ತುಮಕೂರಿನ: ನಗರದ ಸರಸ್ವತಿಪುರಂ ನಲ್ಲಿರುವ ಶ್ರೀ ಸಿದ್ಧಾರ್ಥ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಜಿ.ವಿ.ಆನಂದಮೂರ್ತಿ ರವರು ಕನ್ನಡ ಭಾಷೆಗೆ ಮೂರು ಸಾವಿರ ವರ್ಷಗಳ ಇತಿಹಾಸವಿದೆ, ಈ ಭಾಷೆಗೆ ಕನ್ನಡಗರಲ್ಲದೆ, ಕರ್ನಾಟಕದಲ್ಲಿ ವಾಸಿಸುವ ಎಲ್ಲಾ ಧರ್ಮದವರ ಅಪಾರ ಕೊಡುಗೆ ಇದೆ. ಕನ್ನಡ ಭಾಷೆ ಅಂಧಾಭಿಮಾನ ಬೆಳೆಸುವುದಿಲ್ಲ, ಅದು ವೈಚಾರಿಕ ಪ್ರಜ್ಞೆಯನ್ನು ಬೆಳೆಸುತ್ತದೆ. ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ರವರು, ವಚನಕಾರರು ನಮಗೆ ಮೌಢ್ಯವನ್ನು ಬೆಳೆಸಲಿಲ್ಲ, ವೈಚಾರಿಕತೆಯನ್ನು ಬೆಳೆಸಿದರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಧ್ಯಾಪಕ ಡಾ.ಮಾರುತಿ ಎನ್.ಎನ್. ರವರು ಕನ್ನಡ ನಮ್ಮೆಲ್ಲರ ಅಹಂನಲ್ಲಿ ಬೆರೆಯಬೇಕು, ಕನ್ನಡವನ್ನು ಬೆಳೆಸೋಣ, ಕಲಿಸೋಣ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ತಿಳಿಸಿದರು.
ಕರ್ನಾಟಕದ ಭೂಪಟವನ್ನು ಚಿತ್ರಿಸಿ 69 ಹಣತೆಗಳನ್ನು ಹಚ್ಚುವುದರ ಮೂಲಕ ವಿಶೇಷವಾಗಿ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಸಿದ್ದರಾಜು , ಸಹಾಯಕ ಪ್ರಾಧ್ಯಾಪಕರಾದ ಹೇಮಲತಾ, ಲಲಿತಾ, ಕನ್ಯಾಕುಮಾರಿ. ವಿದ್ಯಾರ್ಥಿಗಳು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q