nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ

    August 13, 2026

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    • ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!
    • ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ
    • ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ
    • ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ
    • ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
    • ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    • ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಲ್ ಜೀವನ್ ಮಿಷನ್: ಸಮುದಾಯದವರು ಸಕ್ರಿಯವಾಗಿ ಪಾಲ್ಗೊಳ್ಳಿ
    ತುರುವೇಕೆರೆ March 5, 2022

    ಜಲ್ ಜೀವನ್ ಮಿಷನ್: ಸಮುದಾಯದವರು ಸಕ್ರಿಯವಾಗಿ ಪಾಲ್ಗೊಳ್ಳಿ

    By adminMarch 5, 2022No Comments2 Mins Read

    ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಜಲ್ ಜೀವನ್ ಮಿಷನ್ ಯೋಜನೆಯು ಆಯಾ ಗ್ರಾಮಗಳಲ್ಲಿ ಅನುಷ್ಠಾನವಾಗಬೇಕಾದರೆ ಸಮುದಾಯವು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತುರುವೇಕೆರೆ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಅವರು ತಿಳಿಸಿದರು.

    ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಹಾಗೂ ಸ್ನೇಹ ಜೀವನ ಫೌಂಡೇಶನ್(ರಿ) ಗುಬ್ಬಿ ಇವರ ಸಂಯುಕ್ತಾಶ್ರಯದಲ್ಲಿಂದು ತುರುವೇಕೆರೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ ನೀರು ಮತ್ತು ನೈರ್ಮಲ್ಯ ಕುರಿತು ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

    ಗ್ರಾಮೀಣ ಭಾಗದ ಪ್ರತಿ ಮನೆಗೂ ನಳ ಸಂಪರ್ಕ ಒದಗಿಸಿ ಪ್ರತಿ ವ್ಯಕ್ತಿಗೆ 55 ಲೀಟರ್ ಶುದ್ಧವಾದ ನೀರನ್ನು ಒದಗಿಸುವುದು ಜಲ ಜೀವನ್ ಮಿಷನ್ ಯೋಜನೆಯ ಪ್ರಮುಖ ಉದ್ದೇಶ. ಅಲ್ಲದೇ ಸರ್ಕಾರದ ಹಲವಾರು ಯೋಜನೆಗಳು ನೀರು ಮತ್ತು ನೈರ್ಮಲ್ಯದ ವಿಚಾರವಾಗಿ ಕಾರ್ಯನಿರ್ವಹಿಸುತ್ತಿವೆ. ನೀರು ಅತ್ಯಮೂಲ್ಯವಾದುದ್ದು, ಪ್ರತಿಯೊಂದು ಹನಿ ನೀರನ್ನು ನಾವು ಶೇಖರಣೆ ಮಾಡಬೇಕು. ಅದಕ್ಕಾಗಿಯೇ ಪ್ರತಿಯೊಂದು ಮನೆಯಲ್ಲಿ ಮಳೆ ನೀರು ಕೊಯ್ಲು ಪದ್ದತಿಯನ್ನು ಅಳವಡಿಸಿಕೊಂಡರೆ ಮುಂದಿನ ಪೀಳಿಗೆ ನೀರನ್ನು ಸರಿಯಾದ ಪ್ರಮಾಣದಲ್ಲಿ ಒದಗಿಸಬಹುದು. ಸರ್ಕಾರದ ಯೋಜನೆಯ ಬಗ್ಗೆ ನಾವೆಲ್ಲರೂ ಸರಿಯಾದ ಮಾಹಿತಿಯನ್ನು ತಿಳಿಸದಾಗ ಮಾತ್ರ ಯೋಜನೆ ಯಶಸ್ವಿಯಾಗುತ್ತದೆ. ಜೊತೆಗೆ ಪ್ರತಿ ಮನೆಯಲ್ಲಿ ಮಳೆ ನೀರು ಕೊಯ್ಲು ಪದ್ದತಿ ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

    ಕಿರಿಯ ಅಭಿಯಂತರರಾದ ರವಿಕುಮಾರ್ ಅವರು ಮಾತನಾಡಿ, ಜಲ್ ಜೀವನ್ ಮಿಷನ್ ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಬರಬಹುದಾದ ತಾಂತ್ರಿಕ ಅಂಶಗಳನ್ನು ಕುರಿತು ಸಂಪೂರ್ಣವಾಗಿ ತಿಳಿಸಿದರಲ್ಲದೇ ಪ್ರಸ್ತುತ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಹಾಗೂ ಗ್ರಾಮ ಕ್ರಿಯಾ ಯೋಜನೆ ಸಿದ್ಧಪಡಿಸಲು ಅವಶ್ಯಕವಿರುವ ಅಂಶಗಳ ಬಗ್ಗೆ ಮಾಹಿತಿ ನೀಡಿದರು. ಸಮುದಾಯ ಕಾಮಗಾರಿಗೆ ಪ್ರತಿಯೊಬ್ಬರೂ ಕೈ ಜೋಡಿಸಿದಾಗ ಕಾಮಗಾರಿಗಳು ಶೀಘ್ರವಾಗಿ ಪೂರ್ಣಗೊಳ್ಳುತ್ತವೆ ಎಂದರು.
    ಸಂಪನ್ಮೂಲ ವ್ಯಕ್ತಿ ಉಮೇಶ್ ಅವರು ಮಾತನಾಡಿ, ಜಲ್ ಜೀವನ್ ಮಿಷನ್ ಕಾರ್ಯಕ್ರಮ ಅನುಷ್ಠಾನ ಹಂತದಲ್ಲಿ ಗ್ರಾಮ ಪಂಚಾಯಿತಿ ಮತ್ತು ಚುನಾಯಿತ ಸದಸ್ಯರುಗಳ ಪಾತ್ರ ಹಾಗೂ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರ ಜವಾಬ್ದಾರಿಗಳ ಬಗ್ಗೆ ತಿಳಿಸಿದರು.

    ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಅರುಣ್‌ಕುಮಾರ್ ಅವರು ಮಾತನಾಡಿ, ಜಲ್ ಜೀವನ್ ಮಿಷನ್ ಯೋಜನೆ ಗುರಿ ಮತ್ತು ಉದ್ದೇಶಗಳ ಬಗ್ಗೆ ಕುರಿತು ಹಾಗೂ ಪ್ರಸ್ತುತ ಅನುಷ್ಠಾನವಾಗುತ್ತಿರುವ ಗ್ರಾಮಗಳಲ್ಲಿ ಕಾಮಗಾರಿ ಗುಣಮಟ್ಟ ಪರಿಶೀಲನೆ ಮತ್ತು ಮೇಲ್ವಿಚಾರಣೆ ಬಗ್ಗೆ ಮಾಹಿತಿ ನೀಡಿದರು.
    ಕಾರ್ಯಾಗಾರದಲ್ಲಿ ತುರುವೇಕೆರೆ ತಾಲೂಕು ಪಂಚಾಯತ್‌ನ ಸಹಾಯಕ ನಿರ್ದೇಶಕರಾದ ಸುಭಾಷ್ ಚಂದ್ರ, ಎಲ್ಲಾ ಗ್ರಾ.ಪಂ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅನುಷ್ಠಾ ಬೆಂಬಲ ಸಂಸ್ಥೆಯ ಕಿರಣ್, ಗೋವರ್ಧನ್ ಸೇರಿದಂತೆ ಮತ್ತಿತರರು ಹಾಜರಿದ್ದರು.

    ವರದಿ: ಮಂಜುನಾಥ್, ಗುಬ್ಬಿ.

     

    admin
    • Website

    Related Posts

    ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ

    August 5, 2026

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ

    August 13, 2026

    ಕೊರಟಗೆರೆ: ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಯಾವುದೇ ಕೊರತೆಯಿಲ್ಲ, ಆದರೆ ಪ್ರಾಮಾಣಿಕತೆಯ ಕೊರತೆ ಕಂಡುಬರುತ್ತಿದೆ. ಇದನ್ನು ಹೋಗಲಾಡಿಸಲು ಶಿಕ್ಷಣದ ಜೊತೆಗೆ ಸಂಸ್ಕಾರ, ಮಾನವೀಯತೆ…

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.