nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026
    Facebook Twitter Instagram
    ಟ್ರೆಂಡಿಂಗ್
    • ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ
    • ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!
    • ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ
    • ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ
    • ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್
    • ಶಿಕ್ಷಣದ ಜೊತೆಗೆ ಕಲೆಗೆ ಮಹತ್ವ ನೀಡಿದಾಗಲೇ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ
    • ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
    • ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದಿರಾ ಕ್ಯಾಂಟೀನ್ ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ
    ಕೊರಟಗೆರೆ January 22, 2022

    ಇಂದಿರಾ ಕ್ಯಾಂಟೀನ್ ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ

    By adminJanuary 22, 2022No Comments2 Mins Read
    indira canteen

    ಕೊರಟಗೆರೆ: ಬಡವರ ಕಲ್ಯಾಣಕ್ಕಾಗಿ ಕಡಿಮೆ ದರದಲ್ಲಿ ರಿಯಾಯಿತಿ ನೀಡಿ ಶುದ್ಧ ಆಹಾರವನ್ನು ಬಡವರ, ನಿರ್ಗತಿಕರ, ಕೂಲಿ ಕಾರ್ಮಿಕರ, ಬೀದಿಬದಿ ವ್ಯಾಪಾರಿಗಳ, ಶ್ರಮಿಕರ ಮತ್ತು  ಸಾರ್ವಜನಿಕರಿಗೆ ಹೊಟ್ಟೆ ಹಸಿವು ನೀಗಿಸಲು  ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿರವರ ಹೆಸರಿನಲ್ಲಿ ಹಸಿದವರಿಗೆ ಆಹಾರ  ನೀಡಲು ‘ಇಂದಿರಾ ಕ್ಯಾಂಟೀನ್’ ಎಂಬ ಮಹತ್ವದ ಯೋಜನೆ  ಜಾರಿಗೆ ತಂದಿದ್ದರು.

    ಬೆಳಿಗ್ಗೆಯ ತಿಂಡಿಗೆ 5 ರೂ. ನಿಗದಿ ಪಡಿಸಿ ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ 10 ರೂ.ಗಳನ್ನು ನಿಗದಿ ಪಡಿಸಿದ್ದರು. ಇಂದಿರಾ ಗಾಂಧಿರವರ ಸ್ಮರಣಾರ್ಥವಾಗಿ ಅವರ ಹೆಸರಿನಲ್ಲಿ ಈ ಇಂದಿರಾ ಕ್ಯಾಂಟೀನ್ ಯೋಜನೆಯನ್ನು  ಸಿದ್ದರಾಮಯ್ಯ ರಾಜ್ಯಾದ್ಯಂತ ಜಿಲ್ಲಾ ತಾಲ್ಲೂಕು ಮತ್ತು ನಗರ ಪ್ರದೇಶಗಳಲ್ಲಿ ಕಾರ್ಯರೂಪಕ್ಕೆ ತಂದಿದ್ದರು.


    Provided by
    Provided by

    ರಾಜ್ಯದಲ್ಲಿ ಹಸಿವಿನಿಂದ ಯಾರು ಇರಬಾರದೆಂಬ ಆಶಯದಿಂದ ಇಂದಿರಾ ಕ್ಯಾಂಟೀನ್ ರಾಜ್ಯಾದ್ಯಂತ ಸ್ಥಾಪಿಸಲಾಗಿತ್ತು. ಕೊರಟಗೆರೆ ತಾಲ್ಲೂಕಿನಲ್ಲಿಯೂ ಸಹ ಡಾ.ಜಿ.ಪರಮೇಶ್ವರ್ ಒಂದು ಇಂದಿರಾ ಕ್ಯಾಂಟೀನ್ ತೆರೆಯಲು ಚಾಲನೆ ನೀಡಿದ್ದರು.

    ಮೊದಮೊದಲು ಶುಚಿಯಾಗಿ ರುಚಿ ರುಚಿಯಾಗಿ ಆಹಾರವನ್ನು ತಯಾರಿಸಿ ಬಡವರಿಗೆ ಕಡಿಮೆ ದರದಲ್ಲಿ ಆಹಾರ ಪೂರೈಕೆ ಮಾಡುತ್ತಿದ್ದರು. ಆದರೆ ಬರುಬರುತ್ತ ಕೊರಟಗೆರೆಯ  ಇಂದಿರಾ ಕ್ಯಾಂಟೀನ್ ನಲ್ಲಿ ಶುದ್ಧವಿಲ್ಲದ, ರುಚಿ ಇಲ್ಲದ, ಪೌಷ್ಟಿಕ ಪದಾರ್ಥಗಳಿಲ್ಲದ ಆಹಾರವನ್ನು  ವಿತರಿಸಲಾಗುತ್ತಿದೆ.

    ಈ ಘಟನೆ ಬೆಳಕಿಗೆ ಬಂದ ತಕ್ಷಣವೇ ತಾಲ್ಲೂಕು ಜನಸ್ನೇಹಿ ತಹಸೀಲ್ದಾರ್ ನಹೀದಾ ಜಮ್ ಜಮ್ ಭೇಟಿ ನೀಡಿ, ಆಹಾರದ ಗುಣಮಟ್ಟವನ್ನು ಖುದ್ದು ತಾವೇ ಆಹಾರವನ್ನು ಸೇವಿಸಿ ಪರಿಶೀಲಿಸಿದರು .ನಂತರ ಆಹಾರದಲ್ಲಿ ರುಚಿ-ಶುಚಿ ಇಲ್ಲದ್ದನ್ನು ಪ್ರಶ್ನಿಸಿದರು. ನಂತರ ಸಾಂಬಾರಿನಲ್ಲಿ ತರಕಾರಿ ಮತ್ತು  ಕಾಳುಗಳು ಗುಣಮಟ್ಟದಲ್ಲಿ ಇಲ್ಲವೆಂದು ಸಿಬ್ಬಂದಿಗಳ ಮೇಲೆ   ಹರಿಹಾಯ್ದರು. ನಂತರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ್ ಸ್ಥಳಕ್ಕೆ ಬಂದು ಎಲ್ಲವನ್ನು ಪರಿಶೀಲಿಸಿ ಸಂಬಂಧಪಟ್ಟವರಿಗೆ ನೋಟಿಸ್ ನೀಡಿದರು.

    ನಂತರ ತಹಸೀಲ್ದಾರ್ ನಾಹೀದ ಜಮ್ ಜಮ್ ಮಾತನಾಡಿ, ಇಂದಿರಾ ಕ್ಯಾಂಟೀನ್ ನಲ್ಲಿ ಕುಡಿಯಲು ನೀರು ಇಲ್ಲ ಗುಣಮಟ್ಟದ  ಆಹಾರ ಪೂರೈಕೆ ಆಗುತ್ತಿಲ್ಲ. ತರಕಾರಿ ಮತ್ತು ಕಾಳುಗಳಿಲ್ಲದೆ ರುಚಿ ಇಲ್ಲದ ಆಹಾರವನ್ನು ನೀಡುತ್ತಿದ್ದಾರೆ ಆದ್ದರಿಂದ ಸಂಬಂಧ ಪಟ್ಟವರಿಗೆ ನೋಟಿಸ್ ಸೂಚಿಸಿದ್ದೇವೆ ಎಂದು ತಿಳಿಸಿದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ

    January 16, 2026

    ಮಾದೇನಹಳ್ಳಿ: ಮುಖ್ಯ ಶಿಕ್ಷಕಿ ಗುಣಶೀಲರವರಿಗೆ ಬೀಳ್ಕೊಡುಗೆ: ಸುಮಾರು 14 ವರ್ಷಗಳಿಂದ ಸೇವೆ

    January 15, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಐತಿಹಾಸಿಕ ಇತಿಹಾಸ ಪ್ರಸಿದ್ಧ ಶ್ರೀಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ರಥೋತ್ಸವಕ್ಕೂ ಮೊದಲು ಮಕರ ಸಂಕ್ರಾತಿ…

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026

    ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ

    January 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.