nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ

    April 16, 2026

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    • ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ
    • ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ರಾಜ್ಯೋತ್ಸವ: ಕೋಟಿ ಕಂಠ ಗಾಯನದಲ್ಲಿ 54 ಲಕ್ಷ ಮಂದಿ ಭಾಗಿ- ಸಚಿವ ಅಶ್ವಥ್ ನಾರಾಯಣ್
    ರಾಜ್ಯ ಸುದ್ದಿ October 12, 2022

    ಕನ್ನಡ ರಾಜ್ಯೋತ್ಸವ: ಕೋಟಿ ಕಂಠ ಗಾಯನದಲ್ಲಿ 54 ಲಕ್ಷ ಮಂದಿ ಭಾಗಿ- ಸಚಿವ ಅಶ್ವಥ್ ನಾರಾಯಣ್

    By adminOctober 12, 2022No Comments2 Mins Read
    ashwathnarayan

    67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆಯಲಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ರಾಜ್ಯದ 25 ಲಕ್ಷ ವಿದ್ಯಾರ್ಥಿಗಳು ಮತ್ತು 2 ಲಕ್ಷ ಸ್ವಸಹಾಯ ಸಂಘಗಳ 29 ಲಕ್ಷ ಸದಸ್ಯರು ಸೇರಿದಂತೆ ತಮ್ಮ ಇಲಾಖೆಗಳ ವ್ಯಾಪ್ತಿಯಿಂದ 54 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿಯಾಲಿದ್ದಾರೆ ಎಂದು ಉನ್ನತ ಶಿಕ್ಷಣ ಮತ್ತು ಜೀವನೋಪಾಯ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

    ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲಕುಮಾರ್ ಅವರೊಂದಿಗೆ ಮಂಗಳವಾರ ಅವರು ಸಭೆ ನಡೆಸಿದರು.  ಬಳಿಕ ಮಾತನಾಡಿದ  ಸಚಿವ ಅಶ್ವಥ್ ನಾರಾಯಣ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆರಿಸಿರುವ 6 ಹಾಡುಗಳನ್ನು ರಾಜ್ಯೋತ್ಸವದಂದು ರಾಜ್ಯದ ಎಲ್ಲಾ ಸರಕಾರಿ ಮತ್ತು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಹಾಡಲಾಗುವುದು. ಜತೆಗೆ ಸಂಜೀವಿನಿ ಸ್ವಸಹಾಯ ಸಂಘಗಳ ಸದಸ್ಯೆಯರು ಕೂಡ ಈ ಸಂಭ್ರಮದ ಭಾಗವಾಗಲಿದ್ದಾರೆ ಎಂದರು.


    Provided by
    Provided by

    ಹೋದ ವರ್ಷದ ರಾಜ್ಯೋತ್ಸವದಲ್ಲಿ ‘ಮಾತಾಡ್ ಮಾತಾಡು ಕನ್ನಡ’ ಕಾರ್ಯಕ್ರಮದಲ್ಲಿ 22 ಲಕ್ಷ ಜನ ಪಾಲ್ಗೊಂಡಿದ್ದರು. ಈ ವರ್ಷ ‘ಕೋಟಿ ಕಂಠ ಗಾಯನದಲ್ಲಿ  ಒಂದು ಕೋಟಿ ಜನ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ರಾಜ್ಯೋತ್ಸವವನ್ನು ಆಜಾದಿ ಕಾ ಅಮೃತ ಮಹೋತ್ಸವಕ್ಕಿಂತ ಹೆಚ್ಚು ಅದ್ದೂರಿಯಾಗಿ ನಡೆಸಲಾಗುವುದು. ಮನೆಮನೆಗಳಲ್ಲೂ ಕನ್ನಡ ಬಾವುಟ ಹಾರಾಡುವಂತೆ ಆಗಬೇಕು ಎನ್ನುವುದು ತಮ್ಮ ಹಂಬಲ ಎಂದು ಅವರು ನುಡಿದರು.

    ಹಿಂದೆ ಕಾಂಗ್ರೆಸ್ ಕಾಲದಲ್ಲಿ ತ್ರಿಭಾಷಾ ಸೂತ್ರದ ಹೆಸರಿನಲ್ಲಿ ಹಿಂದಿಯನ್ನು ಹೇರಲಾಗಿತ್ತು. ಈಗ ವಿದ್ಯಾರ್ಥಿಗಳು ತಮಗೆ ಇಷ್ಟ ಬಂದ ಭಾಷೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಕಾಂಗ್ರೆಸ್ ಮಾಡಿದ ತಪ್ಪುಗಳನ್ನು ನಾವು ಸರಿಪಡಿಸುತ್ತಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

    ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದ ಸಮಿತಿಯು ಇತ್ತೀಚೆಗೆ ಸಲ್ಲಿಸಿರುವ ವರದಿಯಲ್ಲಿ ಹಿಂದಿಯನ್ನು ಕಡ್ಡಾಯ ಮಾಡಿಲ್ಲ. ಈ ಬಗ್ಗೆ ಸುಮ್ಮನೆ ಕಲ್ಪನೆ ಮಾಡಿಕೊಂಡು ಮಾತನಾಡುವುದು ಬೇಡ. ಕನ್ನಡವೂ ಸೇರಿದಂತೆ ಭಾರತೀಯ ಭಾಷೆಗಳ ಮತ್ತು ಸಂಸ್ಕೃತಿಗಳ ಬೆಳವಣಿಗೆಗೆ ಬಿಜೆಪಿ ಬದ್ಧವಾಗಿದೆ ಎಂದು ಅವರು ಪ್ರತಿಪಾದಿಸಿದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ಸುನೀಲಕುಮಾರ್, ಕೋಟಿ ಕಂಠ ಗಾಯನದಲ್ಲಿ ಆರು ಹಾಡುಗಳ ಗಾಯನ ಕಡ್ಡಾಯವಾಗಿದೆ. ನಂತರ ಬೇಕಾದರೆ ಕನ್ನಡಪರವಾದ ಎಷ್ಟು ಗೀತೆಗಳನ್ನು ಬೇಕಾದರೂ ಹಾಡಬಹುದು ಎಂದರು.

    ಐಟಿ, ಬಿಟಿ ಸೇರಿದಂತೆ ಎಲ್ಲಾ ಇಲಾಖೆಗಳನ್ನೂ ರಾಜ್ಯೋತ್ಸವ ಸಂಭ್ರಮದಲ್ಲಿ ಸೇರಿಸಿ ಕೊಳ್ಳಲಾಗುವುದು. ಈ ಸಂಬಂಧ ಸಭೆಗಳನ್ನು ನಡೆಸಲಾಗುವುದು ಎಂದು ಅವರು ತಿಳಿಸಿದರು.

    ಇದೇ ಸಂದರ್ಭದಲ್ಲಿ ‘ನನ್ನ ನಾಡು ನನ್ನ ಹಾಡು’ ಪೋಸ್ಟರ್ ಅನ್ನು ಸಚಿವರು ಬಿಡುಗಡೆ ಮಾಡಿದರು. ಶಾಸಕ ರಾಜಕುಮಾರ ಪಾಟೀಲ್ ಕೂಡ ಇದ್ದರು.

    ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುಳಾ, ಬೆಂಗಳೂರು ನಗರ ವಿವಿ ಕುಲಪತಿ ಪ್ರೊ ಲಿಂಗರಾಜ ಗಾಂಧಿ, ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ ನಿರಂಜನ, ನೃಪತುಂಗ ವಿವಿ ಕುಲಪತಿ ಪ್ರೊ ಶ್ರೀನಿವಾಸ ಬಳ್ಳಿ, ಮಹಾರಾಣಿ ವಿವಿ ಕುಲಪತಿ ಸೇರಿದಂತೆ ಇತರ ಅಧಿಕಾರಿಗಳು ಈ ಸಭೆಯಲ್ಲಿ ಹಾಜರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ

    April 14, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ

    April 16, 2026

    ಮಧುಗಿರಿ: ತಾಲ್ಲೂಕಿನ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಎ.ಎನ್. ಕಾಂತಮ್ಮ (43) ಅವರು ಗುರುವಾರ ಬೆಳಗಿನ…

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.