ತುರುವೇಕೆರೆ: ಜೂನ್ 27 ರಂದು ತುರುವೇಕೆರೆ ತಾಲೂಕಿನಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ.
ಜಯಂತಿಯನ್ನು ತಾಲೂಕು ಮಟ್ಟದ ನಾಡಹಬ್ಬದ ರೀತಿಯಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲು ಸಜ್ಜಾಗಿದ್ದು, ಇದರ ಸಂಪೂರ್ಣ ನೇತೃತ್ವವನ್ನು ತಾಲೂಕಿನ ಶಾಸಕರಾದ ಎಂ.ಟಿ.ಕೃಷ್ಣಪ್ಪನವರು ವಹಿಸಲಿದ್ದಾರೆ ಎಂದು ಒಕ್ಕಲಿಗ ಸಂಘದ ಅಧ್ಯಕ್ಷರಾದ ವಕೀಲರಾದ ಪಿ.ಹೆಚ್.ಧನಪಾಲ್ ತಿಳಿಸಿದರು.
ತುರುವೇಕೆರೆ ಪಟ್ಟಣದ ದಬ್ಬೆಘಟ್ಟ ರಸ್ತೆಯಲ್ಲಿರುವ ಬಿ ಜಿ ಎಸ್ ಸಮುದಾಯ ಭವನದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಂಘವು ಸಂಪೂರ್ಣವಾಗಿ ಕಾರ್ಯಕ್ರಮದಲ್ಲಿ ತೊಡಗಿಕೊಂಡಿದ್ದು ಈ ಬಾರಿಯ ಜಯಂತಿಯನ್ನು ಜಾತ್ಯಾತೀತವಾಗಿ ಆಚರಿಸಬೇಕು ಎಂಬ ಪರಿಕಲ್ಪನೆಯನ್ನು ಮಾನ್ಯ ಶಾಸಕರು ಸೂಚನೆ ನೀಡಿದ್ದಾರೆ ಅದರಂತೆಯೇ ಈಗಾಗಲೇ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿಯೂ ತೀರ್ಮಾನವಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ನಶಿಸಿ ಹೋಗುತ್ತಿರುವ ಸ್ಥಳೀಯ ಜಾನಪದ ಪ್ರಕಾರಗಳನ್ನು ಗುರುತಿಸಿ ಕಲಾವಿದರುಗಳನ್ನು ಮುನ್ನಡೆಗೆ ತರಬೇಕು ಕಲೆಗಳನ್ನು ಉಳಿಸಬೇಕು ಎಂಬ ಯೋಜನೆಯನ್ನು ಹೊಂದಿದ್ದು ಕೋಲಾಟ, ಕಹಳೆ, ಸೋಮನ ಕುಣಿತ, ನಂದಿ ಧ್ವಜದಂತಹ ಕಲಾಪ್ರಕಾರಗಳು ಮೆರವಣಿಗೆ ಹೆಜ್ಜೆ ಹಾಕಲಿದ್ದು, ಮೆರವಣಿಗೆ ರಂಗನ್ನು ಹೆಚ್ಚಿಸಲಿದೆ ಎಂದರು.
ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಮಾಯಸಂದ್ರದ ಖಾಸಗಿ ಬಸ್ ಮನೋಜ್ ಟೂರ್ ಅಂಡ್ ಟ್ರಾವೆಲ್ಸ್ ಮಾಲೀಕರಾದ ಲೋಕೇಶ್ ರವರು ಜನಗಳನ್ನ ಉಚಿತವಾಗಿ ಕರೆತರುವ ಜವಾಬ್ದಾರಿಯನ್ನು ಹೊತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಂ.ಎನ್. ಚಂದ್ರೇಗೌಡ, ಡಿ.ಪಿ.ರಾಜು, ಎಲ್ ಐಸಿ ರಾಜಣ್ಣ, ಪ್ರೊಫೆಸರ್ ಪುಟ್ಟರಂಗಪ್ಪ, ಸಂಗಲಾಪುರ ಶಂಕ್ರಣ್ಣ ಸೇರಿದಂತೆ ಮತ್ತಿತರರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA