nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026
    Facebook Twitter Instagram
    ಟ್ರೆಂಡಿಂಗ್
    • ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ
    • ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಕ್ಕರೆನಾಡಲ್ಲಿ ವಿಚಿತ್ರ ಕಳ್ಳತನ ಪ್ರಕರಣ: ಕಳ್ಳತನಕ್ಕೆ ಬಂದು ಅಡುಗೆ ಮಾಡಿ ತಿಂದ ಆಸಾಮಿ
    ರಾಜ್ಯ ಸುದ್ದಿ February 25, 2022

    ಸಕ್ಕರೆನಾಡಲ್ಲಿ ವಿಚಿತ್ರ ಕಳ್ಳತನ ಪ್ರಕರಣ: ಕಳ್ಳತನಕ್ಕೆ ಬಂದು ಅಡುಗೆ ಮಾಡಿ ತಿಂದ ಆಸಾಮಿ

    By adminFebruary 25, 2022No Comments2 Mins Read
    anganawadi

    ಸಾಮಾನ್ಯವಾಗಿ ದೊಡ್ಡ ದೊಡ್ಡ ಅಂಗಡಿಗಳು, ಸ್ಥಿತಿವಂತರ ಮನೆಯಲ್ಲಿ ಕಳ್ಳತನ ಆಗುವ ಘಟನೆಗಳ ಬಗ್ಗೆ ನಿತ್ಯ ಕೇಳುತ್ತೇವೆ. ಆದರೆ, ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ವಿಚಿತ್ರ ಕಳ್ಳತನದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಳ್ಳತನಕ್ಕಾಗಿ ಬಂದ ಕಳ್ಳನಿಗೆ ಯಾವುದೇ ಬೆಲೆ ಬಾಳುವ ವಸ್ತು ಸಿಗದಿದ್ದಾಗ ಆತ ಮಾಡಿದ್ದೇನು ಎಂದು ತಿಳಿದರೆ ನೀವು ಆಚ್ಚರಿ ಪಡಬಹುದು. ಜೊತೆಗೆ ಇವನೆಂತ ಆಸಾಮಿ ಎಂದೂ ಅನಿಸಬಹುದು.

    ವಾಸ್ತವವಾಗಿ, ಇಲ್ಲೊಬ್ಬ ಕಳ್ಳ ಅಂಗನವಾಡಿಯಲ್ಲಿ ಕನ್ನ ಹಾಕಲು ಯೋಜನೆ (Robbery In Anganwadi) ರೂಪಿಸಿದ್ದ. ಕಳ್ಳತನಕ್ಕೆಂದು ಬಂದಿದ್ದ ಕಳ್ಳನಿಗೆ ಅಲ್ಲಿ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಗದ ಕಾರಣ ಅಲ್ಲಿದ್ದ ಪದಾರ್ಥದಲ್ಲೆ ಅಡುಗೆ ಮಾಡಿ ತಿಂದು ಹೋಗಿದ್ದಾನೆ. ಹೋಗುವ ಮುನ್ನ ಅಲ್ಲಿದ್ದ ಪುಸ್ತಕದಲ್ಲಿ ಮೂರು ಪುಟಗಳ ಪತ್ರ ಬರೆದು, ತನ್ನ ಜೀವನದ ಪ್ರಮುಖ ಘಟನೆಗಳು ಸೇರಿದಂತೆ ತನ್ನ ಅನಿಸಿಕೆ ಬರೆದು ಹೋಗಿದ್ದಾನೆ ಎನ್ನಲಾಗಿದೆ.ಹೌದು, ಈ ಘಟನೆ ವಿಚಿತ್ರ ಎಂದೆನಿಸಿದರೂ ಸತ್ಯ. ಮಂಡ್ಯ (Mandya) ಜಿಲ್ಲೆ ಮಳವಳ್ಳಿ ತಾಲೂಕಿನ ಹೆಬ್ಬಣಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಗ್ರಾಮದ ಶಿಂಷಾ ರಸ್ತೆಯಲ್ಲಿದ್ದ ಅಂಗನವಾಡಿ ಕೇಂದ್ರಕ್ಕೆ ತಡರಾತ್ರಿ ಕಳ್ಳನೋರ್ವ ಅಂಗನಾಡಿ ಕೇಂದ್ರದ ಬಾಗಿಲು ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾನೆ. ಅಂಗನವಾಡಿ ಕೇಂದ್ರದಲ್ಲಿದ್ದ ಬೀರುವಿನ‌ ಬಾಗಿಲು ಮರಿದು ಹಣಕ್ಕಾಗಿ ತಡಕಾಟ ನಡೆಸಿದ್ದಾನೆ. ಆದರೆ ಕಪಾಟಿನಲ್ಲಿ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಗದ್ದಾಗ ಕಡೆಗೆ ಅಲ್ಲೇ ಇದ್ದ ಅಡುಗೆ ಸಾಮಾಗ್ರಿಗಳನ್ನೂ ಬಳಸಿಕೊಂಡು ಅಡುಗೆ ಮಾಡಿ ಊಟ ಮಾಡಿ ಹೋಗಿದ್ದಾನೆ ಎಂದು ಹೇಳಲಾಗಿದೆ.


    Provided by
    Provided by

    ಅಂಗನವಾಡಿಯಲ್ಲಿ ಅಡುಗೆ ಮಾಡಿ, ಊಟ ಮಾಡಿದ ಬಳಿಕ ಈ ಆಸಾಮಿ ಕಳ್ಳ ಅಲ್ಲೇ ಇದ್ದ
    ನೋಟ್ ಪುಸ್ತಕ ತೆಗೆದುಕೊಂಡು ಆ ನೋಟ್ ಪುಸ್ತಕದಲ್ಲಿ ಮುದ್ದಾದ ಬರಹದಲ್ಲಿ ಮೂರು ಪುಟಗಳಷ್ಟು ತನ್ನ ಜೀವನದ ಪ್ರಮುಖ ಘಟನೆಗಳನ್ನು ಬರೆದಿದ್ದಾನೆ ಎನ್ನಲಾಗಿದೆ. ಬೆಳಿಗ್ಗೆ ಎಂದಿನಂತೆ ಅಂಗನವಾಡಿ ಕಾರ್ಯಕರ್ತೆ ಅಂಗನವಾಡಿ ಬಾಗಿಲು ತೆರೆಯಲು ಬಂದಾಗ ಈ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ಥಳೀಯ ಪಂಡಿತಹಳ್ಳಿ ಗ್ರಾ. ಪಂ. ಪಿಡಿಒ ಮಹದೇವರವರಿಗೆ ಅಂಗನವಾಡಿ ಕಾರ್ಯಕರ್ತೆ ಈ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪಿಡಿಒ ಶಿಕ್ಷಕಿಯ ಜೊತೆ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

    ಈ ವಿಚಿತ್ರ ಕಳ್ಳತ‌ನದ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಮಳವಳ್ಳಿ ಗ್ರಾಮಾಂತರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಕುರಿತಂತೆ ತನಿಖೆ ಮುಂದುವರೆದಿದ್ದು ಈ ವಿಚಿತ್ರ ಕಳ್ಳನಿಗಾಗಿ ಶೋಧ ಕಾರ್ಯ ಮುಂದುವರೆಸಲಾಗಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    Leave A Reply Cancel Reply

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ಸರಗೂರು:  ತಾಲ್ಲೂಕಿನ ಹುಲ್ಲೇಮಾಳ ಗ್ರಾಮದಲ್ಲಿ ರಾಗಿ ಮೆದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಮಾರು 5 ಎಕರೆ ರಾಗಿ ಮೆದೆ ಸಂಪೂರ್ಣ…

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.