ಬೆಂಗಳೂರು : ಇಂದು ಸಂಜೆ ಸಮಯ 4ಗಂಟೆಗೆ ನಗರದ ಬಸವನ ಗುಡಿಯ ಎನ್.ಆರ್.ಕಾಲೋನಿಯ ಡಾ.ಸಿ. ಅಶ್ವಥ್ ಕಾಲ ಭವನದಲ್ಲಿ ಜನ್ಮ ಭೂಮಿ ಸೇವಾ ಟ್ರಸ್ಟ್ ವತಿಯಿಂದ ಕನ್ನಡ ಹಬ್ಬ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಯಾದ ಹೆಮ್ಮೆಯ ಕನ್ನಡಿಗ ಮತ್ತು ಹೆಮ್ಮೆಯ ಕನ್ನಡತಿ ಪ್ರಶಸ್ತಿಯನ್ನು ನೀಡಲಾಗುವುದು.
ಕನ್ನಡ ಪರ ಹೋರಾಟಗಾರ ಹಾಗೂ ಸಮಾಜ ಸೇವಕ ಪ್ರಗತಿ ಪರ ಚಿಂತಕರಾದ ಡಾ. ಜನ್ಮಭೂಮಿ ವಿ.ರವಿ ರವರು ಈ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ..
ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರು, ಕನ್ನಡ ಪರ ಸಂಘಟನೆಗಳ ಹೋರಾಟಗಾರರು,ಸಮಾಜ ಸೇವಕರು,ಕಲಾವಿದರು,ಪ್ರಗತಿ ಪರ ಚಿಂತಕರು,ಸಾಮಾಜಿಕ ಹೋರಾಟಗಾರು ಮತ್ತು ಕನ್ನಡ ಮನಸುಗಳು ಈ ಕಾರ್ಯಕ್ರಮದಲ್ಲಿ ಸಾಕ್ಷಿಯಾಗಲಿದ್ದಾರೆ..
ಕಾರ್ಯಕ್ರಮದಲ್ಲಿ ಭರತನಾಟ್ಯ, ಯಕ್ಷಗಾನ, ವೀರಗಾಸೆ, ಕಂಸಾಳೆ, ನೃತ್ಯ,ಯೋಗ, ಜನಪದ ಹಾಗೂ ಭಾವಗೀತೆ ಇನ್ನು ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜನ್ಮ ಭೂಮಿ ಸೇವಾ ಟ್ರಸ್ಟ್ ನಾ ಸಂಸ್ಥಾಪಕ ಅಧ್ಯಕ್ಷರಾದ ಡಾ.ಜನ್ಮ ಭೂಮಿ ರವಿ ವಿ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz