ಪಾವಗಡ: ಹಬ್ಬಗಳಂದ್ರೆ ಸಂಭ್ರಮ, ಸಡಗರ. ಅದರಲ್ಲೂ ಗ್ರಾಮೀಣ ಭಾಗಗಳಲ್ಲಿ ಅನೇಕ ಬಗೆಯ ವಿಶಿಷ್ಠ ಹಬ್ಬಗಳನ್ನು ತಲೆತಲಾಂತರಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿಯೊಂದು ಹಬ್ಬವೂ ತನ್ನದೇ ಆದ ಪ್ರಸಿದ್ಧಿ, ವೈಶಿಷ್ಟ್ಯತೆ ಹೊಂದಿದ್ದು, ತುಮಕೂರು ಜಿಲ್ಲೆಯ ಪಾವಗಡದ ಲಂಬಾಣಿ ಸಮುದಾಯದವರು ಆಚರಿಸುತ್ತಿರುವ ಹಬ್ಬವೊಂದು ಒಮ್ಮೆ ಎಲ್ಲರನ್ನೂ ಆಕರ್ಷಿಸುತ್ತದೆ.
ಹೌದು, ದವಸ ಧಾನ್ಯ, ತೆಂಗಿನ ಕಾಯಿಯನ್ನು ತಲೆ ಮೇಲೆ ಹೊತ್ತು ಬರುವ ಕನ್ಯೆಯರಿಗೆ ಶುದ್ಧ ನೀರಿನಿಂದ ಕಾಲ್ತೊಳೆಯುವ ವಿಶೇಷ ಹಬ್ಬ ನಡೆಯುತ್ತಿದೆ. ಜಿಲ್ಲೆಯ ಪಾವಗಡ ತಾಲೂಕಿನ ಭೂಪೂರು ಸೇರಿದಂತೆ ಇತರೆ ಲಂಬಾಣಿ ತಾಂಡಗಳಲ್ಲಿ ಕನ್ಯೆಯರಿಗೆ ಕಾಲ್ತೊಳೆಯುವ ಹಬ್ಬ ನಡೆಯುತ್ತಿದೆ.
ಪ್ರತಿ ಮನೆಯಿಂದ ಒಬ್ಬೊಬ್ಬ ಕನ್ಯೆಯರು ತಮ್ಮ ಮನೆಯಿಂದ ದವಸ ಧಾನ್ಯ ಹೊತ್ತು ಕುಲದೇವತೆಗಳಾದ ತೋಳಚ ಶಕ್ತಿ, ಭೀಮಾಸತಿ, ಭೀಮಾ ಭೂಕ್ಯಾ ದೇವತೆಗಳನ್ನು ಆರಾಧಿಸುವ ಮನೆಗಳಿಗೆ ತೆರಳಿ ನೈವೇದ್ಯ ಅರ್ಪಿಸುತ್ತಾರೆ.
ಈ ವೇಳೆ ಮನೆಗೆ ಬರುವ ಕನ್ಯೆ ಯರಿಗೆ ಶುದ್ದ ನೀರಿನಿಂದ ಕಾಳು ತೊಳೆದು ಕಾಲಿಗೆ ಬಿದ್ದು ಬರಮಾಡಿಕೊಳ್ಳುತ್ತಾರೆ. ಮನೆಗೆ ಬರುವ ವೇಳೆ ಕನ್ಯೆಯರು ಬರುವ ಹಾದಿಗೆ ನೀರು ಹಾಕುವ ಮೂಲಕ ಬರಮಾಡಿಕೊಳ್ಳುತ್ತಾರೆ.
ನಂತರ ಮನೆಯ ಮುಂದೆ ಬೆಂಕಿ ಹಾಕಿ ಭೂಮಿಗೆ ನಮನ ಸಲ್ಲಿಸಿ ವೆಂಕಟರಮಣಸ್ವಾಮಿ ಹಾಗೂ ಆಂಜನೇಯ ಸ್ವಾಮಿಗೆ ಹೋಮದ ಮೂಲಕ ಪೂಜೆ ಮಾಡಿದ್ದಾರೆ. ಬಳಿಕ ಪೂಜೆ ಸಲ್ಲಿಸಿ ಎಲ್ಲರೂ ಸೇರಿ ಅಲ್ಲಿಯೇ ಊಟ ಸೇವಿಸುತ್ತಾರೆ. ಐದು ವರ್ಷಕ್ಕೊಮ್ಮೆ ಬರುವ ಈ ವಿಶಿಷ್ಟ ಹಬ್ಬವನ್ನು ಎರಡು ದಿನ ಸಂಭ್ರಮದಿಂದ ಆಚರಿಸುತ್ತಿದ್ದಾರೆ.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5