nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಣ್ವ ಸಮೂಹದ ಶಾಲೆಯ ಆಸ್ತಿ ಮುಟ್ಟುಗೋಲು | ಅತಂತ್ರ ಸ್ಥಿತಿಯಲ್ಲಿ 417 ಜನ ಮಕ್ಕಳ ಭವಿಷ್ಯ
    ಕೊರಟಗೆರೆ April 21, 2025

    ಕಣ್ವ ಸಮೂಹದ ಶಾಲೆಯ ಆಸ್ತಿ ಮುಟ್ಟುಗೋಲು | ಅತಂತ್ರ ಸ್ಥಿತಿಯಲ್ಲಿ 417 ಜನ ಮಕ್ಕಳ ಭವಿಷ್ಯ

    By adminApril 21, 2025No Comments3 Mins Read
    kanva

    ಕೊರಟಗೆರೆ : ಕಣ್ವಸೌಹಾರ್ದ ಕೋ–ಆಪರೇಟಿವ್ ಕ್ರೆಡಿಟ್ ಲಿಮಿಟೆಡ್ ಹಾಗೂ ಕಣ್ವ ಸಮೂಹ ಸಂಸ್ಥೆಯ ಆರ್ಥಿಕ ಅವ್ಯವಹಾರದಿಂದ ಸರಕಾರ ಜಿ.ನಾಗೇನಹಳ್ಳಿಯ ಕಣ್ವ ಇಂಟರ್ ನ್ಯಾಷನಲ್ ಶಾಲೆಯ ಜಮೀನು, ಕಟ್ಟಡ ಮತ್ತು ನಿವೇಶನ ಮುಟ್ಟುಗೋಲು ಹಾಕಿಕೊಂಡಿದೆ. ಕಣ್ವಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 417 ಜನ ವಿದ್ಯಾರ್ಥಿಗಳ ಶಿಕ್ಷಣ ಅತಂತ್ರ ಸ್ಥಿತಿಯಲ್ಲಿದ್ದು ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಎದುರಾಗಿದೆ.

    ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಪಂ ವ್ಯಾಪ್ತಿಯ ದೊಡ್ಡೇನಹಳ್ಳಿ ಸರ್ವೆ ನಂ.5/4ರಲ್ಲಿ 2 ಎಕರೇ 37 ಕುಂಟೆ ಜಮೀನು ಮತ್ತು 0.26ಕುಂಟೆ ಕಣ್ವ ಇಂಟರ್ ನ್ಯಾಷನಲ್ ಶಾಲೆ ಮತ್ತು ಶಾಲಾ ಕಟ್ಟಡವನ್ನು ಕೆಪಿಐಡಿಎಫ್ ಇ ಕಾಯ್ದೆಯಡಿ ಸರಕಾರ ಮುಟ್ಟುಗೋಲು ಹಾಕಿಕೊಂಡಿದೆ. ಶಾಲೆಯ ಕಾರ್ಯದರ್ಶಿ ಶಿಕ್ಷಣಗೆ ಮನವಿ ಮಾಡಿ ನಿರ್ವಹಣೆಗೆ ಬಿಇಓರನ್ನು ಆಡಳಿತಾಧಿಕಾರಿ ಆಗಿ ನೇಮಿಸಲು ಮಾಡಿದ ಮನವಿಗೂ ಈಗ ಅವಕಾಶ ಇಲ್ಲದಾಗಿದೆ.


    Provided by
    Provided by

    ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷದ ಅಂತ್ಯದವರೇಗೆ ಶಾಲೆ ಮುಂದುವರೆಸಲು ಸರಕಾರ ಚಿಂತನೆ ನಡೆಸುತ್ತಿದೆ. ಆದರೇ ಶಾಲೆಯ ಐಸಿಎಸ್ ಸಿ ಮಾನ್ಯತೆ 2025 ರ ಮಾರ್ಚ್ 31ಕ್ಕೆ ಮುಕ್ತಾಯವಾಗಿದೆ. ಇದುವರೆಗೆ ಶಾಲೆಯು ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಯ ಮಾನ್ಯತೆ ಸಹ ನವೀಕರಣ ಮಾಡದಿರುವುದು ಇನ್ನೂ ಅನುಮಾನಕ್ಕೆ ಕಾರಣವಾಗಿದೆ.

    ಜಿ.ನಾಗೇನಹಳ್ಳಿಯ ಕಣ್ವಶಾಲೆಯ ಭವಿಷ್ಯದ ಬಗ್ಗೆ ಪೋಷಕರಲ್ಲಿ ಅನಿಶ್ಚಿತತೆ ಮುಂದುವರೆದಿದೆ. ಸರಕಾರವು ಶೀರ್ಘದಲ್ಲೇ ಪೋಷಕರ ಸಭೆ ಕರೆದು ವಾಸ್ತವಾಂಶ ತಿಳಿಸಬೇಕಿದೆ. ಒಟ್ಟಾರೆಯಾಗಿ ಕಣ್ವ ಸಮೂಹದ ಆರ್ಥಿಕ ಅವ್ಯವಹಾರದ ಸಮಸ್ಯೆಯು ಕಣ್ವಶಾಲೆಯ 417ಜನ ವಿದ್ಯಾರ್ಥಿಗಳ ಶಿಕ್ಷಣದ ಭವಿಷ್ಯಕ್ಕೆ ಸಂಕಷ್ಟ ತಂದಿದೆ. ಸರಕಾರವು ತಕ್ಷಣ ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಕಾಪಾಡಬೇಕಿದೆ ಎಂದು ಪೋಷಕರು ಒತ್ತಾಯ ಮಾಡಿದ್ದಾರೆ.

    ಶಿಕ್ಷಣ ಇಲಾಖೆ ಆಯುಕ್ತರ ಆದೇಶ:

    ಕಣ್ವ ಇಂಟರ್ ನ್ಯಾಷನಲ್ ಶಾಲೆಯು ಐಸಿಎಸ್ ಸಿ ಪಠಕ್ರಮ ಆಧಾರಿತ ಶಾಲೆ. ಕಣ್ವಶಾಲೆಯ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮತ್ತು ಆಡಳಿತಾಧಿಕಾರಿ ನೇಮಿಸಲು ಸಾಧ್ಯವಿಲ್ಲ. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಕಣ್ವಶಾಲೆಯ ಮಕ್ಕಳ ಪೋಷಕರ ಸಭೆ ಕರೆದು ವಾಸ್ತವಾಂಶ ಗಮನಕ್ಕೆ ತರಬೇಕು. ಶಿಕ್ಷಣ ಇಲಾಖೆಯ ನಿಯಮಾನುಸಾರ ಸದರಿ ಶಾಲೆ ಮುಂದುವರೆಸಲು ಅವಕಾಶವಿಲ್ಲ. ಪೋಷಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ದಾಖಲಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಧುಗಿರಿ ಡಿಡಿಪಿಐಗೆ 2025ರ ಮಾ.17ರಂದೇ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಮಾಡಿದ್ದಾರೆ.

    ಮಕ್ಕಳಿಗೆ ಉಚಿತ ಶಿಕ್ಷಣದ ಆಮಿಷ:

    ಕಣ್ವ ಇಂಟರ್ ನ್ಯಾಷನಲ್ ಶಾಲೆಯ ಆಡಳಿತ ಮಂಡಳಿಯು ಮಕ್ಕಳ ಪೋಷಕರಿಗೆ ಸಮಸ್ಯೆಯ ವಿಷಯ ತಿಳಿಸದೇ 2025–26ರ ಶೈಕ್ಷಣಿಕ ವರ್ಷಕ್ಕೆ ಶುಲ್ಕವನ್ನು ಕಟ್ಟಿಸಿಕೊಳ್ಳದೇ ಉಚಿತ ಭೋದನೆಯ ವದಂತಿ ಹರಿದಾಡಿವೆ. ಶಾಲೆಯಿಂದ ಮಕ್ಕಳಿಗೆ ಬರುವ ವಾಹನಗಳು ಶುಲ್ಕ ಈವರ್ಷ ಉಚಿತ ಎಂಬ ಮಾತು ಕೇಳಿಬಂದಿವೆ. ಇದು ಪೋಷಕರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದ್ದು ಶಿಕ್ಷಣ ಇಲಾಖೆ ತುರ್ತು ಕ್ರಮ ಕೈಗೊಳ್ಳಬೇಕಿದೆ.

    417 ಜನ ಮಕ್ಕಳ ಭವಿಷ್ಯವೇ ಅತಂತ್ರ..

    ಕಣ್ವ ಸಮೂಹದ ಜಿ.ನಾಗೇನಹಳ್ಳಿ ಶ್ರೀಕಣ್ವ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 2024–25ನೇ ಸಾಲಿನ ಅನ್ವಯ ನರ್ಸರಿಯಿಂದ 10ನೇ ತರಗತಿ ವರೇಗೆ 417ಜನ ಮಕ್ಕಳು ಐಸಿಎಸ್ ಸಿ ಪಠ್ಯಕ್ರಮ ಅನುಸಾರ ವ್ಯಾಸಂಗ ಮಾಡುತ್ತಿದ್ದಾರೆ. ಮುಖ್ಯಶಿಕ್ಷಕನ ಹುದ್ದೆಯು ಈಗ ಖಾಲಿಯಿದ್ದು 21 ಜನ ಶಿಕ್ಷಕರಿದ್ದಾರೆ. ಶಾಲೆಯ ಜಮೀನು ಮತ್ತು ಕಟ್ಟಡವೇ ಸರಕಾರಕ್ಕೆ ಮುಟ್ಟುಗೋಲು ಆದ ಮೇಲೆ 2025–26ರ ಶೈಕ್ಷಣಿಕ ವರ್ಷದಲ್ಲಿ ಮತ್ತೇ ಜಮೀನು ಸಮಸ್ಯೆ ಎದುರಾದರೇ ಮಕ್ಕಳ ಶಿಕ್ಷಣದ ಪಾಡೇನು ಎಂಬುದೇ ಯಕ್ಷಪ್ರಶ್ನೆ.

    ಜಿ.ನಾಗೇನಹಳ್ಳಿಯ ಕಣ್ವ ಇಂಟರ್ ನ್ಯಾಷನಲ್ ಸ್ಕೂಲ್ ಮುಚ್ಚಿಸಲು ಶಿಕ್ಷಣ ಇಲಾಖೆ ಆಯುಕ್ತರಿಂದ ನಿರ್ದೇಶನವಿದೆ. ಕಣ್ವಶಾಲೆಯಲ್ಲಿ ಏ.೩ರಂದು ಪೋಷಕರ ಸಭೆ ಕರೆಯಲು ಬಿಇಓ ಶಾಲೆಯ ಕಾರ್ಯದರ್ಶಿಗೆ ಮಾ.೨೮ರಂದು ನೊಟೀಸ್ ನೀಡಿದ್ದರು. ಸಭೆ ಕರೆಯಲು ಮಾನ್ಯ ಉಚ್ಚ ನ್ಯಾಯಾಲಯ ತಡೆ ನೀಡಿದೆ ಎಂದು ಮಧುಗಿರಿ ಡಿಡಿಪಿಐ ಗಿರೀಜಾ ಬಿ.ಹೆಚ್. ಹೇಳಿದ್ದಾರೆ.

    ಸರಕಾರದ ಜೊತೆ ಕಣ್ವಶಾಲೆ 30 ವರ್ಷ ಗುತ್ತಿಗೆ ಒಪ್ಪಂದ ಮಾಡಿಕೊಂಡಿದೆ. ಕಣ್ವಶಾಲೆ ಇರುವ ಜಮೀನು ಸರಕಾರದ ಆಸ್ತಿ. ಈಗ ಕಣ್ವಶಾಲೆ ಮಾತ್ರ ನಮ್ಮದು ಅಷ್ಟೆ. ಶಾಲೆಯ ಜಮೀನು ಮತ್ತು ಕಟ್ಟಡದ ಸಮಸ್ಯೆ ಇರೋದು ಸತ್ಯ. ಸರಕಾರದ ಜೊತೆ ಒಪ್ಪಂದ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಕಾಲಾವಕಾಶ ನೀಡಿದೆ ಎಂದು ಬೆಂಗಳೂರು ಕಣ್ವ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ರಜತ್ ಪಿ.ಗೌಡ ಹೇಳಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ಬಾಗಲಕೋಟೆ: ನಗರದಲ್ಲಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಮತ್ತು ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು…

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.