nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    • ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಡಗರ ಸಂಭ್ರಮದಿಂದ ನಡೆದ ಕಣಿವೆ ಮಾರಮ್ಮನ ಜಾತ್ರೆ: ಕಾಂಗ್ರೆಸ್ ಮುಖಂಡ ಸೋಮಶೇಖರ್ ಬಿ. ಭಾಗಿ
    ಜಿಲ್ಲಾ ಸುದ್ದಿ May 7, 2022

    ಸಡಗರ ಸಂಭ್ರಮದಿಂದ ನಡೆದ ಕಣಿವೆ ಮಾರಮ್ಮನ ಜಾತ್ರೆ: ಕಾಂಗ್ರೆಸ್ ಮುಖಂಡ ಸೋಮಶೇಖರ್ ಬಿ. ಭಾಗಿ

    By adminMay 7, 2022No Comments2 Mins Read
    kanive maramma

    ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯದ ಕೆಳಭಾಗದಲ್ಲಿರುವ ಕಣಿವೆ ಮಾರಮ್ಮ ದೇವಿಯ ರಥೋತ್ಸವ ಶುಕ್ರವಾರ ಸಾವಿರಾರು ಭಕ್ತರ ಭಕ್ತಿ-ಸಂಭ್ರಮಗಳ ನಡುವೆ ವಿಜೃಂಭಣೆಯಿಂದ ನೆರವೇರಿತು.

    ಒಂದೆಡೆ ಬದುಕಿಗೆ ಕೃಷಿ ನಂಬಿರುವ ರೈತರು ಎತ್ತಿನಗಾಡಿಗಳಲ್ಲಿ ಕುಟುಂಬ ಸಮೇತ ಬಂದು ಒಳ್ಳೆಯ ಮಳೆ-ಬೆಳೆಗೆ ಪ್ರಾರ್ಥಿಸುತ್ತಿದ್ದರೆ, ಮತ್ತೊಂದೆಡೆ ನವ ವಿವಾಹಿತೆಯರು ತವರಿನಿಂದ ಹಸಿರು ಬಳೆ-ಮಡಿಲಕ್ಕಿ ಉಡುಗೊರೆ ಸ್ವೀಕರಿಸಿದರು. ಈ ನಡುವೆ ಎಳೆಯ ಮಕ್ಕಳು ಬೆಂಡು-ಬತ್ತಾಸು ಚಪ್ಪರಿಸುತ್ತ ಸಡಗರದಿಂದ ಓಡಾಡಿದರು.


    Provided by
    Provided by

    ಜಲಾಶಯದಲ್ಲಿ ನೀರಿನಮಟ್ಟ ಕುಸಿದಿರುವ ಕಾರಣ ಜಾತ್ರೆಗೆ ಬಂದ ಭಕ್ತರಲ್ಲಿ ಸ್ವಲ್ಪಮಟ್ಟಿನ ಬೇಸರ ಕಂಡುಬಂತು. ಇವು ಶುಕ್ರವಾರ ತಾಲ್ಲೂಕಿನ ವಾಣಿವಿಲಾಸ ಜಲಾಶಯದ ಕೆಳಭಾಗದಲ್ಲಿರುವ ಕಣಿವೆ ಮಾರಮ್ಮ ದೇವಿಯ ರಥೋತ್ಸವದಲ್ಲಿ ಕಂಡು ಬಂದ ದೃಶ್ಯಗಳು.

    ನೂರಾರು ವರ್ಷದ ಇತಿಹಾಸ ಹೊಂದಿರುವ ಕಣಿವೆ ಮಾರಮ್ಮ ದೇವಿ ವಾಣಿ ವಿಲಾಸ ಜಲಾಶಯದ ರಕ್ಷಕಿ ಎಂಬ ನಂಬಿಕೆ ಇದೆ. ಎರಡು ಗುಡ್ಡಗಳ ನಡುವಿನ ಪ್ರದೇಶದಲ್ಲಿ ವಾಣಿ ವಿಲಾಸ ಅಣೆಕಟ್ಟೆ ನಿರ್ಮಿಸಲಾಗಿದೆ. ಎರಡು ಗುಡ್ಡಗಳ ಕಣಿವೆಯಂತಹ ಪ್ರದೇಶದಲ್ಲಿ ಈ ದೇಗುಲ ಇರುವ ಕಾರಣ ಕಣಿವೆ ಮಾರಮ್ಮ ಎನ್ನುವ ಹೆಸರು ಬಂದಿದೆ ಎನ್ನಲಾಗುತ್ತಿದೆ.

    somashekhar

    ಸ್ಥಳೀಯರಲ್ಲದೆ, ತಮಿಳುನಾಡು, ಆಂಧ್ರಪದೇಶದಿಂದ  ರೈತರು ಈ ಜಾತ್ರೆಗೆ ಬಂದು ಹರಕೆ ಸಲ್ಲಿಸುವುದು ಪ್ರತಿವರ್ಷ ನಡೆದುಕೊಂಡು ಬಂದ ವಾಡಿಕೆ.  ಶುಕ್ರವಾರ ಬೆಳಿಗ್ಗೆ  ದೇವಿಗೆ ತಂಬಿಟ್ಟಿನ ಆರತಿ, ಬೇವಿನ ಸೇವೆ ಸಲ್ಲಿಸಲಾಯಿತು. ಸಂಜೆ ನಾಲ್ಕು ಗಂಟೆಗೆ  ದೇವಿಯ ರಥೋತ್ಸವ ಸಾವಿರಾರು ಭಕ್ತರ ಭಕ್ತಿ-ಸಂಭ್ರಮದ ನಡುವೆ ನೆರವೇರಿತು.

    ಜಾತ್ರೆಯ ಬ್ರಹ್ಮರಥೋತ್ಸವದ ಸಂದರ್ಭದಲ್ಲಿ ಕನ್ನಡಿಗರ ಆರಾಧ್ಯದೈವ ವಾದ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರ ಪ್ರದರ್ಶಿಸಿದ ಪುನೀತ್ ಅಭಿಮಾನಿಗಳು  ಹೇಳಲಾಗದ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದರು.

    ಇದೇ ಸಂದರ್ಭದಲ್ಲಿ ಕಣಿವೆ ಮಾರಮ್ಮನ ಜಾತ್ರೆಗೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಸೋಮಶೇಖರ್ ಬಿ. ಅವರು ಸಹ ಕಣೆವೆ ಮಾರಮ್ಮನ ಜಾತ್ರೆಗೆ ಆಗಮಿಸಿ ದೇವರ ದರ್ಶನ ಪಡೆದುಕೊಂಡರು.

    ಜಾತ್ರೆಗೆ ಆಗಮಿಸಿದ ಕಾಂಗ್ರೆಸ್ ಮುಖಂಡ ಸೋಮಶೇಖರ್ ಬಿ. ಅವರನ್ನು ತಮಟೆ ಡೋಲು ಭಾರಿಸುವುದರ ಮೂಲಕ ಅದ್ದೂರಿಯಾಗಿ  ದೇವಸ್ಥಾನದ ಅರ್ಚಕರು, ಆಡಳಿತ ಮಂಡಳಿಯ ಅಧಿಕಾರಿಗಳು ಸ್ವಾಗತಿಸಿದರು.

    ಇದೇ ಸಂದರ್ಭದಲ್ಲಿ ನಮ್ಮ ತುಮಕೂರು ಮಾಧ್ಯಮದ ಮೂಲಕ ಮಾತನಾಡಿದ ಸ್ಥಳೀಯ ಗ್ರಾಮಸ್ಥರು, ಕಾಂಗ್ರೆಸ್ ಪಕ್ಷದ ಸೋಮಶೇಖರ್ ಬಿ. ಅವರು ಕಳೆದ ಭಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದರು.  ಆದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಿರಿಯೂರು ತಾಲ್ಲೂಕಿನ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾವಣೆಯಲ್ಲಿ ಜಯಶೀಲರಾಗಬೇಕೆಂಬುದೇ ನಮ್ಮೆಲ್ಲರ ಆಸೆಯಾಗಿದೆ ಎಂಬುದಾಗಿ ತಿಳಿಸಿದರು.

    ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡುಗಳು ,  ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಬಿ. ಪಾಪಣ್ಣ ,  ನಿಜಲಿಂಗಪ್ಪ, ಪ್ರಸಾದ್, ಯೋಗೇಶ್ ಡಿ.ಕೆ. , ಅನಿಲ್ ಭೀಮಸಮುದ್ರ, ಇತರರು ಉಪಸ್ಥಿತರಿದ್ದರು.

    ವರದಿ:  ಮುರುಳಿಧರನ್ ಆರ್. ಹಿರಿಯೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

    February 17, 2026

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ

    February 16, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ನವದೆಹಲಿ: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ (India AI Impact Expo 2026)…

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.