nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡವೇ ಪ್ರತಿಯೊಬ್ಬರ ಮನೋಧರ್ಮವಾಗಬೇಕು: ಡಾ.ಹೆಚ್.ಕೆ.ನರಸಿಂಹಮೂರ್ತಿ
    ಪಾವಗಡ December 6, 2024

    ಕನ್ನಡವೇ ಪ್ರತಿಯೊಬ್ಬರ ಮನೋಧರ್ಮವಾಗಬೇಕು: ಡಾ.ಹೆಚ್.ಕೆ.ನರಸಿಂಹಮೂರ್ತಿ

    By adminDecember 6, 2024No Comments2 Mins Read
    kannada

    ವೈ.ಎನ್.ಹೊಸಕೋಟೆ : ಕನ್ನಡದ ಉಳಿವಿಗೆ ಕನ್ನಡವೇ ಪ್ರತಿಯೊಬ್ಬರ ಮನೋಧರ್ಮವಾಗಬೇಕು ಎಂದು ಗಡಿನಾಡು ಚಿಂತಕ ಡಾ.ಹೆಚ್.ಕೆ.ನರಸಿಂಹಮೂರ್ತಿ ತಿಳಿಸಿದರು.

    ಕನ್ನಡ ಕಲಾ ಮತ್ತು ಸಾಂಸ್ಕöÈತಿಕ ಮಂಡಲಿಯು ೬೯ನೇ ಕನ್ನಡ ರಾಜ್ಯೋತ್ಸವ ಮತ್ತು ಮಂಡಲಿಯ ೩೮ನೇ ವಾರ್ಷಿಕೋತ್ಸವದ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ನಮ್ಮೂರ ಕನ್ನಡಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶಾಲವಾಗಿ ಹಬ್ಬಿ ಹರಡಿ ಸಮೃದ್ಧವಾಗಿರುವ ಕನ್ನಡ ಸಂಸ್ಕೃತಿಯು ಮತ್ತಷ್ಟು ಪ್ರಬಲವಾಗಲು, ಕನ್ನಡದ ಹೆಮ್ಮೆಯ ಕುವರರು ಹೇಳುವಂತೆ ಕನ್ನಡಿಗರು ವಿಶ್ವಮಾನವರಾಗಬೇಕು. ಜಾತಿ, ಪಕ್ಷ, ಪಂಥ, ಮತಗಳನ್ನು ಮೀರಿ ಕನ್ನಡವೇ ಮನೋಧರ್ಮವಾಗಬೇಕು. ವಿಶೇಷವಾಗಿ ಗಡಿನಾಡಿನಲ್ಲಿ ಭಾಷಾ ಅಸ್ಮಿತೆಯನ್ನು ಉಳಿಸಿಕೊಂಡು ಉಲುಸಾಗಿ ಬೆಳೆಯಲು ಕನ್ನಡ ಕಲಿಯುವುದು ಜೊತೆಗೆ ಕನ್ನಡ ಉಲಿಯುವುದು ಪ್ರತಿಯೊಬ್ಬರ ಅಂತರಾಳದಲ್ಲಿ ಬೇರೂರಬೇಕು ಎಂದು ತಿಳಿಸಿದರು.


    Provided by

    ಕಾರ್ಯಕ್ರಮವನ್ನು ಉದ್ಘಾಟಿಸಿದ ಎನ್.ಆರ್.ಅಶ್ವಥ್ ಕುಮಾರ್ ಮಾತನಾಡಿ, ತೆಲುಗುಮಯವಾಗಿದ್ದ ಈ ಗಡಿಭಾಗದಲ್ಲಿ ಕನ್ನಡ ಕಂಪನ್ನು ಹರಡಿಸಲು ನಿರಂತರ ಕನ್ನಡ ಕಾರ್ಯಕ್ರಮಗಳು ನಡೆಯಬೇಕು. ಸರ್ಕಾರಗಳು ಗಡಿಭಾಗಗಳಿಗೆ ಹೆಚ್ಚು ಒತ್ತು ನೀಡಬೇಕು. ಇಂತಹ ಕಾರ್ಯವನ್ನು ಸ್ಥಳೀಯ ಸಂಘಟನೆ ನಿರಂತರವಾಗಿ ಮಾಡುತ್ತಾ ಬರುತ್ತಿರುವುದು ಹೆಮ್ಮೆಯ ಸಂಗತಿ. ಅದರ ಭಾಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿವರ್ಷ ಕನ್ನಡಶ್ರೀ ಪ್ರಶಸ್ತಿ ನೀಡಿ ಕನ್ನಡ ಜ್ಞಾನ ಬೆಳೆಸುತ್ತಿರುವ ಕಾರ್ಯ ಎಲ್ಲರೂ ಮೆಚ್ಚುವಂತಹದ್ದು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಗ್ರಾ.ಪಂ. ಅಧ್ಯಕ್ಷ ರಾಮಚಂದ್ರಪ್ಪ, ಈ ಗಡಿಭಾಗದಲ್ಲಿ ಕನ್ನಡ ಉಳಿವಿಗೆ ಬೆಳವಿಗೆ ಸತತ ೩೮ ವರ್ಷಗಳಿಂದ ಕನ್ನಡ ಕಲಾ ಮತ್ತು ಸಾಂಸ್ಕೃತಿಕ ಮಂಡಲಿ ಶ್ರಮಿಸುತ್ತಿದ್ದು, ಕನ್ನಡ ವಾತಾವರಣ ಸೃಷ್ಟಿಸುವಲ್ಲಿ ಸಫಲವಾಗಿದೆ ಎಂದು ತಿಳಿಸಿದರು.

    ಕನ್ನಡಶ್ರೀ ಪ್ರಶಸ್ತಿಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಪಿ.ಜಿ.ಕಾವ್ಯ ಮತ್ತು ಧನಲಕ್ಷ್ಮೀ ಕನ್ನಡಶ್ರೀ ೨೦೨೪ ರ ಪ್ರಶಸ್ತಿಯನ್ನು ಪ್ರಥಮ ಸ್ಥಾನ ಪಡೆದ  ವಾಸವಿ ವಿದ್ಯಾನಿಕೇತನ ಶಾಲೆಯ ಅಮೋಘವರ್ಷ ಮತ್ತು ದ್ವಿತೀಯ ಸ್ಥಾನ ಪಡೆದ ರಾಷ್ಟ್ರೀಯ ವಿದ್ಯಾಪೀಠ ಶಾಲೆಯ ತನುಜ ಹಾಗೂ ತರಬೇತಿಗೊಳಿಸಿದ ಶಿಕ್ಷಕರಾದ ಅನಿಲ್ ಕುಮಾರ್ ಮತ್ತು ಕೆ.ಎನ್.ಕಾರ್ತೀಕ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

    ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಜಾನಪದ ಸೊಗಡಿನ ಮನೋರಂಜನ ನೃತ್ಯಗಳನ್ನು ಪ್ರದರ್ಶಿಸಿದರು.

    ಕಾರ್ಯಕ್ರಮದಲ್ಲಿ ಮುಖಂಡರಾದ ಎಸ್.ಸಾಧಿಕ್‌ ಸಾಬ್, ಹೆಚ್.ಕೆ.ಶ್ರೀನಿವಾಸ, ಜೆ.ಮಧುಸೂಧನ, ಶಿಕ್ಷಕ ಹನುಮಂತರಾಯ, ಮಂಡಲಿಯ ಪದಾಧಿಕಾರಿಗಳಾದ ಎ.ಓ.ನಾಗರಾಜು, ಪಿ.ಬಿ.ವಿಶ್ವನಾಥ, ಹೊ.ಮ.ನಾಗರಾಜು, ಪಿ.ಎಂ.ಗಿರೀಶ್, ಕೃಷ್ಣಕುಮಾರ್, ನಾಗಪ್ಪ, ಜಮೀಲ್, ಪ್ರಶಾಂತ್, ಚಿಕ್ಕೋಬಯ್ಯ, ಇರ್ಪಾನ್, ಮಣಿಕಂಠ, ನೂರುದ್ದೀನ್, ಆದಿಲ್, ನಂದೀಶ್ ಇತರರು ಇದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.