nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಿನ್ನರಿ ಕಲಾವಿದ ದೊಡ್ಡಬಳ್ಳಾಪುರದ ಮುನಿಸ್ವಾಮಿ ಅವರಿಗೆ ಡಾ.ಬಾಬು ಜಗಜೀವನರಾಂ ಪ್ರಶಸ್ತಿ
    ಜಿಲ್ಲಾ ಸುದ್ದಿ April 8, 2022

    ಕಿನ್ನರಿ ಕಲಾವಿದ ದೊಡ್ಡಬಳ್ಳಾಪುರದ ಮುನಿಸ್ವಾಮಿ ಅವರಿಗೆ ಡಾ.ಬಾಬು ಜಗಜೀವನರಾಂ ಪ್ರಶಸ್ತಿ

    By adminApril 8, 2022No Comments2 Mins Read
    muniswamy

    ದಕ್ಕಲ ಆದಿಜಾಂಬವ ಪುರಾಣವನ್ನು ಹಾಡುವ ಕಿನ್ನರಿ ಕಲಾವಿದ ದೊಡ್ಡಬಳ್ಳಾಪುರದ ಮುನಿಸ್ವಾಮಿ ಅವರಿಗೆ ಕರ್ನಾಟಕ ಸರ್ಕಾರ ಡಾ.ಬಾಬು ಜಗಜೀವನರಾಂ ಅವರ 115 ನೇ ಜಯಂತಿಯ ದಿನ, ₹.500000 ನಗದು, ಸ್ಮರಣಿಕೆಗಳೊಂದಿಗೆ ಡಾ.ಬಾಬು ಜಗಜೀವನರಾಂ ಪ್ರಶಸ್ತಿಯನ್ನು ನೀಡಿ ಗೌರವಿಸಿರುತ್ತದೆ.

    ದಕ್ಕಲ ಆದಿಜಾಂಬವ ಪುರಾಣ ಕಾವ್ಯವನ್ನು ಹಾಡುವ ಅಪರೂಪದ ಏಕೈಕ ಕಲಾವಿದ ಮುನಿಸ್ವಾಮಿ. ಈ ಪರಂಪರೆಯನ್ನು ಉಳಿಸಿ ಬೆಳೆಸಬೇಕೆಂಬ ಹಂಬಲದಿಂದ ಮತ್ತು ಅಪರೂಪದ ಕಲಾವಿದ ಮುನಿಸ್ವಾಮಿಯವರ ಬದುಕನ್ನು ಕಟ್ಟಿಕೊಡಬೇಕೆಂಬ ಕಳಕಳಿಯಿಂದ ಪತ್ರಕರ್ತ ಮಿತ್ರ ಡಿ.ಎಂ.ಘನಶ್ಯಾಮ ಅವರು 13-11-2017 ರ ಪ್ರಜಾವಾಣಿ ಪತ್ರಿಕೆಯಲ್ಲಿ  ಪರಿಚಯ ಲೇಖನ ಬರೆದು ಪ್ರಕಟಿಸಿದ್ದರು. ಇದಾದ ನಂತರದಲ್ಲಿ ಹಲವಾರು ಸಭೆ ಸಮಾರಂಭಗಳಲ್ಲಿ ವಿಚಾರ ಸಂಕಿರಣ ಹಾಗೂ ನಾಯಕತ್ವ ತರಬೇತಿ ಕಾರ್ಯಾಗಾರಗಳಲ್ಲಿ ನಾನು ದಕ್ಕಲ ಕಲಾವಿದ ಮುನಿಸ್ವಾಮಿಯನ್ನು ಕುರಿತು ಹಾಗೂ ಆದಿಜಾಂಬವ ಪುರಾಣವನ್ನು ಕುರಿತು ಚಿಂತನೆಗಳನ್ನು ಮಂಡಿಸಿರುತ್ತೇನೆ.

    ಆದಿಜಾಂಬವ ಪುರಾಣ ಅತ್ಯಂತ ಅಗತ್ಯವಾಗಿ ಸಂಗ್ರಹವಾಗಿ ಪ್ರಕಟವಾಗಬೇಕಾದ ಜನಪದ ಮಹಾಕಾವ್ಯ.  ಜಂಬೂದ್ವೀಪದ ಆದಿಮ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬರುತ್ತಿರುವವರು ಮುನಿಸ್ವಾಮಿಯಂತಹ ಅಸಲಿ ಜನಪದ ಕಲಾವಿದರು. ಈ ಕಾವ್ಯ ತುಂಬಾ ಮುಖ್ಯವಾದ ಹಾಗೂ ದಾಖಲಾಗಲೇಬೇಕಾದ ಮಹಾಕಾವ್ಯ,

    ಹಿಂದೆ ಪಿಚ್ಚಳ್ಳಿ ಶ್ರೀನಿವಾಸ ಅವರು ಜಾನಪದ ಅಕಾಡೆಮಿಯ ಅಧ್ಯಕ್ಷರಾಗಿದ್ದಾಗ ಚಿಂತಕ ಕೋಲಾರ ಲಕ್ಷ್ಮೀಪತಿ ಅವರನ್ನು ಮತ್ತು ನನ್ನನ್ನೂ ಸಂಪರ್ಕಿಸಿ ಈ ಕಾವ್ಯದ ಸಂಶೋಧನೆಗೆ ಯೋಜನೆ ರೂಪಿಸಿದ್ದರು .ಪಿಚ್ಚಳ್ಳಿಯವರ ಅಧಿಕಾರದ ಅವಧಿಯಲ್ಲೇ ಈ ಕೆಲಸ ಕೈಗೂಡಬೇಕಿತ್ತು. ಇದು ಕಳೆದುಹೋಗುವ ಮುನ್ನವೇ ದಾಖಲಾಗಬೇಕಾದ ಅಗತ್ಯವಿದೆ. ಈಗ ಕಲಾವಿದ ಮುನಿಸ್ವಾಮಿಗೆ ವಾಸಿಸಲು ಮನೆ ಇರದೆ ನಿರ್ಗತಿಕ ಸ್ಥಿತಿಯಲ್ಲಿದ್ದಾರೆ.

    ಆದಿ ಜಾಂಬವ ಅಥವಾ ಮಹಾ ಆದಿಗ: ಆದಿಜಾಂಬವನು ಮಾದಿಗರ ಮೂಲ ಪುರುಷ. ಜಾನಪದ ಮೌಖಿಕ ಪುರಾಣ ಕಾವ್ಯಗಳ ಪ್ರಕಾರ ಅವನು ವಿಶ್ವಸೃಷ್ಡಿಗೂ ಆರು ತಿಂಗಳು ಮೊದಲೇ ಹುಟ್ಟಿದ ಆದಿ ಪುರುಷ. ವಿಶ್ವವನ್ನು ತಾನೆ ಸೃಷ್ಟಿಸಿದ ಆದಿ ವ್ಯಕ್ತಿಯಾದ ಕಾರಣ “ಆದಿಗ”. ವಿಶ್ವಸೃಷ್ಟಿಗೂ ಮೊದಲೇ ಈತನಿದ್ದ ಕಾರಣ ” ಮಹಾ ಆದಿಗ” ಆಗಿದ್ದಾನೆ. ಮಹಾಆದಿಗ ವ್ಯಕ್ತಿಯು ಮಾದಿಗ ಆಗಿ ಮತ್ತು ಅವನ ಸಂತತಿಯವರು ಮಾದಿಗರಾಗಿ ನಾಮಾಂಕಿತರಾಗಿದ್ದಾರೆ. ಆದಿಜಾಂಬವನೇ ಜಂಬೂದ್ವೀಪದ ಆದಿ ಮಾದಿಗ. ಭಾರತ ದೇಶದ ಪ್ರಾಚೀನ ಹೆಸರು ಜಂಬೂದ್ವೀಪ. ಜಂಬೂವ ಅರ್ಥಾತ್ ಜಾಂಬವನು ಭಾರತ ದೇಶದ ಎಲ್ಲಾ ಜೀವಿಗಳಿಗೆ ಮತ್ತು ಜನಾಂಗಗಳಿಗೆ ಹಿರಿಯವನಾಗಿ ಮೊದಲೇ ಹುಟ್ಟಿದ ಪಿತಾಮಹನಾದ್ದರಿಂದ ಇವನನ್ನು ‘ ಆದಿ ತಾತ ಅಥವಾ ತಾತ ಜಾಂಬವ’ ಎಂದು ಕರೆಯುತ್ತಾರೆ. ಎಮ್ಮಾ ರೋಶಾಂಬು ಕ್ಲೌ ಹೇಳುವಂತೆ “Aryans made their conquests, and this man Adi Jambava, who was ‘ the first Madiga’ was one of those who were in possessions of the soil when the invaders came”. ಅಂದರೆ ಆರ್ಯರು ಭಾರತದ ಮೇಲೆ ದಂಡೆಯಾತ್ರೆ ಮಾಡುವ ಮೊದಲೇ ಆದಿಜಾಂಬವನು ಈ ನೆಲದ ಒಡೆಯನಾಗಿದ್ದ ಕಾರಣ ಮಾದಿಗರ ವಶದಲ್ಲಿ ಇಡೀ ಭಾರತ ದೇಶವಿತ್ತು. ಆದಿಜಾಂಬವ ಪುರಾಣವು ಈ ಜಂಬೂದ್ವೀಪದ ಆದಿಭಾಗದ ಕಥನವನ್ನು ಮಂಡಿಸುತ್ತದೆ.

    ನಾನು ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಡಾ.ರಹಮತ್ ತರೀಕೆರೆ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡು “ಕರ್ನಾಟಕ ಆದಿಜಾಂಬವ ಮಾತಂಗ ಪರಂಪರೆ ; ಸಾಂಸ್ಕೃತಿಕ ವಿಶ್ಲೇಷಣೆ” ಎಂಬ ಪಿಎಚ್.ಡಿ ಮಹಾಪ್ರಬಂಧ ರೂಪಿಸಿಕೊಟ್ಟಿದ್ದು , ಇದರಲ್ಲಿ ಆದಿಜಾಂಬ ಪುರಾಣದ ಸಂಪೂರ್ಣವಾದ ಕಥನವನ್ನು ವಿಶ್ಲೇಷಿಸಿರುತ್ತೇನೆ. ಆದರೆ ಕಾವ್ಯದ Audio visual ದಾಖಲೀಖರಣ ಮತ್ತು ಕಾವ್ಯದ ಸಂಪಾದನೆ ಮತ್ತು ಪ್ರಕಟಣೆ ಆಗಬೇಕಾಗಿದೆ. ಇತ್ತ ಕಡೆಗೆ ನೆರವಿನ ಹಸ್ತ ಚಾಚಿದರೆ ನಾನು, ಲಕ್ಷ್ಮೀಪತಿ ಕೋಲಾರ, ಕೋಟಿಗಾನಹಳ್ಳಿ ರಾಮಯ್ಯ, ಡಾ.ಎ.ಎಸ್.ಪ್ರಭಾಕರ್ ಮುಂತಾದವರು ಈ ಕಾರ್ಯವನ್ನು ಯಶಸ್ವಿಯಾಗಿ ನಡೆಸಿಕೊಡಲು ಸಿದ್ಧರಿದ್ದೇವೆ

    ಡಾ.ವಡ್ಡಗೆರೆ ನಾಗರಾಜಯ್ಯ 8722724174, 9448538412

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

     ರಾಘವೇಂದ್ರ ಅಡಿಗ ಎಚ್ಚೆನ್. ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು’ ಚಲನಚಿತ್ರದ ಅಧಿಕೃತ ಶೀರ್ಷಿಕೆ…

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.