nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026
    Facebook Twitter Instagram
    ಟ್ರೆಂಡಿಂಗ್
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    • ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
    • ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
    • ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕದಿಂದ ರಾಜ್ಯಸಭೆಗೆ ಪ್ರಿಯಾಂಕಾ ಗಾಂಧಿ ಆಯ್ಕೆಗೆ ಕಸರತ್ತು
    ರಾಜ್ಯ ಸುದ್ದಿ May 14, 2022

    ಕರ್ನಾಟಕದಿಂದ ರಾಜ್ಯಸಭೆಗೆ ಪ್ರಿಯಾಂಕಾ ಗಾಂಧಿ ಆಯ್ಕೆಗೆ ಕಸರತ್ತು

    By adminMay 14, 2022No Comments2 Mins Read
    preyank gandhi

    ವಿಧಾನಸಭೆಯಿಂದ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ಚುನಾವಣೆಗೆ ವೇಳಾ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಆಕಾಂಕ್ಷಿಗಳ ಲಾಬಿ ಬಿರುಸುಗೊಂಡಿದ್ದು, ಕಾಂಗ್ರೆಸ್‍ನ ಪ್ರಭಾವಿ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಆರಿಸಿ ಕಳುಹಿಸುವ ತೆರೆಮರೆ ಕಸರತುಗಳು ಜೋರಾಗಿವೆ.

    ರಾಜ್ಯಸಭೆ ಸದಸ್ಯರಾದ ಬಿಜೆಪಿಯ ಕೆ.ಸಿ.ರಾಮಮೂರ್ತಿ, ನಿರ್ಮಿಲಾ ಸೀತಾರಾಮನ್, ಕಾಂಗ್ರೆಸ್‍ನ ಕೇಂದ್ರದ ಮಾಜಿ ಸಚಿವ ಜೈರಾಮ್ ರಮೇಶ್, ನಿಧನರಾದ ಆಸ್ಕರ್ ಫರ್ನಾಡಿಸ್ ಸೇರಿದಂತೆ ನಾಲ್ವರ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಕಾಂಗ್ರೆಸ್‍ನಿಂದ ಜೈರಾಮ್ ರಮೇಶ್ ಮರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

    ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ಆರಿಸಿ ಕಳುಹಿಸಲು ತಯಾರಿ ನಡೆಸಿದ್ದಾರೆ. ಗಾಂಧಿ ಕುಟುಂಬದೊಂದಿಗೆ ಅಪಾರ ನಿಷ್ಠೆ ಹೊಂದಿರುವ ಡಿ.ಕೆ.ಶಿವಕುಮಾರ್ ಪಕ್ಷದ ಅಧ್ಯಕ್ಷರಾದಾಗ ಪ್ರಿಯಾಂಕ ಗಾಂಧಿ ದೂರವಾಣಿ ಕರೆ ಮಾಡಿ ಶುಭಾಷಯ ಹೇಳಿದ್ದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸಂಸದರಾಗಿದ್ದ ಪ್ರಿಯಾಂಕ ಗಾಂಧಿ ಅವರು ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ನಡೆದ ಉತ್ತರ ಪ್ರದೇಶ ಚುನಾವಣೆಯಲ್ಲಿ ಗೆಲವಿಗಾಗಿ ಬಾರೀ ಕಸರತು ನಡೆಸಿದ ಪ್ರಿಯಾಂಕ ಯಶಸ್ವಿಯಾಗಲಿಲ್ಲ.

    ಬೇರೆ ಬೇರೆ ರಾಜ್ಯಗಳು ಪ್ರಿಯಾಂಕ ಅವರನ್ನು ರಾಜ್ಯಸಭೆಯಿಂದ ಆರಿಸಿ ಕಳುಹಿಸಲು ದುಂಬಾಲು ಬಿದ್ದಿವೆ. ಈ ಹಿಂದೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ರಾಜಕೀಯವಾಗಿ ಹಿನ್ನೆಡೆ ಅನುಭವಿಸಿದಾಗ ನವ ಹುರುಪು ತುಂಬಿದ್ದೆ ಕರ್ನಾಟಕ. ಚಿಕ್ಕಮಗಳೂರು ಲೋಕಸಭೆಯಿಂದ ಚುನಾಯಿತರಾದ ಇಂದಿರಾ ಗಾಂಧಿ ಮತ್ತೆ ರಾಜಕೀಯದಲ್ಲಿ ವಿಜೃಂಭಿಸಿದರು. ಹಾಗಾಗಿ ಪ್ರಿಯಾಂಕ ಗಾಂಧಿ ಅವರನ್ನು ಕರ್ನಾಟಕದಿಂದ ಆರಿಸಿ ಕಳುಹಿಸಿದರೆ ಮುಂದೆ ಉಜ್ವಲ ಭವಿಷ್ಯ ಇರಲಿದೆ ಎಂಬ ನಂಬಿಕೆಯನ್ನು ಕಾಂಗ್ರೆಸಿಗರು ಹೊಂದಿದ್ದಾರೆ.

    ಅದಕ್ಕಾಗಿ ಜೈರಾಮ್ ರಮೇಶ್ ಅವರಿಗೆ ಟಾಂಗ್ ಕೊಟ್ಟು ಪ್ರಿಯಾಂಕ ಗಾಂಧಿ ಅವರಿಗೆ ಮಣೆ ಹಾಕಲು ತೆರೆ ಮರೆಯ ಕಸರತು ನಡೆಯುತ್ತಿವೆ. ಜೈರಾಮ್ ರಮೇಶ್ ಅವರಿಂದ ರಾಜ್ಯ ರಾಜಕಾರಣಕ್ಕೆ ಯಾವುದೇ ನೆರವಾಗಿಲ್ಲ. ರಾಷ್ಟ್ರ ಮಟ್ಟದಲ್ಲೂ ಜಿ-23 ಬಳಗದಲ್ಲಿ ಜೈರಾಮ್ ರಮೇಶ್ ಗುರುತಿಸಿಕೊಂಡಿದ್ದರು. ಹೀಗಾಗಿ ಅವರನ್ನು ಮತ್ತೆ ಕರ್ನಾಟಕದಿಂದ ಚುನಾಯಿಸಬಾರದು ಎಂಬ ವಾದಗಳು ಕೇಳಿ ಬರುತ್ತಿವೆ.

    ರಾಜಸ್ಥಾನದ ಉದಯಪುರ್‍ನಲ್ಲಿ ನಡೆಯುತ್ತಿರುವ ಚಿಂತನ್ ಶಿವಿರ್‍ನಲ್ಲಿ ಒಂದು ಕುಟುಂಬ ಒಂದು ಟಿಕೆಟ್ ಎಂಬ ನಿಯಮ ರೂಪಿಸುವ ತಯಾರಿ ನಡೆದಿದೆ. ಅದು ಅಂಗೀಕಾರಗೊಂಡರೆ ಪ್ರಿಯಾಂಕ ಗಾಂಧಿ ಅವರ ರಾಜ್ಯಸಭೆ ಪ್ರವೇಶದ ಕನಸು ಭಗ್ನವಾಗಲಿದೆ. ಇಲ್ಲವಾದರೆ ಕರ್ನಾಟಕದಿಂದಲೇ ಅವರನ್ನು ರಾಜಕಾರಣದ ಮುಖ್ಯವಾಹಿನಿಗೆ ತರಬೇಕು ಎಂಬ ಉಮೇದುಗಳು ರಾಜ್ಯ ನಾಯಕರಲ್ಲಿ ಜೋರಾಗಿ ನಡೆಯುತ್ತಿವೆ.ಆದರೆ ದೆಹಲಿಯ ನಾಯಕರು ಜೈರಾಮ್ ರಮೇಶ್ ಅವರನ್ನು ಪುನರಾಯ್ಕೆ ಮಾಡುವಂತೆ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಜೈರಾಮ್ ರಮೇಶ್ ಬೇಡ ಎಂದಾದರೆ ರಾಜ್ಯಸಭೆ ಪ್ರವೇಶಿಸಲು ಹಲವು ನಾಯಕರು ನಾ ಮುಂದು ತಾ ಮುಂದು ಎಂದು ಮುಗಿ ಬಿದಿದ್ದಾರೆ.

    ಇನ್ನು ವಿಧಾನ ಪರಿಷತ್‍ನಲ್ಲಿ ಏಳು ಸ್ಥಾನಗಳು ತೆರವಾಗಲಿವೆ. ಆರ್.ಬಿ.ತಿಮ್ಮಾಪುರ, ಅಲ್ಲಂ ವೀರಭದ್ರಪ್ಪ, ಎಸ್.ವೀಣಾ ಅಚ್ಚಯ್ಯ, ಕೆ.ವಿ.ನಾರಾಯಣಸ್ವಾಮಿ, ಲಹರ್ ಸಿಂಗ್ ಸಿರೋಯಾ, ಎಚ್.ಎಂ.ರಮೇಶ್‍ಗೌಡ, ಲಕ್ಷ್ಮಣ ಸಂಗಪ್ಪ ಸವದಿ ಅವರಿಂದ ತೆರವಾಗುತ್ತಿರುವ ಏಳು ಸ್ಥಾನಗಳಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ನಿರಾಯಸವಾಗಿ ಗೆಲ್ಲಬಹುದಾಗಿದೆ. ಅದಕ್ಕಾಗಿ 30ಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದಾರೆ.

    ಎರಡರಲ್ಲಿ ಒಂದನ್ನು ಅಲ್ಪಸಂಖ್ಯಾತರಿಗೆ ಮತ್ತೊಂದನ್ನು ದಲಿತ ಸಮುದಾಯಕ್ಕೆ ನೀಡುವ ಚಿಂತನೆ ನಡೆದಿದೆ. ಮಾಜಿ ಸಚಿವ ಎಂ.ಆರ್.ಸೀತಾರಾಮ್, ಐವಾನ್ ಡಿ.ಸೋಜಾ, ಎಸ್.ಆರ್.ಪಾಟೀಲ್, ಜಯಮಾಲ, ಆರ್.ಬಿ.ತಿಮ್ಮಾಪುರ, ಅಲ್ಲಂ ವೀರಭದ್ರಪ್ಪ ಸೇರಿದಂತೆ ಅನೇಕರು ಸಾಲಿನಲ್ಲಿದ್ದಾರೆ. ಹಿಂದೆ ಸದಸ್ಯರಾಗಿ ಕೆಲಸ ಮಾಡಿದವರಿಗೆ ಅವಕಾಶ ನೀಡಬೇಕೆ ಅಥವಾ ಹೊಸ ಮುಖಗಳಿಗೆ ಮಣೆ ಹಾಕಬೇಕೆ ಎಂಬ ಚರ್ಚೆಗಳು ನಡೆಯುತ್ತಿವೆ. ಚಿಂತನ್ ಶಿವಿರ್ ನಂತರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗಳು ಶುರುವಾಗಲಿವೆ.

    ರಾಜ್ಯಸಭೆಗೆ ಎರಡನೇ ಅಭ್ಯರ್ಥಿ ಹಾಕುವುದು, ವಿಧಾನಸಭೆಗೆ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಜೆಡಿಎಸ್‍ಗೆ ಪೈಪೋಟಿ ನೀಡಲು ಕಾಂಗ್ರೆಸ್‍ನಲ್ಲಿ ಒಂದು ಬಣ ಪಟ್ಟು ಹಿಡಿದಿದೆ. ಆದರೆ ಕಾಂಗ್ರೆಸ್ ಉನ್ನತ ವಲಯದಲ್ಲಿ ಜೆಡಿಎಸ್ ಬಗ್ಗೆ ಮೃದು ಧೋರಣೆ ಇರುವುದರಿಂದ ಹೆಚ್ಚುವರಿ ಅಭ್ಯರ್ಥಿಗಳ ಕುರಿತು ಚರ್ಚಿಸಿ ತಿರ್ಮಾನಿಸುವಂತೆ ಸಲಹೆ ಕೇಳಿ ಬಂದಿದೆ.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ವಿಶ್ವವಿದ್ಯಾನಿಲಯಗಳು ಸಂಖ್ಯೆಯಲ್ಲಿ ವಿಸ್ತರಣೆಯಾಗದೆ ಗುಣಮಟ್ಟದಲ್ಲಿ ಬೆಳೆಯಬೇಕಿದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ…

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.