ಕೊರಟಗೆರೆ : ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶ್ರೀ ಗೌತಮ ಬುದ್ಧ ಸಾಮಾಜಿಕ-ಶೈಕ್ಷಣಿಕ-ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಕನ್ನಡ ಭಾಷಾ ಕಲಿಕಾ ಶಿಬಿರವನ್ನು ಆಯೋಜಿಸಲಾಗಿತ್ತು.
ಕೊಡಗೆ ತಾಲೂಕಿನ ಕಸ್ಬಾ ಹೋಬಳಿ ಮತ್ತು ಚೆನ್ನರಾಯನದುರ್ಗ ಹೋಬಳಿಯ ವ್ಯಾಪ್ತಿಯಲ್ಲಿ ಬರುವ ಪ್ರೌಢಶಾಲೆಗಳಲ್ಲಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಕಲಿಕಾ ಉತ್ತೇಜನದ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು..
ಈ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ವ್ಯವಸ್ಥಾಪಕರು ಮತ್ತು ಪ್ರಧಾನ ಕಾರ್ಯದರ್ಶಿಗಳು ಕನ್ನಡ ಭಾಷಾ ಕಲಿಕಾ ಶಿಬಿರದ ನೇತೃತ್ವ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್.ಆರ್.ನಾಗರಾಜು , ಉಪನ್ಯಾಸಕರಾದ ನಂಜುಂಡಪ್ಪ ಸುಗ್ಗಯ್ಯ, ಡಾ. ರವಿಕುಮಾರ್, ವೀಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶ್ರೀ ಗೌತಮ ಬುದ್ಧ ಸಾಮಾಜಿಕ ಶೈಕ್ಷಣಿಕ ಸಾಂಸ್ಕೃತಿಕ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಡಾ.ನಾಗರಾಜು ಎನ್. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಕನ್ನಡ ಕೆಲವೊಂದಷ್ಟು ಪಾಠಗಳನ್ನು ಮಾಡುವುದರ ಮೂಲಕ ಕನ್ನಡ ಭಾಷೆಯ ಬಗ್ಗೆ ಅಭಿಮಾನ ತುಂಬುವ ಕೆಲಸ ಮಾಡಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ನ ನಿರ್ದೇಶಕರಾದ ದೇವರಾಜು, ಖಜಾಂಚಿ ಹರೀಶ್ ಕುಮಾರ್, ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಲಕ್ಷ್ಮಿಪುತ್ರ, ಕೋಟೆ ಕಲ್ಲಯ್ಯ, ಧರ್ಮೇಂದ್ರ ಪ್ರಸಾದ್, ಹನುಮಂತರಾಯಪ್ಪ, ನರಸಮ್ಮ, ನರಸಿಂಹಮೂರ್ತಿ, ಸಂಪನ್ಮೂಲ ವ್ಯಕ್ತಿಗಳಾದ ಮಲ್ಲಿಕಾರ್ಜುನಯ್ಯ ಎಂ.ಟಿ., ಶಶಿಕುಮಾರ್ ಹಾಜರಿದ್ದರು.
ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy