nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026
    Facebook Twitter Instagram
    ಟ್ರೆಂಡಿಂಗ್
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    • ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!
    • ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕದಿಂದ ರಾಜ್ಯಸಭೆಗೆ ಪ್ರಿಯಾಂಕಾ ಗಾಂಧಿ ಆಯ್ಕೆಗೆ ಕಸರತ್ತು
    ರಾಜ್ಯ ಸುದ್ದಿ May 14, 2022

    ಕರ್ನಾಟಕದಿಂದ ರಾಜ್ಯಸಭೆಗೆ ಪ್ರಿಯಾಂಕಾ ಗಾಂಧಿ ಆಯ್ಕೆಗೆ ಕಸರತ್ತು

    By adminMay 14, 2022No Comments2 Mins Read
    preyank gandhi

    ವಿಧಾನಸಭೆಯಿಂದ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ಚುನಾವಣೆಗೆ ವೇಳಾ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಆಕಾಂಕ್ಷಿಗಳ ಲಾಬಿ ಬಿರುಸುಗೊಂಡಿದ್ದು, ಕಾಂಗ್ರೆಸ್‍ನ ಪ್ರಭಾವಿ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಆರಿಸಿ ಕಳುಹಿಸುವ ತೆರೆಮರೆ ಕಸರತುಗಳು ಜೋರಾಗಿವೆ.

    ರಾಜ್ಯಸಭೆ ಸದಸ್ಯರಾದ ಬಿಜೆಪಿಯ ಕೆ.ಸಿ.ರಾಮಮೂರ್ತಿ, ನಿರ್ಮಿಲಾ ಸೀತಾರಾಮನ್, ಕಾಂಗ್ರೆಸ್‍ನ ಕೇಂದ್ರದ ಮಾಜಿ ಸಚಿವ ಜೈರಾಮ್ ರಮೇಶ್, ನಿಧನರಾದ ಆಸ್ಕರ್ ಫರ್ನಾಡಿಸ್ ಸೇರಿದಂತೆ ನಾಲ್ವರ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಕಾಂಗ್ರೆಸ್‍ನಿಂದ ಜೈರಾಮ್ ರಮೇಶ್ ಮರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

    ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ಆರಿಸಿ ಕಳುಹಿಸಲು ತಯಾರಿ ನಡೆಸಿದ್ದಾರೆ. ಗಾಂಧಿ ಕುಟುಂಬದೊಂದಿಗೆ ಅಪಾರ ನಿಷ್ಠೆ ಹೊಂದಿರುವ ಡಿ.ಕೆ.ಶಿವಕುಮಾರ್ ಪಕ್ಷದ ಅಧ್ಯಕ್ಷರಾದಾಗ ಪ್ರಿಯಾಂಕ ಗಾಂಧಿ ದೂರವಾಣಿ ಕರೆ ಮಾಡಿ ಶುಭಾಷಯ ಹೇಳಿದ್ದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸಂಸದರಾಗಿದ್ದ ಪ್ರಿಯಾಂಕ ಗಾಂಧಿ ಅವರು ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ನಡೆದ ಉತ್ತರ ಪ್ರದೇಶ ಚುನಾವಣೆಯಲ್ಲಿ ಗೆಲವಿಗಾಗಿ ಬಾರೀ ಕಸರತು ನಡೆಸಿದ ಪ್ರಿಯಾಂಕ ಯಶಸ್ವಿಯಾಗಲಿಲ್ಲ.

    ಬೇರೆ ಬೇರೆ ರಾಜ್ಯಗಳು ಪ್ರಿಯಾಂಕ ಅವರನ್ನು ರಾಜ್ಯಸಭೆಯಿಂದ ಆರಿಸಿ ಕಳುಹಿಸಲು ದುಂಬಾಲು ಬಿದ್ದಿವೆ. ಈ ಹಿಂದೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ರಾಜಕೀಯವಾಗಿ ಹಿನ್ನೆಡೆ ಅನುಭವಿಸಿದಾಗ ನವ ಹುರುಪು ತುಂಬಿದ್ದೆ ಕರ್ನಾಟಕ. ಚಿಕ್ಕಮಗಳೂರು ಲೋಕಸಭೆಯಿಂದ ಚುನಾಯಿತರಾದ ಇಂದಿರಾ ಗಾಂಧಿ ಮತ್ತೆ ರಾಜಕೀಯದಲ್ಲಿ ವಿಜೃಂಭಿಸಿದರು. ಹಾಗಾಗಿ ಪ್ರಿಯಾಂಕ ಗಾಂಧಿ ಅವರನ್ನು ಕರ್ನಾಟಕದಿಂದ ಆರಿಸಿ ಕಳುಹಿಸಿದರೆ ಮುಂದೆ ಉಜ್ವಲ ಭವಿಷ್ಯ ಇರಲಿದೆ ಎಂಬ ನಂಬಿಕೆಯನ್ನು ಕಾಂಗ್ರೆಸಿಗರು ಹೊಂದಿದ್ದಾರೆ.

    ಅದಕ್ಕಾಗಿ ಜೈರಾಮ್ ರಮೇಶ್ ಅವರಿಗೆ ಟಾಂಗ್ ಕೊಟ್ಟು ಪ್ರಿಯಾಂಕ ಗಾಂಧಿ ಅವರಿಗೆ ಮಣೆ ಹಾಕಲು ತೆರೆ ಮರೆಯ ಕಸರತು ನಡೆಯುತ್ತಿವೆ. ಜೈರಾಮ್ ರಮೇಶ್ ಅವರಿಂದ ರಾಜ್ಯ ರಾಜಕಾರಣಕ್ಕೆ ಯಾವುದೇ ನೆರವಾಗಿಲ್ಲ. ರಾಷ್ಟ್ರ ಮಟ್ಟದಲ್ಲೂ ಜಿ-23 ಬಳಗದಲ್ಲಿ ಜೈರಾಮ್ ರಮೇಶ್ ಗುರುತಿಸಿಕೊಂಡಿದ್ದರು. ಹೀಗಾಗಿ ಅವರನ್ನು ಮತ್ತೆ ಕರ್ನಾಟಕದಿಂದ ಚುನಾಯಿಸಬಾರದು ಎಂಬ ವಾದಗಳು ಕೇಳಿ ಬರುತ್ತಿವೆ.

    ರಾಜಸ್ಥಾನದ ಉದಯಪುರ್‍ನಲ್ಲಿ ನಡೆಯುತ್ತಿರುವ ಚಿಂತನ್ ಶಿವಿರ್‍ನಲ್ಲಿ ಒಂದು ಕುಟುಂಬ ಒಂದು ಟಿಕೆಟ್ ಎಂಬ ನಿಯಮ ರೂಪಿಸುವ ತಯಾರಿ ನಡೆದಿದೆ. ಅದು ಅಂಗೀಕಾರಗೊಂಡರೆ ಪ್ರಿಯಾಂಕ ಗಾಂಧಿ ಅವರ ರಾಜ್ಯಸಭೆ ಪ್ರವೇಶದ ಕನಸು ಭಗ್ನವಾಗಲಿದೆ. ಇಲ್ಲವಾದರೆ ಕರ್ನಾಟಕದಿಂದಲೇ ಅವರನ್ನು ರಾಜಕಾರಣದ ಮುಖ್ಯವಾಹಿನಿಗೆ ತರಬೇಕು ಎಂಬ ಉಮೇದುಗಳು ರಾಜ್ಯ ನಾಯಕರಲ್ಲಿ ಜೋರಾಗಿ ನಡೆಯುತ್ತಿವೆ.ಆದರೆ ದೆಹಲಿಯ ನಾಯಕರು ಜೈರಾಮ್ ರಮೇಶ್ ಅವರನ್ನು ಪುನರಾಯ್ಕೆ ಮಾಡುವಂತೆ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಜೈರಾಮ್ ರಮೇಶ್ ಬೇಡ ಎಂದಾದರೆ ರಾಜ್ಯಸಭೆ ಪ್ರವೇಶಿಸಲು ಹಲವು ನಾಯಕರು ನಾ ಮುಂದು ತಾ ಮುಂದು ಎಂದು ಮುಗಿ ಬಿದಿದ್ದಾರೆ.

    ಇನ್ನು ವಿಧಾನ ಪರಿಷತ್‍ನಲ್ಲಿ ಏಳು ಸ್ಥಾನಗಳು ತೆರವಾಗಲಿವೆ. ಆರ್.ಬಿ.ತಿಮ್ಮಾಪುರ, ಅಲ್ಲಂ ವೀರಭದ್ರಪ್ಪ, ಎಸ್.ವೀಣಾ ಅಚ್ಚಯ್ಯ, ಕೆ.ವಿ.ನಾರಾಯಣಸ್ವಾಮಿ, ಲಹರ್ ಸಿಂಗ್ ಸಿರೋಯಾ, ಎಚ್.ಎಂ.ರಮೇಶ್‍ಗೌಡ, ಲಕ್ಷ್ಮಣ ಸಂಗಪ್ಪ ಸವದಿ ಅವರಿಂದ ತೆರವಾಗುತ್ತಿರುವ ಏಳು ಸ್ಥಾನಗಳಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ನಿರಾಯಸವಾಗಿ ಗೆಲ್ಲಬಹುದಾಗಿದೆ. ಅದಕ್ಕಾಗಿ 30ಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದಾರೆ.

    ಎರಡರಲ್ಲಿ ಒಂದನ್ನು ಅಲ್ಪಸಂಖ್ಯಾತರಿಗೆ ಮತ್ತೊಂದನ್ನು ದಲಿತ ಸಮುದಾಯಕ್ಕೆ ನೀಡುವ ಚಿಂತನೆ ನಡೆದಿದೆ. ಮಾಜಿ ಸಚಿವ ಎಂ.ಆರ್.ಸೀತಾರಾಮ್, ಐವಾನ್ ಡಿ.ಸೋಜಾ, ಎಸ್.ಆರ್.ಪಾಟೀಲ್, ಜಯಮಾಲ, ಆರ್.ಬಿ.ತಿಮ್ಮಾಪುರ, ಅಲ್ಲಂ ವೀರಭದ್ರಪ್ಪ ಸೇರಿದಂತೆ ಅನೇಕರು ಸಾಲಿನಲ್ಲಿದ್ದಾರೆ. ಹಿಂದೆ ಸದಸ್ಯರಾಗಿ ಕೆಲಸ ಮಾಡಿದವರಿಗೆ ಅವಕಾಶ ನೀಡಬೇಕೆ ಅಥವಾ ಹೊಸ ಮುಖಗಳಿಗೆ ಮಣೆ ಹಾಕಬೇಕೆ ಎಂಬ ಚರ್ಚೆಗಳು ನಡೆಯುತ್ತಿವೆ. ಚಿಂತನ್ ಶಿವಿರ್ ನಂತರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗಳು ಶುರುವಾಗಲಿವೆ.

    ರಾಜ್ಯಸಭೆಗೆ ಎರಡನೇ ಅಭ್ಯರ್ಥಿ ಹಾಕುವುದು, ವಿಧಾನಸಭೆಗೆ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಜೆಡಿಎಸ್‍ಗೆ ಪೈಪೋಟಿ ನೀಡಲು ಕಾಂಗ್ರೆಸ್‍ನಲ್ಲಿ ಒಂದು ಬಣ ಪಟ್ಟು ಹಿಡಿದಿದೆ. ಆದರೆ ಕಾಂಗ್ರೆಸ್ ಉನ್ನತ ವಲಯದಲ್ಲಿ ಜೆಡಿಎಸ್ ಬಗ್ಗೆ ಮೃದು ಧೋರಣೆ ಇರುವುದರಿಂದ ಹೆಚ್ಚುವರಿ ಅಭ್ಯರ್ಥಿಗಳ ಕುರಿತು ಚರ್ಚಿಸಿ ತಿರ್ಮಾನಿಸುವಂತೆ ಸಲಹೆ ಕೇಳಿ ಬಂದಿದೆ.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!

    August 14, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ತುಮಕೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (EPFO) ಸ್ವಯಂಪ್ರೇರಿತ ನಿಯಮ ಅನುಸರಣೆಯನ್ನು ಉತ್ತೇಜಿಸಲು, ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಹಾಗೂ…

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.