nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಳೆಯಿಂದ ಕಂದೇಗಾಲ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ
    ತುಮಕೂರು February 17, 2025

    ನಾಳೆಯಿಂದ ಕಂದೇಗಾಲ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

    By adminFebruary 17, 2025No Comments2 Mins Read
    h d kote

    Provided by
    Provided by

    ಹೆಗ್ಗನೂರು: ಫೆ.17ರ ಸೋಮವಾರದಿಂದ ಫೆ.19ರ ಬುಧವಾರದವರೆಗೆ ಮೂರು ದಿನಗಳ ಕಾಲ ಕಂದೇಗಾಲ ಶ್ರೀ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಮತ್ತು ದನಗಳ ಪ್ರದರ್ಶನವನ್ನು ಅದ್ಧೂರಿಯಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಸೋಮವಾರದಿಂದ  ಜಾತ್ರೆ ಆರಂಭಗೊಳ್ಳಲಿದೆ.

    ಸರಗೂರು ತಾಲ್ಲೂಕಿನ ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಬಿಡುಗಲು– ಪಡುವಲು ಮಠದ ಮಹಾದೇವಸ್ವಾಮಿಗಳು, ದಡದಹಳ್ಳಿ ಪಟ್ಟದ ಮಠದ ಷಡಕ್ಷಸ್ವಾಮಿಗಳು, ಹಂಚೀಪುರ ಪಟ್ಟದ ಮಠದ ಚನ್ನಬಸವಸ್ವಾಮಿಗಳು, ಬೀಚನಹಳ್ಳಿ ಪುರದ ಮಠದ ನಾಗೇಂದ್ರಸ್ವಾಮಿಗಳು ಮತ್ತು ಜಕ್ಕಹಳ್ಳಿ ಬಿಕ್ಷದ ದಾಸೋಹ ಮಠದ ಶಿವಕುಮಾರಸ್ವಾಮಿಗಳು ನೇತೃತ್ವದಲ್ಲಿ ಹೋಮ ಮತ್ತು ರುದ್ರಾಭಿಷೇಕದ ಮೂಲಕ ಜಾತ್ರೆಯೂ ಪ್ರಾರಂಭಗೊಳ್ಳಲಿದೆ. ಅದೇ ದಿನ ಸಂಜೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

    ಇನ್ನು ಎರಡನೇ ದಿನವಾದ ಮಂಗಳವಾರ ಬೆಳಿಗ್ಗೆ 6 ಗಂಟೆಗೆ ದೇವರಿಗೆ ಅಭಿಷೇಕ ಪೂಜೆ, 9 ಗಂಟೆಗೆ ಹಾಲುಹರವಿ ಸೇವೆ ಮತ್ತು ಕೊಂಡೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೆ ಅದೇ ದಿನ ರಾತ್ರಿ ಸಾಗರೆ ಸುರೇಶ್ ಮತ್ತು ತಂಡದವರಿಂದ ’ಸುಗಮ ಸಂಗೀತಾ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಹಾಗೆಯೇ ಭಕ್ತಿಗೀತೆ, ಜಾನಪದಗೀತೆ, ಹಾಗೂ ಚಲನಚಿತ್ರ ಗೀತೆಗಳು ಕಾರ್ಯಕ್ರಮ ಏರ್ಪಪಡಿಸಲಾಗಿದೆ.

    ಇನ್ನು ಜಾತ್ರೆಯ ಮೂರನೇ ದಿನವಾದ ಬುಧವಾರ ಬೆಳಿಗ್ಗೆ 5 ಗಂಟೆಗೆ ಬಿಲ್ವಾರ್ಚನೆ ಮತ್ತು ದೇವರಿಗೆ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ. ಬೆಳಿಗ್ಗೆ 10 ಗಂಟೆಗೆ ತೆಲಗುಮಸಹಳ್ಳಿ, ಕೂಸಣ್ಣ ತಂಡದವರಿಂದ ಮಹದೇಶ್ವರ ಭಜನೆ ಏರ್ಪಡಿಸಲಾಗಿದೆ. ಹಾಗೂ ಅದೇ ದಿನ ರಾತ್ರಿ 9 ಗಂಟೆಗೆ ಆರ್ಕೆಸ್ಟ್ರಾ ಏರ್ಪಡಿಸಲಾಗಿದುದ, ಜೀ ಕನ್ನಡ ಸರಿಗಮಪ ಖ್ಯಾತಿಯ ಕಂಬದ ರಂಗಯ್ಯ, ಶಿವಾನಿ, ವಿ.ಎಸ್.ಕುಮಾರ್, ಪ್ರೀತಿ ಸಿಂಕನ, ಮಿಮಿಕ್ರಿ ಸುಧಾರಕರ್ ಹಾಗೂ ಡಿಕೆಡಿ ನೃತ್ಯಪಟುಗಳು ಸೇರಿದಂತೆ ಜೂನಿಯರ್ ವಿಷ್ಣುವರ್ಧನ್, ಜೂನಿಯರ್ ಅಂಬರೀಶ್ ಆಗಮಿಸಲಿದ್ದಾರೆ.


    Provided by
    Provided by

    ಅಲ್ಲದೆ ಜಾತ್ರೆಯ ಅಂಗವಾಗಿ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಕಗಳಿಗೆ ೩ ದಿನಗಳ ಕಾಲ ದಾಸೋಹದ ವ್ಯವಸ್ಥೆಯನ್ನೂ ಮಾಡಲಾಗಿದೆ.

    ಜಾತ್ರೆಯ ಅಂಗವಾಗಿ ದೇವಸ್ಥಾನ ಸಮಿತಿಯವತಿಯಿಂದ ಉತ್ತಮ ಹೋರಿಗಳಿಗೆ ಪ್ರಥಮ ಬಹುಮಾನ ೫೦೦೦ ರೂ., ದ್ವಿತೀಯ ಬಹುಮಾನ ೩,೦೦೦ ರೂ., ತೃತೀಯ ಬಹುಮಾನ ೨,೦೦೦ ರೂ. ಜತೆಗೆ ಉತ್ತಮ ಗೂಳಿ ಹಾಗೂ ರಾಸುಗಳಿಗೆ ಪ್ರಥಮ ಬಹುಮಾನ ೨೦ ಗ್ರಾಂ ಬೆಳ್ಳಿ, ದ್ವಿತೀಯ ಬಹುಮಾನ ೧೫ ಗ್ರಾಂ ಬೆಳ್ಳಿ ಹಾಗೂ ತೃತೀಯ ಬಹುಮಾನ ೧೦ ಗ್ರಾಂ ಬೆಳ್ಳಿ ನೀಡಲಾಗುತ್ತಿದೆ.

     

    ಪ್ರತಿವರ್ಷದಂತೆ ಈ ವರ್ಷವೂ ಕಂದೇಗಾಲ ಮಹದೇಶ್ವರ ಸ್ವಾಮಿ ಜಾತ್ರೆಯನ್ನು ವಿಜೃಂಭಣೆಯಿಂದ ಮಾಡಲಾಗುತ್ತಿದೆ. ಹೆಚ್ಚಿನ ಭಕ್ತಿಧಿಗಳು ಆಗಮಿಸಬೇಕು. ರಾಸುಗಳ ಪ್ರದರ್ಶನವೂ ಇರುವುದರಿಂದ ಉತ್ತಮ ರಾಸುಗಳಿಗೆ ಬಹುಮಾನ ನೀಡಲಾಗುವುದು. ಇನ್ನು ಜಾತ್ರೆಗೆ ಎಲ್ಲ ಯುವಕರು, ಗ್ರಾಮಸ್ಥರು ಬೆಂಬಲ ನೀಡಿದ್ದಾರೆ.

    -ಪಾಟೀಲ್ ರಾಜಪ್ಪ, ದೇವಸ್ಥಾನ ಸಮಿತಿ ಅಧ್ಯಕ್ಷರು.


     

    admin
    • Website

    Related Posts

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ

    June 25, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.