nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಣಿಗಲ್‌ ನಲ್ಲಿ ಕಸಾಪ ಭವನದ ಗ್ರಂಥಾಲಯ ಲೋಕಾರ್ಪಣೆ:  “ರಾಜಕೀಯ ಸ್ವಾರ್ಥಕ್ಕೆ ಧರ್ಮ, ಜಾತಿಗಳ ಕಂದಕ ಸೃಷ್ಟಿ”
    ಕುಣಿಗಲ್ December 27, 2025

    ಕುಣಿಗಲ್‌ ನಲ್ಲಿ ಕಸಾಪ ಭವನದ ಗ್ರಂಥಾಲಯ ಲೋಕಾರ್ಪಣೆ:  “ರಾಜಕೀಯ ಸ್ವಾರ್ಥಕ್ಕೆ ಧರ್ಮ, ಜಾತಿಗಳ ಕಂದಕ ಸೃಷ್ಟಿ”

    By adminDecember 27, 2025No Comments2 Mins Read
    kunigal

    ಕುಣಿಗಲ್: ಇಂದಿನ ರಾಜಕಾರಣವು ತಮ್ಮ ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಧರ್ಮ, ಧರ್ಮಗಳ ನಡುವೆ, ಜಾತಿ, ಜಾತಿಗಳ ನಡುವೆ ಎತ್ತಿಕಟ್ಟುವಂತಹ ನೀಚ ಕೆಲಸ ಮಾಡಲಾಗುತ್ತಿದೆ, ಇದಕ್ಕೆ ಕುಮ್ಮಕ್ಕು ನೀಡಿದರೆ ಡಾ. ಬಿ.ಆರ್. ಅಂಬೇಡ್ಕರ್ ಕೊಟ್ಟ ಸಂವಿಧಾನ ಇನ್ನು ಹತ್ತು ವರ್ಷದಲ್ಲಿ ಇರುವುದಿಲ್ಲ ಎಂದು ಸಾಹಿತಿ ಚಾಣಗೆರೆ ವೆಂಕಟರಾಮಯ್ಯ ಕಳವಳ ವ್ಯಕ್ತಪಡಿಸಿದರು.

    ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಗ್ರಂಥಾಲಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


    Provided by
    Provided by

    ಡಾ.ಬಿ.ಆರ್. ಅಂಬೇಡ್ಕರ್, ಪ್ರಥಮ ಪ್ರಧಾನಿ ನೆಹರು ಅವರು ದೇಶವು ಜಾತ್ಯತೀತ, ಧರ್ಮತೀತ ದೇಶವಾಗಬೇಕೆಂದು ಸಂವಿಧಾನ ಕೊಟ್ಟರು, ಡಾ. ಅಂಬೇಡ್ಕರ್ ಅವರು ಸಂವಿಧಾನ ನೀಡದಿದ್ದರೆ ಈ ದೇಶ ಉಳಿಯುತ್ತಿರಲಿಲ್ಲ, ಶೂದ್ರರು, ದಲಿತರು, ಶ್ರಮಿಕರು ಬದುಕಲು ಸಾಧ್ಯವಿರುತ್ತಿರಲಿಲ್ಲ. ಇಂದು ಮನುವಾದ, ಮನುಸ್ಮೃತಿಯನ್ನು ತಂದು ಆ ಜಾಗಕ್ಕೆ ಕೂರಿಸಲು ಪ್ರಯತ್ನಿಸಲಾಗುತ್ತಿದೆ, ಹಾಗೇನಾದರೂ ಆ ಪವಿತ್ರ ಸ್ಥಳಕ್ಕೆ ಮನುವಾದಿಗಳನ್ನು ಕೂರಿಸಿದ್ದೇ ಆದಲ್ಲಿ ಎರಡು ವರೆ ಸಾವಿರಗಳ ವರ್ಷದ ಹಿಂದಕ್ಕೆ ಹೋಗಲಿದ್ದೇವೆ ಎಂದು ಎಚ್ಚರಿಸಿದರು.

    ಕನ್ನಡ ಉಳಿದಿರುವುದು ಹಳ್ಳಿಗಳಿಂದ: ಒಂದು ಕಾಲದಲ್ಲಿ ಕುಣಿಗಲ್ ಮತ್ತು ನಾಗಮಂಗಲ ತಾಲೂಕು ಎಂದರೇ ಬೆಂಗಳೂರಿನ ಜನ ತಾತ್ಸಾರದಿಂದ ಕಾಣುತ್ತಿದ್ದರು, ಆದರೆ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ ಉಳಿದಿರುವುದು ಕುಣಿಗಲ್, ಮಾಗಡಿ, ಮದ್ದೂರು, ಮಂಡ್ಯ, ತುಮಕೂರು, ನಾಗಮಂಗಲ ತಾಲೂಕುಗಳ ಗ್ರಾಮೀಣ ಭಾಗದಲ್ಲಿ ಎಂದು ಹೇಳಿದರು.

    ಜಿಲ್ಲಾ ನಿಯೋಜಿತ ಸಾಹಿತ್ಯ ಸಮ್ಮೇಳನಾಧ್ಯಕ್ಷ ಕರಿಗೌಡ ಬೀಚನಹಳ್ಳಿ ಮಾತನಾಡಿ, ಗ್ರಂಥಾಲಯಗಳಿಗೆ ದೇಶದಲ್ಲಿ ಬಹಳಷ್ಟು ಶಕ್ತಿ ಇದೆ, ಪ್ರಪಂಚವನ್ನು ಬೆಳಗಲು ಸೂರ್ಯ ಬೇಕು, ವ್ಯಕ್ತಿ ಬದುಕು ರೂಪಿಸಿಕೊಳ್ಳಲು ಪುಸ್ತಕಗಳು ಅವಶ್ಯಕ, ಈ ನಿಟ್ಟಿನಲ್ಲಿ ಈ ಹಿಂದೆ ವಿಶ್ವವಿದ್ಯಾಲಯ ಮತ್ತು ಗ್ರಂಥಾಲಯಗಳಲ್ಲಿ ಓದುವವರ ಸಂಖ್ಯೆ ದುಪ್ಪಟ್ಟಾಗಿತ್ತು ಆದರೆ ಈಗ ವಿಶ್ವವಿದ್ಯಾಲಯಗಳಲ್ಲಿ ಅಗತ್ಯವಿರುವ ಗ್ರಂಥಾಲಯಗಳು ಇಲ್ಲ, ಓದುವವ ಸಂಖ್ಯೆ ಸಹ ಇಳಿಮುಖವಾಗಿದೆ, ಈ ನಿಟ್ಟಿನಲ್ಲಿ ಕುಣಿಗಲ್ ಗ್ರಂಥಾಲಯ ಪ್ರಾರಂಭ ಮಾಡಿರುವುದು ಸಂತಸದ ವಿಚಾರವಾಗಿದೆ ಎಂದರು.

    ಮಾಜಿ ಸಚಿವ ಡಿ. ನಾಗರಾಜಯ್ಯ ಮಾತನಾಡಿ ನಾನು ಶಾಸಕನಾಗಿದ್ದ ಅವಧಿಯಲ್ಲಿ ಕಸಾಪ ಕಟ್ಟಡದ ನೆಲ ಅಂತಸ್ತಿನ ಕಟ್ಟಡಕ್ಕೆ ಶಾಸಕರ ನಿಧಿಯಿಂದ ಅನುದಾನ ನೀಡಿದೆ, ಈಗ ಮೇಲಂತಸ್ತಿನ ಕಟ್ಟಡಕ್ಕೆ ಸಂಸದರ ನಿಧಿಯಿಂದ ಅನುದಾನ ಕೊಡಿಸಲು ಪ್ರಯತ್ನಿಸುತ್ತೇನೆ ಎಂದರು.

    ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಲಿಂಗಪ್ಪ, ಸಾಹಿತಿ ನಾರಾಯಣ ಹೊಡಾಘಟ್ಟ, ಲೇಖಕ ಸೊಂದಲಗೆರೆ ಲಕ್ಷ್ಮೀಪತಿ, ವೆಗೊಲ ಇಂಡಿಯಾ ಪ್ರೈ.ಲಿ ಪ್ರಧಾನ ವ್ಯವಸ್ಥಾಪಕ ಜಗದೀಶ್ ಟಿ. ನಾಯಕ್ ಮಾತನಾಡಿದರು. ಈ ವೇಳೆ ಲೇಖಕ ಕೆ. ಚಂದ್ರಕೃಷ್ಣಪ್ಪ ಅವರ ವಿಚಾರ ಸಾಹಿತ್ಯ ಕೃತಿ ಬಿಡುಗಡೆ ಮಾಡಲಾಯಿತು, ಲೇಖಕಿ ವೈ. ಜಿ. ವೆಂಕಟೇಶಮ್ಮ ಅವರಿಗೆ ಮಲ್ಲಮ್ಮ ಪಾಟೀಲ್ ನಾರಸೀಗೌಡ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ಸನ್ಮಾನ: ನಿಕಟ ಪೂರ್ವ ಅಧ್ಯಕ್ಷರಾದ ತಗಡೂರು ವೀರಭದ್ರಪ್ಪ, ಜಿ. ಬಿ. ಮಲ್ಲಪ್ಪ, ಕೆ. ಹೆಚ್. ವೆಂಕಟೇಶ್, ಗಾಯಿತ್ರಿ ರಾಜು, ದಿನೇಶ್ ಕುಮಾರ್, ಮತ್ತು ವೃತ್ತ ನಿರೀಕ್ಷಕ ಪ್ರಮೋದ್ ಗೌಡ, ಪ್ರಗತಿ ಹೆಚ್. ಆರ್. ಸರ್ವಿಸ್ ಪ್ರೈ. ಲಿ ಮಾಲೀಕ ನೀಲತ್ತಹಳ್ಳಿ ಜಿ. ರವಿಕುಮಾರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಸಿ. ಶಿವಣ್ಣ, ನಿವೃತ್ತ ಉಪನ್ಯಾಸಕ ವಿನಾಯಕಶಾಸ್ತ್ರಿ ಅವರನ್ನು ಸನ್ಮಾನಿಸಲಾಯಿತು.

    ಕಾರ್ಯಕ್ರಮದಲ್ಲಿ ಕಸಾಪ ಅಧ್ಯಕ್ಷ ಡಾ. ಕಪನಿಪಾಳ್ಯ ರಮೇಶ್, ಪ್ರಧಾನ ಕಾರ್ಯದರ್ಶಿಗಳಾದ ಸಿದ್ಧಲಿಂಗಸ್ವಾಮಿ, ಜಯರಾಮಯ್ಯ, ಕೋಶಾಧ್ಯಕ್ಷ ವಿ. ಎನ್. ರಾಮಣ್ಣ, ನಿರ್ದೇಶಕರಾದ ಕೆ. ಎಲ್. ಬೋರೇಗೌಡ, ಕೆ. ಆರ್. ರಂಗನಾಥ್, ದಲಿತ್ ನಾರಾಯಣ್, ಕೆ. ಎನ್. ಲೋಕೇಶ್, ಜೀವಂದರ್ ಕುಮಾರ್, ಉಮೇಶ್, ಪ್ರಸಾದ್ ನಿಡಸಾಲೆ, ಲೀಲಾವತಿ, ಪರೀಫ್ ಉಲ್ಲಾ, ಎಂ. ಡಿ. ಮೋಹನ್, ಹೋಬಳಿ ಅಧ್ಯಕ್ಷರಾದ ಶಿವಕುಮಾರಸ್ವಾಮಿ, ಲಕ್ಷ್ಮೀನಾರಾಯಣ್ ಮತ್ತಿತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ

    January 22, 2026

    ಜನವರಿ 17: ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ

    January 16, 2026

    ಕುಣಿಗಲ್ ಸಹಕಾರಿ ರಂಗಕ್ಕೆ ತಾರತಮ್ಯವಾಗಿದ್ದಲ್ಲಿ ಸರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ

    December 17, 2025

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ಕೊರಟಗೆರೆ : ಸಿದ್ದರಬೆಟ್ಟದಲ್ಲಿ ಈ ಇದೇ ಮೊದಲ ಬಾರಿಗೆ ಶಿವರಾತ್ರಿ ಹಬ್ಬದ ಜಾಗರಣೆಯನ್ನ ಧರ್ಮ ಪ್ರಚಾರ, ಧರ್ಮದ ಜಾಗೃತಿ, ಹಾಗೂ…

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.