ಹಾವೇರಿ: ಕನ್ನಡ ಹೋರಾಟಗಾರರ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯುತ್ತೇವೆ. ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ 100 ಕೋಟಿ ರೂ. ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು , ಸಮ್ಮೇಳನದ ಸರ್ವಾಧ್ಯಕ್ಷರಾದ ದೊಡ್ಡರಂಗೇಗೌಡರಿಗೆ ಅಭಿನಂದನೆಗಳು. ಅವರ ಅಧ್ಯಕ್ಷತೆಯಲ್ಲಿ ಸಮ್ಮೇಳನ ಯಶಸ್ವಿಯಾಗಿ ನಡೆದಿದೆ ಎಂದರು.
ಕಳಸ ಬಂಡೂರಿ ಯೋಜನೆಗೆ ಈಗಾಗಲೇ ಅನುಮತಿ ಸಿಕ್ಕಿದೆ. ಉತ್ತರ ಕರ್ನಾಟಕ ಭಾಗದ ಜನರ ಕನಸು ನನಸಾಗುತ್ತಿದೆ. ಕೃಷ್ಣಾ ಮೇಲ್ದಂಡೆ ಯೋಜನೆಗೂ ಶೀಘ್ರವೇ ಅನುಮತಿ ಸಿಗುವ ಭರವಸೆ ಇದೆ ಎಂದರು.
ಇನ್ನು ಗಡಿನಾಡಿನ ಅಭಿವೃದ್ಧಿಗಾಗಿ ಪ್ರಾಧಿಕಾರಕ್ಕೆ ಈಗಾಗಲೇ 25 ಕೋಟಿ ನೀಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಇನ್ನೂ 100 ಕೋಟಿ ರೂಪಾಯಿ ಅನುದಾನ ನೀಡುತ್ತೇವೆ ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


