ತುಮಕೂರು: ಚೇತನ್ ಅಹಿಂಸಾ ರವರು ಸಾರ್ವಜನಿಕ ಸೇವೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದು, ನೊಂದವರ ಪರ ಹೋರಾಟ ನಡೆಸಿ ಅವರಿಗೆ ನ್ಯಾಯ ಒದಗಿಸಿಕೊಡುವ ವ್ಯಕ್ತಿತ್ವ ಹೊಂದಿದ್ದಾರೆ. ಚೇತನ್ ಅಹಿಂಸಾ ಅವರ ಜೊತೆಗೆ ಪೊಲೀಸರು ದುರ್ವರ್ತನೆ ತೋರಿದ್ದು, ಅಕ್ರಮವಾಗಿ ಅಪಹರಿಸಿಕೊಂಡು ಹೋಗಿ ಅವರ ಮೊಬೈಲ್ ಸ್ವಿಚ್ ಆಫ್ ಮಾಡಿಸಿ, ಪೊಲೀಸ್ ಗಿರಿಯನ್ನು ಪ್ರದರ್ಶಿಸಿರುವುದು ಖಂಡನೀಯ ಎಂದು ವಿವಿಧ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವಿವಿಧ ಸಂವಿಧಾನ ಪರ ಸಂಘಟನೆಗಳು ಸರ್ಕಾರದ ವಿರುದ್ಧ ಘೋಷಣೆ ಗಳನ್ನು ಕೂಗಿ ಕೂಡಲೇ ನಟ ಅಹಿಂಸಾ ಚೇತನ್ ಅವರನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದವು.
ರಾಜ್ಯ ಎಡ-ಬಲ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ದಲಿತ ಮುಖಂಡ ಪಿ.ಎನ್ . ರಾಮಯ್ಯ ಮಾತನಾಡಿ, ಸಾರ್ವಜನಿಕರ ಬಗ್ಗೆ ಕಾಳಜಿ ಇಲ್ಲದ ಸರ್ಕಾರ ನಟ ಚೇತನ್ ಅವರನ್ನು ನಿಗೂಢವಾಗಿ ಅರೆಸ್ಟ್ ಮಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಕಾನೂನು ಸಂವಿಧಾನದ ಬಗ್ಗೆ ಕಾಳಜಿ ಇಲ್ಲ. ಇದು ಕೊಲೆಗಡುಕರ ಸರ್ಕಾರ. ಕದ್ದು ಆಡಳಿತ ಮಾಡುತ್ತಿರುವಂತೆ ಕಾಣುತ್ತಿದೆ ಅರಾಜಕತೆ ಸೃಷ್ಟಿಸುತ್ತಿದೆ ಎಂದು ಚೇತನ್ ಅವರನ್ನು ಬಿಡುಗಡೆಗೊಳಿಸದೆ ಹೋದರೆ ವಿಧಾನಸೌಧ,ಮತ್ತು ಹೈಕೋರ್ಟ್ ಮುತ್ತಿಗೆ ಹಾಕಲಾಗುವುದು ಎಂದರು.
ದಲಿತ ಸ್ವಾಭಿಮಾನಿ ರಾಜ್ಯಾಧ್ಯಕ್ಷ ಬಂಡೇಕುಮಾರ್ ಮಾತನಾಡಿ, ಪೊಲೀಸರು ಕಾನೂನು ಪಾಲಕರೋ ಅಥವಾ ಅಲ್ಲವೋ ???, ಇವರು ಯಾರದೋ ನಿರ್ದೇಶನದಲ್ಲಿ ಕೆಲಸ ಮಾಡುತ್ತಿದ್ದಾರಾ? ಇಂತಹ ಪೊಲೀಸ್ ವ್ಯವಸ್ಥೆಯಿಂದ ದಮನಿತರ ಪರವಾಗಿ ಹೋರಾಡುತ್ತಿರುವ ವ್ಯಕ್ತಿಗೆ ಹೀಗಾದರೆ, ಇನ್ನು ದಮನಿತರಿಗೆ, ಧ್ವನಿ ಇಲ್ಲದವರಿಗೆ ನ್ಯಾಯ ಸಿಗುತ್ತದೆಯೇ ಎನ್ನುವ ಅನುಮಾನ ಮೂಡುತ್ತಿದೆ. ಸಂವಿಧಾನದ ಅಡಿಯಲ್ಲಿ ಕೆಲಸ ಮಾಡಬೇಕಾದ ಪೊಲೀಸರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದು, ಇಂತಹ ಹೇಯ ಕೃತ್ಯ ಮಾಡಿರುವ ಅಧಿಕಾರಿಗಳನ್ನು ಕೂಡಲೇ ವಜಾಗೊಳಿಸಬೇಕು. ಮುಖ್ಯಮಂತ್ರಿ ಮನುವಾದ ಆಡಳಿತಕ್ಕೆ ಸಿಕ್ಕಿ ನಲುಗುತ್ತಿದ್ದಾರೆ ಭಯದಿಂದ ಅನ್ಯಾಯದ ಆಡಳಿತ ನಡೆಸುತ್ತಿದ್ದಾರೆ. ಒಬ್ಬ ನ್ಯಾಯಾಧೀಶನ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ತಾಕತ್ತಿಲ್ಲ ಲಜ್ಜೆಗೆಟ್ಟ ಸರ್ಕಾರ ನಮ್ಮ ಧಿಕ್ಕಾರವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಾಮಾಜಿಕ ಕಾರ್ಯಕರ್ತ ಚಿತ್ರ ನಟ ಜಟ್ಟಿ ಅಗ್ರಹಾರ ನಾಗರಾಜು ಮಾತನಾಡಿ, ನಟ ಅಹಿಂಸಾ ಚೇತನ್ ಅವರು ಹೆಸರಿನಂತೆ ಅಹಿಂಸೆಯನ್ನು ದಿಕ್ಕರಿಸಿ ದಲಿತ ಹಾಗೂ ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡಿಸುವ ದೃಷ್ಟಿಯಿಂದ ಹೋರಾಟ ನಡೆಸುತ್ತಿದ್ದಾರೆ. ಅಂತಹವರನ್ನು ಪೊಲೀಸರು ಯಾವುದೇ ಬಂಧನ ವಾರಂಟ್ ನೀಡದೇ ಕ್ರಮ ಕೈಗೊಂಡಿರುವುದು ಖಂಡನೀಯ, ಕೂಡಲೇ ಅಹಿಂಸಾ ಚೇತನ್ ಅವರನ್ನು ಬಿಡುಗಡೆಗೊಳಿಸದೇ ಹೋದರೆ ಬೆಂಗಳೂರು ಬಂದ್ ಮಾಡಿ ಬೃಹತ್ ಪ್ರತಿಭಟನೆಯೊಂದಿಗೆ ವಿಧಾನಸೌಧ ಹಾಗೂ ಹೈಕೋರ್ಟ್ ಮುತ್ತಿಗೆ ಹಾಕಲಾಗುವುದು ಎಂದರು.
ಈ ವೇಳೆ ಜಿಲಾಧಿಕಾರಿಗಳ ಬದಲಾಗಿ ಅಪಾರ ಜಿಲ್ಲಾಧಿಕಾರಿಗಳಾದ ಕೆ.ಚನ್ನಬಸಪ್ಪ ಅವರು ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಕೂಡಲೇ ಕ್ರಮಕ್ಕೆ ಸರ್ಕಾರಕ್ಕೆ ಕಳಹಿಸಲಾಗುವುದೆಂದರು.
ಪ್ರತಿಭಟನೆ ಸಂದರ್ಭದಲ್ಲಿ ರಾಮಮೂರ್ತಿ, ಜಿಲ್ಲಾ ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಆಟೋ ಶಿವರಾಜ್, ಅಂಬೇಡ್ಕರ್ ಯುವ ಸೇನೆ ಗಣೇಶ್, ರಂಗಸ್ವಾಮಿ, ಕೃಷ್ಣಪ್ಪ,ಸುರೇಶ್, ನಾಗರಾಜು, ಹನುಮಯ್ಯ ಶಿವರಾಜ್ ಉಪಸ್ಥಿತರಿದ್ದರು.
ವರದಿ : ಎ.ಎನ್. ಪೀರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB