ಗುಬ್ಬಿ: ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ಜಮೀನಿನ ಕೆಲಸ ಮಾಡಲು ತೆರಳಿದ ಇಬ್ಬರು ಕೂಲಿ ಕಾರ್ಮಿಕರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಲಾಗಿದೆ.
ಜಿ.ಹೊಸಹಳ್ಳಿ ಗ್ರಾಮದಲ್ಲಿ ಶಿವಕುಮಾರ್ ಮತ್ತು ಮಂಜುನಾಥ್ ಒಡೆತನದ ಜಮೀನಿನಲ್ಲಿ ಕೆಲಸ ಮಾಡಲು ತೆರಳಿದ್ದ ಸಮಯದಲ್ಲಿ ಸ್ಥಳೀಯ ನಿವಾಸಿ ಲತಾ ಪ್ರಶಾಂತ್ ಎಂಬುವ ವ್ಯಕ್ತಿ ಹಾಗೂ ಇತರರು ಈ ಜಮೀನು ನಮಗೆ ಸೇರಿದ್ದು ನೀವು ಕೆಲಸ ಮಾಡಲು ಬರುವುದಕ್ಕೆ ಹೇಳಿದವರು ಯಾರು ಎಂದು ಪ್ರಶ್ನಿಸಿ ಕಾರ್ಮಿಕರಾದ ಕೃಷ್ಣ ಮೂರ್ತಿ, ರವಿ ಎಂಬುವ ಏಕ ಏಕಿ ಹಲ್ಲೆ ನಡೆಸಿ ಥಳಿಸಿದ್ದಾರೆ ಎಂದು ಹಲ್ಲೆಗೆ ಒಳಗಾದ ಕೃಷ್ಣ ಮೂರ್ತಿ ಸಹೋದರ ಆರೋಪಿಸಿದ್ದಾರೆ.
ಹಲ್ಲೆಗೊಳಗಾದ ಇಬ್ಬರು ಕಾರ್ಮಿಕರನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದು ಹೆಚ್ಚಿನ ಚಿಕಿತ್ಸೆ ಗೆ ತುಮಕೂರು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆ ಕುರಿತು ಗುಬ್ಬಿ ಠಾಣೆಗೆ ದೂರು ಸಲ್ಲಿಸಲಾಗಿದೆ.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5