ಶಬರಿಮಲೆಗೆ ತೆರಳಿ ವಾಪಸ್ ಆಗುತ್ತಿದ್ದ ಕರ್ನಾಟಕ ಮೂಲದ ಯಾತ್ರಿಯರನ್ನು ಹೊತ್ತು ಸಾಗುತ್ತಿದ್ದ ಬಸ್ ಪಲ್ಟಿಯಾಗಿದ್ದು, ಪರಿಣಾಂವಾಗಿ ಹಲವು ಮಂದಿ ಯಾತ್ರಿಕರು ಗಾಯಗೊಂಡಿದ್ದಾರೆ.
ಕೇರಳದ ವಯನಾಡಿನಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.ಅಪಘಾತಕ್ಕೀಡಾದ ಬಸ್ ನಲ್ಲಿ 50ಕ್ಕೂ ಹೆಚ್ಚು ಜನ ಪ್ರಯಾಣಿಕರಿದ್ದರು.
ಗಾಯಾಳುಗಳನ್ನು ವಿವಿಧ ವಾಹನಗಳಲ್ಲಿ ಮಾನಂತವಾಡಿ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಯಿತು. ಸಹ ಪ್ರಯಾಣಿಕರು ಮತ್ತು ಸ್ಥಳೀಯ ನಿವಾಸಿಗಳು ಕೂಡಲೇ ರಕ್ಷಣಾ ಕಾರ್ಯಗಳನ್ನು ನಡೆಸಿದರು. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296