nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ

    March 18, 2026
    Facebook Twitter Instagram
    ಟ್ರೆಂಡಿಂಗ್
    • ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!
    • ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ
    • ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ
    • ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ
    • ಸರಗೂರು: ಕಾಡಾನೆಗಳ ಹಿಂಡಿನಿಂದ ದಾಳಿ: 1000 ಬಾಳೆ ಗಿಡಗಳು ನಾಶ
    • ಪ್ರಾಣಿ ಬಲಿ: ಪ್ರತಿ ಜಾತ್ರೆಯೂ ರಕ್ತ ಮುಕ್ತ ಸುಕ್ಷೇತ್ರವಾಗಬೇಕು: ದಯಾನಂದ ಸ್ವಾಮೀಜಿ
    • SSLC: ತುಮಕೂರು ಜಿಲ್ಲೆಯಲ್ಲಿ 131 ಪರೀಕ್ಷಾ ಕೇಂದ್ರಗಳು: ಪರೀಕ್ಷೆ ಬರೆಯಲಿರುವ 37,130 ವಿದ್ಯಾರ್ಥಿಗಳು
    • ಶಿರಾ ಎಪಿಎಂಸಿ: ಹುಣಸೆಹಣ್ಣು ಬೆಲೆ ದಿಢೀರ್ ಕುಸಿತ; ರೈತರ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದಿರಾ ಕ್ಯಾಂಟೀನ್ ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ
    ಕೊರಟಗೆರೆ January 22, 2022

    ಇಂದಿರಾ ಕ್ಯಾಂಟೀನ್ ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ

    By adminJanuary 22, 2022No Comments2 Mins Read
    indira canteen

    ಕೊರಟಗೆರೆ: ಬಡವರ ಕಲ್ಯಾಣಕ್ಕಾಗಿ ಕಡಿಮೆ ದರದಲ್ಲಿ ರಿಯಾಯಿತಿ ನೀಡಿ ಶುದ್ಧ ಆಹಾರವನ್ನು ಬಡವರ, ನಿರ್ಗತಿಕರ, ಕೂಲಿ ಕಾರ್ಮಿಕರ, ಬೀದಿಬದಿ ವ್ಯಾಪಾರಿಗಳ, ಶ್ರಮಿಕರ ಮತ್ತು  ಸಾರ್ವಜನಿಕರಿಗೆ ಹೊಟ್ಟೆ ಹಸಿವು ನೀಗಿಸಲು  ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿರವರ ಹೆಸರಿನಲ್ಲಿ ಹಸಿದವರಿಗೆ ಆಹಾರ  ನೀಡಲು ‘ಇಂದಿರಾ ಕ್ಯಾಂಟೀನ್’ ಎಂಬ ಮಹತ್ವದ ಯೋಜನೆ  ಜಾರಿಗೆ ತಂದಿದ್ದರು.

    ಬೆಳಿಗ್ಗೆಯ ತಿಂಡಿಗೆ 5 ರೂ. ನಿಗದಿ ಪಡಿಸಿ ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ 10 ರೂ.ಗಳನ್ನು ನಿಗದಿ ಪಡಿಸಿದ್ದರು. ಇಂದಿರಾ ಗಾಂಧಿರವರ ಸ್ಮರಣಾರ್ಥವಾಗಿ ಅವರ ಹೆಸರಿನಲ್ಲಿ ಈ ಇಂದಿರಾ ಕ್ಯಾಂಟೀನ್ ಯೋಜನೆಯನ್ನು  ಸಿದ್ದರಾಮಯ್ಯ ರಾಜ್ಯಾದ್ಯಂತ ಜಿಲ್ಲಾ ತಾಲ್ಲೂಕು ಮತ್ತು ನಗರ ಪ್ರದೇಶಗಳಲ್ಲಿ ಕಾರ್ಯರೂಪಕ್ಕೆ ತಂದಿದ್ದರು.


    Provided by
    Provided by

    ರಾಜ್ಯದಲ್ಲಿ ಹಸಿವಿನಿಂದ ಯಾರು ಇರಬಾರದೆಂಬ ಆಶಯದಿಂದ ಇಂದಿರಾ ಕ್ಯಾಂಟೀನ್ ರಾಜ್ಯಾದ್ಯಂತ ಸ್ಥಾಪಿಸಲಾಗಿತ್ತು. ಕೊರಟಗೆರೆ ತಾಲ್ಲೂಕಿನಲ್ಲಿಯೂ ಸಹ ಡಾ.ಜಿ.ಪರಮೇಶ್ವರ್ ಒಂದು ಇಂದಿರಾ ಕ್ಯಾಂಟೀನ್ ತೆರೆಯಲು ಚಾಲನೆ ನೀಡಿದ್ದರು.

    ಮೊದಮೊದಲು ಶುಚಿಯಾಗಿ ರುಚಿ ರುಚಿಯಾಗಿ ಆಹಾರವನ್ನು ತಯಾರಿಸಿ ಬಡವರಿಗೆ ಕಡಿಮೆ ದರದಲ್ಲಿ ಆಹಾರ ಪೂರೈಕೆ ಮಾಡುತ್ತಿದ್ದರು. ಆದರೆ ಬರುಬರುತ್ತ ಕೊರಟಗೆರೆಯ  ಇಂದಿರಾ ಕ್ಯಾಂಟೀನ್ ನಲ್ಲಿ ಶುದ್ಧವಿಲ್ಲದ, ರುಚಿ ಇಲ್ಲದ, ಪೌಷ್ಟಿಕ ಪದಾರ್ಥಗಳಿಲ್ಲದ ಆಹಾರವನ್ನು  ವಿತರಿಸಲಾಗುತ್ತಿದೆ.

    ಈ ಘಟನೆ ಬೆಳಕಿಗೆ ಬಂದ ತಕ್ಷಣವೇ ತಾಲ್ಲೂಕು ಜನಸ್ನೇಹಿ ತಹಸೀಲ್ದಾರ್ ನಹೀದಾ ಜಮ್ ಜಮ್ ಭೇಟಿ ನೀಡಿ, ಆಹಾರದ ಗುಣಮಟ್ಟವನ್ನು ಖುದ್ದು ತಾವೇ ಆಹಾರವನ್ನು ಸೇವಿಸಿ ಪರಿಶೀಲಿಸಿದರು .ನಂತರ ಆಹಾರದಲ್ಲಿ ರುಚಿ-ಶುಚಿ ಇಲ್ಲದ್ದನ್ನು ಪ್ರಶ್ನಿಸಿದರು. ನಂತರ ಸಾಂಬಾರಿನಲ್ಲಿ ತರಕಾರಿ ಮತ್ತು  ಕಾಳುಗಳು ಗುಣಮಟ್ಟದಲ್ಲಿ ಇಲ್ಲವೆಂದು ಸಿಬ್ಬಂದಿಗಳ ಮೇಲೆ   ಹರಿಹಾಯ್ದರು. ನಂತರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ್ ಸ್ಥಳಕ್ಕೆ ಬಂದು ಎಲ್ಲವನ್ನು ಪರಿಶೀಲಿಸಿ ಸಂಬಂಧಪಟ್ಟವರಿಗೆ ನೋಟಿಸ್ ನೀಡಿದರು.

    ನಂತರ ತಹಸೀಲ್ದಾರ್ ನಾಹೀದ ಜಮ್ ಜಮ್ ಮಾತನಾಡಿ, ಇಂದಿರಾ ಕ್ಯಾಂಟೀನ್ ನಲ್ಲಿ ಕುಡಿಯಲು ನೀರು ಇಲ್ಲ ಗುಣಮಟ್ಟದ  ಆಹಾರ ಪೂರೈಕೆ ಆಗುತ್ತಿಲ್ಲ. ತರಕಾರಿ ಮತ್ತು ಕಾಳುಗಳಿಲ್ಲದೆ ರುಚಿ ಇಲ್ಲದ ಆಹಾರವನ್ನು ನೀಡುತ್ತಿದ್ದಾರೆ ಆದ್ದರಿಂದ ಸಂಬಂಧ ಪಟ್ಟವರಿಗೆ ನೋಟಿಸ್ ಸೂಚಿಸಿದ್ದೇವೆ ಎಂದು ತಿಳಿಸಿದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 16, 2026

    ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ

    March 16, 2026

    ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ

    March 11, 2026

    Leave A Reply Cancel Reply

    Our Picks

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ಮತ್ತು ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ‘ಕೆಡಿ-ದಿ ಡೆವಿಲ್’ ಚಿತ್ರದ “ಸರ್ಸೆ ನಿನ್ನ ಸೆರಗ…

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ

    March 18, 2026

    ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ

    March 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.