nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
    ರಾಜ್ಯ ಸುದ್ದಿ November 25, 2025

    ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ

    By adminNovember 25, 2025No Comments2 Mins Read
    kannada
    • ಕನ್ನಡಿಗರು ಕಾನೂನನ್ನು ರೂಪಿಸಿ ನೀತಿ ಯೋಜನೆ ಜಾರಿಗೆ ತರಬೇಕು : ಚೇತನ್ ಅಹಿಂಸಾ

    ನೆಲಮಂಗಲ : ಪಟ್ಟಣದ ಶ್ರೀ ಪವಾಡ ಬಸವಣ್ಣ ದೇವರ ಮಠದ ಆವರಣದಲ್ಲಿ ಕರ್ನಾಟಕ ರಣಧೀರರ ವೇದಿಕೆಯ 6ನೇ ವರ್ಷದ ವೈಭವ ಕನ್ನಡ ರಾಜ್ಯೋತ್ಸವ ಹಾಗೂ ತಾಯಿ ಭುವನೇಶ್ವರಿಯ ಹಬ್ಬ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ 2025 ರ ಹೊಯ್ಸಳ ವಿಶಿಷ್ಟ ಸೇವಾ ಪ್ರಶಸ್ತಿ ಸಮಾರಂಭವು ನಡೆಯಿತು.

    ತಾಯಿ ಭುವನೇಶ್ವರಿಯನ್ನು ಬೆಳ್ಳಿ ಪಲ್ಲಕ್ಕಿಯಲ್ಲಿ ಕೂರಿಸಿ ಪಟ್ಟಣದ ರಾಜ ಬೀದಿಗಳಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಮೆರವಣಿಗೆ ಮಾಡಲಾಯಿತು. ನಂತರ ಶ್ರೀ ಪವಾಡ ಬಸವಣ್ಣ ದೇವರ ಮಠದ ಆವರಣದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


    Provided by
    Provided by

    ಈ ಅದ್ದೂರಿ ಕಾರ್ಯಕ್ರಮವನ್ನು ಶ್ರೀ ಪವಾಡ ಬಸವಣ್ಣ ದೇವರ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಸಿದ್ದಲಿಂಗ ಮಹಾ ಸ್ವಾಮಿಜಿ, ಕುಂಚಿಟಿಗರ ಮಹಾಸಂಸ್ಥಾನ ಎಲೆರಾಂಪುರ ಮಠದ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿ, ವನಕಲ್ಲು ಮಹಾಸಂಸ್ಥಾನ ಮಠದ ಶ್ರೀ ಶ್ರೀ ಬಸವ ರಮಾನಂದ ಸ್ವಾಮೀಜಿಗಳು ದೀಪ ಬೆಳಗುವ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್. ಶ್ರೀನಿವಾಸ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ವಿಶೇಷ ಕರ್ತವ್ಯಾಧಿಕಾರಿಗಳಾದ ಡಾ.ಕೆ.ನಾಗಣ್ಣ, ಖ್ಯಾತ ಚಲನಚಿತ್ರ ನಟ ಹಾಗೂ ಪ್ರಗತಿಪರ ಚಿಂತಕರಾದ ಚೇತನ್ ಅಹಿಂಸಾ ಮತ್ತು ತುಮಕೂರು ಉಪ ವಿಭಾಗಾಧಿಕಾರಿ ಹಾಗೂ ತುಮಕೂರು ವಿಶ್ವ ವಿದ್ಯಾನಿಲಯದ ಕುಲಸಚಿವರಾದ ನಾಹೀದ ಜಮ್ ಜಮ್ ಉಪಸ್ಥಿತರಿದ್ದರು.

    ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು,  ಸಂಘಟನೆಯ ತತ್ವ ಸಿದ್ಧಾಂತ ಮತ್ತು ಸಂವಿಧಾನದ ಬಗ್ಗೆ, ಕಳೆದ ಐದು ವರ್ಷಗಳಿಂದ ಸಂಘಟನೆ ಯಾವೆಲ್ಲಾ ರೀತಿಯಲ್ಲಿ ಹೋರಾಟಗಳನ್ನು ಮಾಡಿ ಯಶಸ್ವಿಯಾಗಿದೆ ಎಂಬುದನ್ನು ಜೊತೆಗೆ ಮುಂದಿನ ಜನಪರ ಹೋರಾಟಗಳು ನಾಡು ನುಡಿ ನೆಲ ಜಲ ಭಾಷೆಯ ಹೋರಾಟದ ಬಗ್ಗೆ ತಿಳಿಸಿದರು.

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಖ್ಯಾತ ಚಲನಚಿತ್ರ ನಟ ಚೇತನ್ ಅಹಿಂಸಾ,  ಕನ್ನಡಿಗರ ಶತ್ರು ಯಾರು..? ಜಾತಿ ಧರ್ಮ ಭಾಷೆ ನಮ್ಮ ಶತ್ರುವಲ್ಲ, ನಮ್ಮ ಶತ್ರು ಅಸಮಾನತೆ ಮತ್ತು ಅನ್ಯಾಯದ ವ್ಯವಸ್ಥೆ. ಈ ಅನ್ಯಾಯದ ವ್ಯವಸ್ಥೆಯ ವಿರುದ್ಧ ಕನ್ನಡಿಗರು ಸಮ ಸಮಾಜವನ್ನು ಕಟ್ಟಬೇಕಿದೆ. ಆಗ ಮಾತ್ರ ನಮ್ಮ ರಾಜ್ಯ ಆದರ್ಶ ಕರ್ನಾಟಕವಾಗಲಿದೆ. ಭಾಷೆ, ಶಿಕ್ಷಣ, ಆರೋಗ್ಯ, ಕ್ರೀಡೆಯಲ್ಲಿ  ಸಮಾನತೆಯನ್ನು ಕಾಣಬೇಕು. ಆದರ್ಶ ಸಮಾಜ ನ್ಯಾಯಯುತವಾಗಿ ಕಟ್ಟಿದರೆ ಮಾತ್ರ ನಮ್ಮ ರಾಜ್ಯ ಸುಭಿಕ್ಷವಾಗಿರುತ್ತದೆ ಎಂದರು.

    ಈ ಕಾರ್ಯಕ್ರಮದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ರಾಜ್ಯಾಧ್ಯಕ್ಷರುಗಳಾದ ಅಶ್ವತ್ ಟಿ. ಮರೀಗೌಡ್ರು, ಕನ್ನಡ ಕನ್ನಡ ಚಳುವಳಿ ಗುರುದೇವ್ ನಾರಾಯಣ್ ಕುಮಾರ್, ಸಾರಿಕ ಶೋಭಾ ವಿನಾಯಕ, ಜ್ಯೋತಿ ಕನ್ನಡತಿ, ಮೋಹನ್ ಗೌಡ, ಪ್ರಸನ್ನ ಗೌಡ, ವಸಂತ್ ಪೂಜಾರಿ, ಕರ್ನಾಟಕ ರಣಧೀರರ ವೇದಿಕೆಯ ನೆಲಮಂಗಲ ತಾಲ್ಲೂಕು ಅಧ್ಯಕ್ಷರಾದ ಮೂರ್ತಿ, ಕೊರಟಗೆರೆ ಘಟಕದ ಮಂಜುಸ್ವಾಮಿ ಎಂ ಎನ್ ಸೇರಿದಂತೆ ಇತರರು ಹಾಜರಿದ್ದರು.

     ಶ್ರೀ ವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ  ಶ್ರೀ ಶ್ರೀ ಬಸವ ರಮಾನಂದ ಮಹಾ ಸ್ವಾಮಿಜಿಗಳಿಗೆ “ಬಸವ ಶ್ರೀ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

     

    ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ

    ಸಮಾಜ ಸೇವಕರಾದ ಹುಲ್ಲೂರು ಮಂಜುನಾಥ್ ಹೊಸಕೋಟೆ, ಪಬ್ಲಿಕ್ ಟಿವಿಯ ಖ್ಯಾತ ನಿರೂಪಕರಾದ ಅರುಣ್ ಸಿ. ಬಡಿಗೇರ್, ಮತ್ತು ಚಲನಚಿತ್ರ  ಬಾಲನಟಿ ಹಾಗೂ ಭರತನಾಟ್ಯ ಕಲಾವಿದೆಯಾದ ಕುಮಾರಿ ಭೈರವಿಗೆ ಕರ್ನಾಟಕ ರಣಧೀರರ ವೇದಿಕೆಯ 2025ರ “ಹೊಯ್ಸಳ ವಿಶಿಷ್ಟ ಸೇವಾ ಪುರಸ್ಕಾರ” ನೀಡಿ ಗೌರವಿಸಲಾಯಿತು. ಜೊತೆಗೆ  ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

    ಈ ಸಂದರ್ಭದಲ್ಲಿ ಸೂರಜ್, ತಿಮ್ಮಪ್ಪ ಗೌಡ (ಚಿನ್ನು), ದೇವರಾಜ್, ಮಂಜುಸ್ವಾಮಿ ಎಂ.ಎನ್., ಲೋಕೇಶ್, ಸಮೀರ್, ರವಿ, ಮುತ್ತುರಾಜ್, ಭೈರವ,ಮಹೇಶ್, ಲೋಕೇಶ್, ಸೇರಿದಂತೆ ನೂರಾರು ಕಾರ್ಯಕರ್ತರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    Leave A Reply Cancel Reply

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.