಂದಿನ ದಿನಗಳಲ್ಲಿ ನಾಯಿ ಯಾವುದೇ ಮಕ್ಕಳ ಮೇಲೆ ದಾಳಿ ಮಾಡಿದರೆ ಕಾಳಜಿ ತಂಡ ನಿಮ್ಮ ವಿರುದ್ಧವೇ ಪ್ರಕರಣ ದಾಖಲು ಮಾಡುತ್ತದೆ.

    —  ಶಿವಕುಮಾರ್ ಮೇಷ್ಟ್ರು ಮನೆ

    ಕಾನೂನು ಸಲಹೆಗಾರರು/ ನಿರ್ದೇಶಕರು, ಕಾಳಜಿ ಪೌಂಡೇಶನ್ (ರಿ) ತುಮಕೂರು

     

     


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


    Provided by
    Provided by
    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Food

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಟೊಮೆಟೊ ಮತ್ತು ಮೊಟ್ಟೆಯ ಸ್ಕ್ರ್ಯಾಂಬಲ್ (Tomato Scrambled Eggs) ಎನ್ನುವುದು ಚೀನಾದ ಮನೆಗಳಲ್ಲಿ ಅತ್ಯಂತ ಸುಲಭವಾಗಿ ಮತ್ತು ಅಗ್ಗವಾಗಿ ಮಾಡುವ…

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು

    July 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.