ಪಾವಗಡ: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಹತ್ಯೆಯನ್ನು ಖಂಡಿಸಿ ಬಜರಂಗದಳ ಪ್ರತಿಭಟನೆ ನಡೆಸಿದ್ದು, ಆರೋಪಿಗಳನ್ನುಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದೆ.
ಕೃತ್ಯ ಎಸಗಿದ ಆರೋಪಿಗಳನ್ನು ಗಲ್ಲಿಗೇರಿಸುವ ಮೂಲಕ ನೊಂದ ಹಿಂದೂ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಸಹ ಸಂಯೋಜಕರಾದ ಸುಮನ್ ಪಾವಗಡ, ತಾಲೂಕು ಸಂಚಾಲಕರಾದ ಮಂಜುನಾಥ್, ವಾಸು ನಗರ ಸಂಚಾಲಕ ಕಾರ್ತಿಕ್ ಗುಪ್ತಾ ಹಾಗೂ ಶ್ರೀರಾಮ ಸೇನೆ ತಾಲೂಕು ಅಧ್ಯಕ್ಷರಾದ ಕಾವಲಗೆರೆ ರಾಮಾಂಜಿ, ಶೇಖರ್ ಬಾಬು, ಅಲಕುಂದಿ ,ರಘು ಹಾಗೂ ಕಾರ್ಯಕರ್ತರು ಹಾಜರಾಗಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz