nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026
    Facebook Twitter Instagram
    ಟ್ರೆಂಡಿಂಗ್
    • ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್
    • ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ
    • ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
    • ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    • ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನಕಪುರ ಬೆಂಗಳೂರು ಸೇರುತ್ತದೆ, ಬೆಂಗಳೂರಿಗರಿಗೆ ನಿಮ್ಮ ಭೂಮಿ ಮಾರಾಟ ಮಾಡಬೇಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು
    ರಾಜ್ಯ ಸುದ್ದಿ October 24, 2023

    ಕನಕಪುರ ಬೆಂಗಳೂರು ಸೇರುತ್ತದೆ, ಬೆಂಗಳೂರಿಗರಿಗೆ ನಿಮ್ಮ ಭೂಮಿ ಮಾರಾಟ ಮಾಡಬೇಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

    By adminOctober 24, 2023No Comments2 Mins Read
    dk shikumar

    ಕನಕಪುರ: ಶಿವನಹಳ್ಳಿ ಗ್ರಾಮ ಹೆದ್ದಾರಿಯ ಪಕ್ಕದಲ್ಲಿದೆ, ಯಾವುದೇ ಕಾರಣಕ್ಕೂ ಭೂಮಿಯನ್ನು ಬೆಂಗಳೂರಿಗರಿಗೆ ಮಾರಾಟ ಮಾಡಬೇಡಿ ಎಂದು ಗ್ರಾಮಸ್ಥರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು.

    ಶಿವನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಭೂಮಿ ಪೂಜೆ ಮತ್ತು ಶಿಲಾ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಕೆಎಂಎಫ್ ಡೇರಿ ಇದೆ, ಕನಕಪುರ ಪಟ್ಟಣವಾಗಿ ಇಲ್ಲಿಯ ತನಕ ಬೆಳೆಯಲಿದೆ ಆದ್ದರಿಂದ, ಎಲ್ಲರಲ್ಲಿ ಮನವಿ ಮಾಡುತ್ತೇನೆ, ಭೂಮಿ ಮಾರಾಟ ಮಾಡಬೇಡಿ. ಸಿಂಧ್ಯಾ ಅವರು ಇದನ್ನೇ ದಶಕಗಳಿಂದ ಹೇಳುತ್ತಾ ಬಂದಿದ್ದರು ಎಂದರು.


    Provided by
    Provided by

    ನಿಮ್ಮ ಜೇಬಿಗೆ ನಾನು ನೇರವಾಗಿ ದುಡ್ಡು ಹಾಕಲು, ಮನೆ ಕಟ್ಟಿಸಿಕೊಡಲು ಆಗುವುದಿಲ್ಲ, ನಿಮ್ಮ ಆಸ್ತಿ ಮೌಲ್ಯಗಳನ್ನ ಹತ್ತು ಪಟ್ಟು ಹೆಚ್ಚು ಮಾಡುವ ಶಕ್ತಿ ದೇವರು ನೀಡಿದ್ದಾನೆ. ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ವಿದ್ಯೆ ನೀಡಬಹುದು ಅಷ್ಟೇ. ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಿ ಎಂದು ಕಿವಿಮಾತು ಹೇಳಿದರು.

    ಒಂದಲ್ಲ ಒಂದು ದಿನ ಇಲ್ಲಿನ ಗ್ರಾಮಗಳು ಬೆಂಗಳೂರು ಆಗೇ ಆಗುತ್ತವೆ, ಪ್ರತಿ ಅಡಿ ಲೆಕ್ಕದಲ್ಲಿ ಬೆಲೆ ಕಟ್ಟಲಾಗುತ್ತದೆ. ಆದ ಕಾರಣ ನನ್ನ ಮಾತನ್ನು ನೆನಪಿನಲ್ಲಿ ಇಟ್ಟುಕೊಳ್ಳಿ, ಕನಕಪುರ ಜಿಲ್ಲಾ ಕೇಂದ್ರ ಮಾಡುವ ಕುರಿತು ಸಾರ್ವಜನಿಕವಾಗಿ ಚರ್ಚೆ ಮಾಡಲು ಹೋಗುವುದಿಲ್ಲ ಎಂದರು.

    ಹಿಂದೂ ಧರ್ಮದಲ್ಲಿ ಸಾವಿರಾರು ದೇವರುಗಳನ್ನು ಪೂಜಿಸಿಕೊಂಡು ಬರುತ್ತಿರುವ ವಿಚಿತ್ರ ಆಚರಣೆ,‌ ನಂಬಿಕೆ ಮಾಡಿಕೊಂಡು ಬಂದಿದ್ದೇವೆ. ಬೇರೆಯವರೆಲ್ಲಾ ಒಂದೇ ದೇವರು ಪೂಜಿಸುತ್ತಾರೆ. ಭಕ್ತಿಗೆ ಯಾವುದೇ ದೇವರಿಲ್ಲ ಎಂದು ನುಡಿದರು.

    ವೀರಭದ್ರ ಶಿವನ ಸ್ವರೂಪ, ದೇವರುಗಳನ್ನೇ ಕಾಪಾಡುವ ದೇವರು ಈತ. ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿಯೊಂದೇ, ಕರ್ಮ ಯಾವುದಾದರೂ ನಿಷ್ಠೆಯೊಂದೆ, ದೇವನೊಬ್ಬ ನಾಮ ಹಲವು ಎನ್ನುವ ಮಾತಿನಂತೆ ನಾವು ನಡೆಯಬೇಕು ಎಂದು ತಿಳಿಸಿದರು.

    ವೀರಭದ್ರ ದೇವಸ್ಥಾನ ಉಳಿಸಲು ಸಾಕಷ್ಟು ಪ್ರಯತ್ನ ಮಾಡಲಾಯಿತು. ಸಂಸದರಾದ ಡಿ.ಕೆ.ಶಿವಕುಮಾರ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಬಳಿ ಮಾತನಾಡಿದರು, ಯೋಜನಾ ನಕ್ಷೆ ಬದಲಾಯಿಸಲು ಆಗಲಿಲ್ಲ. ಈಗ ಆ ದೇವರ ಅನುಗ್ರಹದಿಂದ ಹೊಸ ದೇವಸ್ಥಾನ ನಿರ್ಮಾಣವಾಗುತ್ತಿದೆ ಎಂದರು.

    ಎಲ್ಲರ ಕೈಗಳು ಇರುವುದು ಕಾಯಕ ಮಾಡಲು, ದಾನ‌ಮಾಡಲು, ಡಿ.ಕೆ.ಶಿವಕುಮಾರ್, ಪಿ.ಜಿ.ಆರ್.ಸಿಂಧ್ಯಾ ಎಲ್ಲರ ಕೈಗಳು ಇರುವುದೇ ದಾನ ಮಾಡಲು. ದೇವರ ಕೆಲಸ ಮಾಡುವುದು ನಮ್ಮೆಲ್ಲರ ಕರ್ತವ್ಯ. ಕನಕಪುರ ತಾಲೂಕಿನಲ್ಲಿ ಸುಮಾರು 300 ಕ್ಕೂ ಹೆಚ್ಚು ದೇವಸ್ಥಾನಗಳಿಗೆ ಹೊಸ ರೂಪ ಕೊಟ್ಟಿದ್ದೇವೆ. ನಾವು ಈ ಕ್ಷೇತ್ರದ ಪ್ರತಿನಿಧಿಯಾದ ಮೇಲೆ ಎಷ್ಟು ದೇವಾಲಯಗಳನ್ನು ಜೀರ್ಣೋದ್ಧಾರ ಮಾಡಿರುವ ಕುರಿತು ಪುಸ್ತಕವನ್ನೇ ಬರೆಯಬಹುದು ಎಂದರು.

    ಪ್ರಸ್ತುತ ವೀರಭದ್ರನ ದೇವಸ್ಥಾನಕ್ಕೆ ಎಷ್ಟು ಸಹಾಯ ಮಾಡುತ್ತೇನೆ ಎಂದು ಸಾರ್ವಜನಿಕವಾಗಿ ಹೇಳುವುದಿಲ್ಲ. ನಂತರ ಅದನ್ನೇ ಒಂದು ದೊಡ್ಡ ಸುದ್ದಿ ಮಾಡುತ್ತಾರೆ. ನಮಗೆ ವಿಚಾರ, ಆಚಾರ ಮುಖ್ಯ. ಪ್ರಚಾರವಲ್ಲ, ಈ ದೇವಸ್ಥಾನದಲ್ಲಿ ಪ್ರತಿ ಕುಟುಂಬದ ಹಣವಿರಬೇಕು ಎಂದು ತಿಳಿಸಿದರು.

    ಉಪಮುಖ್ಯಮಂತ್ರಿ ಸ್ಥಾನ ಬೆಂಗಳೂರಿಗೆ ಸೀಮಿತಿ. ಇದು ನನ್ನ ಊರಿನ ಕೆಲಸ. ನಮ್ಮ ಕ್ಷೇತ್ರದ ಯಾವುದೇ ಕೆಲಸ ಇದ್ದರು ನಾವು ಹಿಂಜರಿಯುವುದಿಲ್ಲ, ಆದ ಕಾರಣ ಮೈಸೂರಿನಲ್ಲಿ ಪ್ರಮುಖ ಕೆಲಸವಿದ್ದರೂ ನಾನು ನಮ್ಮ ಕ್ಷೇತ್ರಕ್ಕೆ ಬಂದೆ ಎಂದು ಹೇಳಿದರು.

    8 ನೇ ಬಾರಿ ಗೆದ್ದ ನಂತರ ನನ್ನ ಮೊದಲ ಬಾರಿಗೆ ಧಾರ್ಮಿಕ ಕೆಲಸಕ್ಕೆ ಬಂದಿದ್ದೇನೆ. ಹೆಚ್ಚು ಕೆಲಸ ಮಾಡುವ ಶಕ್ತಿ ಆ ದೇವರು, ನಮಗೆ, ನಿಮಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ‌. ಉದಾರ ಮನಸ್ಸಿನಿಂದ ಈ ದೇವಸ್ಥಾನ ಕಟ್ಟಲು ಎಲ್ಲರೂ ಸಹಾಯ ಮಾಡಬೇಕು ಎಂದರು.

    ಕಬ್ಬಾಳಮ್ಮನ ದೇವಸ್ಥಾನ ಜೀರ್ಣೋದ್ಧಾರ ಮಾಡುವ ವೇಳೆ, ಒಂದಷ್ಟು ಜನ ದೇವಿಯನ್ನು ಮುಟ್ಟಬೇಡ, ಸುಟ್ಟು ಹೋಗುವೆ ಎಂದರು. ನಂತರ, ನಾನು ನೊಣವಿನಕೆರೆ ಸ್ವಾಮೀಜಿಗಳ ಬಳಿ ಈ ವಿಚಾರ ಪ್ರಸ್ತಾಪ ಮಾಡಿದಾಗ ಒಬ್ಬರ ಹೆಸರು ಸೂಚಿಸಿ ಇವರ ಕಡೆಯಿಂದ ನೆರವೇರಿ ಭಿನ್ನ ಮಾಡು ಎಂದರು. ಈಗ ಅದ್ಭುತವಾದ ದೇವಸ್ಥಾನ ನಿರ್ಮಾಣವಾಗಿದೆ ಎಂದರು.

    ನಿಂಬೆಗಿಂ ಹುಳಿಯಿಲ್ಲ, ತುಂಬೆಗಿಂ ಕರಿದಿಲ್ಲ, ನಂಬಿಗೆಯಿಂದಧಿಕ ಗುಣವಿಲ್ಲ, ದೈವವುಂ ಶುಭವಿಂದಿಲ್ಲ ಸರ್ವಜ್ಞ ಎನ್ನುವ ಮಾತಿನಂತೆ ಶಿವನಿಗಿಂತ ದೊಡ್ಡ ದೇವರಿಲ್ಲ, ನಂಬಿಕೆಗಿಂತ ದೊಡ್ಡ ದೇವರಿಲ್ಲ, ಆದ ಕಾರಣ ಎಲ್ಲರೂ ನಂಬಿಕೆಯಿಟ್ಟು ಕೆಲಸ ಮಾಡಿ ಎಂದು ಹೇಳಿದರು.

    admin
    • Website

    Related Posts

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ನೀಡಿರುವ ವಾಗ್ದಾನವಾಗಿದ್ದು, ಆರ್ಥಿಕ ಹೊರೆಯಾದರೂ ಸಹ ಕೊಟ್ಟ…

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.