ಬೆಳಗಾವಿ: ಖಾಸಗಿ ಫೈನಾನ್ಸ್ ವಿರುದ್ಧ 25 ಕೋಟಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಸಂತ್ರಸ್ತರು ಫೈನಾನ್ಸ್ ಮತ್ತು ಆಡಳಿತ ಮಂಡಳಿ ಸದಸ್ಯರ ಮನೆಗಳ ಮುಂದೆ ಪ್ರತಿಭಟನೆ ನಡೆಸಿದ ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ನಡೆದಿದೆ.
ಘಟಪ್ರಭಾ ಪಟ್ಟಣದಲ್ಲಿರುವ ನವೋದಯ ಫೈನಾನ್ಸ್, ಜಗಜ್ಯೋತಿ ಸೌಹಾರ್ದ ಸಹಕಾರಿ ಸಂಘವು ಸರ್ವಜ್ಞ ಚಿಟ್ ಹೆಸರಿನಲ್ಲಿ ಅಂದಾಜು 25 ಕೋಟಿ ರೂಪಾಯಿ ವಂಚನೆ ಆರೋಪ ಮಾಡಿದ್ದಾರೆ. ಹೀಗಾಗಿ ವಂಚನೆಗೊಳಗಾದವರು ಫೈನಾನ್ಸ್ನ ಆಡಳಿತ ಮಂಡಳಿ ಮತ್ತು ಸದಸ್ಯರ ಮನೆಗಳ ಮುಂದೆ ಪ್ರತಿಭಟನೆ ನಡೆಸಿದರು.
ಈ ವೇಳೆ ಮನೆಯ ಮುಂದೆ ಬೊಬ್ಬೆಹಾಕಿ, ತಮಟೆ, ಪಾತ್ರೆಗಳನ್ನು ಬಾರಿಸಿ ಪ್ರತಿಭಟನೆ ನಡೆಸಿದ ಜನರು, ನಮ್ಮ ದುಡಿದ ಹಣ ವಾಪಸ್ ಕೊಡಿ ಎಂದು ಘೋಷಣೆ ಕೂಗಿದರು.
ಇತ್ತ ಜನರ ಪ್ರತಿಭಟನೆಗೆ ಹೆದರಿದ ಆಡಳಿತ ಮಂಡಳಿ ಅಧ್ಯಕ್ಷ ಅಣ್ಣಪ್ಪ ಸೇರಿ ಸದಸ್ಯರು ಪರಾರಿ ಆಗಿದ್ದಾರೆ. ಗ್ರಾಹಕರು ಠೇವಣಿ ಇಟ್ಟ ಹಣದಲ್ಲಿ ಆಡಳಿತ ಮಂಡಳಿ ಸದಸ್ಯರು ಬೇರೆಡೆ ಆಸ್ತಿ ಖರೀದಿಸಿದ ಆರೋಪವಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


