ಬೀದರ್: ಗಡಿ ವಿವಾದದ ನಡುವೆಯೇ ಮಹಾರಾಷ್ಟ್ರದ ಗ್ರಾಮವನ್ನು ಕರ್ನಾಟಕಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ಲಾತುರ್ ಜಿಲ್ಲೆಯ ದೇವಣಿ ತಾಲೂಕಿನ ಬೊಂಬಳಿಯ ಜನರು ಆಗ್ರಹಿಸಿದ್ದಾರೆ.
ಬೊಂಬಳಿ ಗ್ರಾಮದ ನಿವಾಸಿಗಳು ಗ್ರಾಮದಲ್ಲಿ ಸಭೆ ನಡೆಸಿ, ಮಹಾರಾಷ್ಟ್ರ ಸರ್ಕಾರ ಗ್ರಾಮಗಳ ಅಭಿವೃದ್ಧಿ ಮಾಡದೇ ತಾರತಮ್ಯ ಎಸಗುತ್ತಿದೆ. ಕರ್ನಾಟಕ ಸರ್ಕಾರ ಒಳ್ಳೆಯ ಸವಲತ್ತುಗಳನ್ನು ಮತ್ತು ಯೋಜನೆಗಳನ್ನು ತಂದಿದೆ. ಹಾಗಾಗಿ ನಮ್ಮ ಗ್ರಾಮ ಕರ್ನಾಟಕಕ್ಕೆ ಸೇರಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಅಲ್ಲದೇ ಗ್ರಾಮ ಪಂಚಾಯತಿ ಚುನಾವಣೆಯನ್ನೂ ಬಹಿಷ್ಕಾರ ಮಾಡಿರುವುದಾಗಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


