nammatumakuru

    Subscribe to Updates

    Get the latest creative news from FooBar about art, design and business.

    What's Hot

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026

    ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ

    April 10, 2026
    Facebook Twitter Instagram
    ಟ್ರೆಂಡಿಂಗ್
    • ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!
    • ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ
    • ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ
    • ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇರಳದಲ್ಲಿ ಮಂಕಿಪಾಕ್ಸ್ ರಾಜ್ಯದಲ್ಲಿ ಅಲರ್ಟ್
    ರಾಷ್ಟ್ರೀಯ ಸುದ್ದಿ July 20, 2022

    ಕೇರಳದಲ್ಲಿ ಮಂಕಿಪಾಕ್ಸ್ ರಾಜ್ಯದಲ್ಲಿ ಅಲರ್ಟ್

    By adminJuly 20, 2022No Comments2 Mins Read
    kerala

    ದೇಶದಲ್ಲಿ ೨ನೇ ಮಂಕಿಪಾಕ್ಸ್ ರೋಗ ದೃಢಪಟ್ಟಿದ್ದು, ಕೇರಳದ ಕಣ್ಣೂರಿನ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಕಂಡು ಬಂದ ಹಿನ್ನೆಲೆಯಲ್ಲಿ ಕೇರಳ ಮತ್ತು ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಿಂದ ರಾಜ್ಯ ಪ್ರವೇಶಿಸುವವರ ಮೇಲೆ ಕಣ್ಗಾವಲು ಇಡಲಾಗಿದ್ದು, ಪ್ರತಿಯೊಬ್ಬರನ್ನು ತಪಾಸಣೆ ಮಾಡಲಾಗುತ್ತಿದೆ.

    ಕಳೆದ ಜುಲೈ ೧೩ ರಂದು ದುಬೈನಿಂದ ಮಂಗಳೂರು ಮೂಲಕ ಕಣ್ಣೂರಿಗೆ ಆಗಮಿಸಿದ ೩೧ ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್ ಖಚಿತ ಪಟ್ಟಿತ್ತು. ಈತ ಮಂಗಳೂರಿಗೆ ವಿಮಾನದಲ್ಲಿ ಬಂದು ನಂತರ ಕಣ್ಣೂರಿಗೆ ತೆರಳಿದ್ದು, ಈತನ ಜತೆ ಮಂಗಳೂರಿಗೆ ಆಗಮಿಸಿದ್ದ ವಿಮಾನದಲ್ಲಿದ್ದ ೩೦ ಸಹ ಪ್ರಯಾಣಿಕರನ್ನು ಹೋಂ ಐಸೋಲೇಷನ್‌ನಲ್ಲಿಡಲಾಗಿದೆ.ಈತನ ಜತೆ ವಿಮಾನದಲ್ಲಿ ಒಟ್ಟು ೧೯೧ ಪ್ರಯಾಣಿಕರಿದ್ದು, ಅವರಲ್ಲಿ ಶಿಷ್ಟಾಚಾರದ ಪ್ರಕಾರ ಮುಂದಿನ ಮೂರು ಸೀಟು ಮತ್ತು ಹಿಂದಿನ ಸೀಟುಗಳ ೩೪ ಪ್ರಯಾಣಿಕರನ್ನು ತಪಾಸಣೆ ಮಾಡಬೇಕಿದ್ದು, ಇವರಲ್ಲಿ ೧೦ ಮಂದಿ ಮಂಗಳೂರು, ೧೫ ಮಂದಿ ಕಣ್ಣೂರು ಮತ್ತು ೯ ಮಂದಿ ಉಡುಪಿಯವರಾಗಿದ್ದು, ಇವರಲ್ಲಿ ೩೦ ಮಂದಿಯನ್ನು ಪತ್ತೆಹಚ್ಚಿ, ೨೧ ದಿನಗಳವರೆಗೆ ಹೋಂಐಸೋಲೇಷನ್‌ನಲ್ಲಿಡಲಾಗಿದೆ. ಉಳಿದ ೪ ಮಂದಿಯ ಪತ್ತೆಕಾರ್ಯ ನಡೆದಿದೆ.


    Provided by
    Provided by

    ಹೋಂಐಸೋಲೇಷನ್ ಆದವರ ಆರೋಗ್ಯವನ್ನು ಪ್ರತಿನಿತ್ಯ ಪರೀಕ್ಷಿಸಲಾಗುತ್ತಿದ್ದು, ಮಂಕಿಪಾಕ್ಸ್ ಲಕ್ಷಣಗಳೂ ಕಂಡು ಬಂದರೆ ಅವರನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ಗೆ ಸ್ಥಳಾಂತರ ಮಾಡುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಕಣ್ಗಾವಲು ಅಧಿಕಾರಿ ಡಾ. ರಾಜೇಶ್ ತಿಳಿಸಿದರು.

    ಮೈಸೂರು-ಮಂಗಳೂರು ಗಡಿಯಲ್ಲಿ ಕಟ್ಟೆಚ್ಚರ

    ಕೇರಳದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಕಂಡು ಬಂದ ಹಿನ್ನೆಲೆಯಲ್ಲಿ ಕೇರಳದಿಂದ ಮಂಗಳೂರು ಪ್ರವೇಶಿಸುವವರ ಮೇಲೆ ನಿಗಾ ವಹಿಸಲಾಗಿದೆ. ಹಾಗೆಯೇ ಕೇರಳ-ಮೈಸೂರು ಗಡಿಯಲ್ಲೂ ತಪಾಸಣೆ ನಡೆಸಲಾಗುತ್ತಿದ್ದು, ಪ್ರತಿದಿನ ಗಡಿ ಭಾಗದಿಂದ ಜಿಲ್ಲೆಗೆ ಪ್ರವೇಶಿಸುವ ೨೫೦ಕ್ಕೂ ಹೆಚ್ಚು ಮಂದಿಯನ್ನು ತಪಾಸಣೆ ಮಾಡಲಾಗುತ್ತಿದೆ. ಮೈಸೂರಿನ ಹೆಚ್‌ಡಿ ಕೋಟೆ ತಾಲ್ಲೂಕು ಅಧಿಕಾರಿ ರವಿಕುಮಾರ್ ನೇತೃತ್ವದಲ್ಲಿ ಈ ತಪಾಸಣೆ ನಡೆದಿದೆ.

    ಬಂದರು. ವಿಮಾನನಿಲ್ದಾಣದಲ್ಲಿ ತಪಾಸಣೆ ವಿದೇಶಗಳಿಂದ ಬರುವವರಿಂದ ಮಂಕಿಪಾಕ್ಸ್ ತಡೆಯಲು ಕೇಂದ್ರ ಸರ್ಕಾರ ವಿಮಾನನಿಲ್ದಾಣ ಮತ್ತು ಬಂದರುಗಳಲ್ಲೂ ನಿಗಾ ವಹಿಸಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರ ಆರೋಗ್ಯವನ್ನು ತಪಾಸಣೆ ಮಾಡಲಾಗುತ್ತಿದೆ. ದೇಶದಲ್ಲಿ ಮಂಕಿಪಾಕ್ಸ್ ತಡೆಗಟ್ಟಲು ಕಟ್ಟೆಚ್ಚರ ವಹಿಸಲಾಗಿದೆ.ಕರ್ನಾಟಕದಲ್ಲಿ ಇದುವರೆಗೂ ಮಂಕಿಪಾಕ್ಸ್‌ನ ಯಾವುದೇ ಪ್ರಕರಣ ವರದಿಯಾಗಿಲ್ಲ.

    ಡಬ್ಲ್ಯುಎಚ್‌ಓ ಕಳವಳ

    ಭಾರತದಲ್ಲೂ ಆತಂಕ ಸೃಷ್ಟಿಸಿರುವ ಮಂಕಿಪಾಕ್ಸ್ ಅಥವಾ ಮಂಗನ ಸಿಡುಬು ಖಾಯಿಲೆಯ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಕಳವಳ ವ್ಯಕ್ತಪಡಿಸಿದೆ.ವಿಶ್ವ ಆರೋಗ್ಯ ಸಂಸ್ಥೆ, ಮಂಕಿಪಾಕ್ಸ್ ಆರೋಗ್ಯ ತುರ್ತುಸ್ಥಿತಿಯಲ್ಲ ಎಂದು ಹೇಳಿತ್ತು. ಆದರೆ, ಈಗ ಮಂಕಿಪಾಕ್ಸ್ ನಾನಾ ರಾಷ್ಟ್ರಗಳಲ್ಲಿ ಸದ್ದು ಮಾಡುತ್ತಿರುವುದರಿಂದ ಆರೋಗ್ಯ ತುರ್ತುಸ್ಥಿತಿಯಲ್ಲ ಎಂಬುದನ್ನು ಮತ್ತೊಮ್ಮೆ ಪರಿಶೀಲಿಸಬೇಕಾಗಿದೆ ಎಂದು ಡಬ್ಲ್ಯುಎಚ್‌ಒ ಹೇಳಿದೆ.

    ಮಂಕಿಪಾಕ್ಸ್‌ ಗೆ ತುತ್ತಾಗಿರುವವರು ಬಹುತೇಕ ಮಂದಿ ಮಧ್ಯವಯಸ್ಕರಾಗಿದ್ದಾರೆ. ಅಲ್ಲದೇ ಇವರಲ್ಲಿ ಬಹುತೇಕರು ಪುರುಷರೇ ಆಗಿದ್ದಾರೆ. ಇನ್ನೂ ವಿಚಿತ್ರವೆಂದರೆ ಈ ಖಾಯಿಲೆ ಕಾಣಿಸಿಕೊಂಡ ಪ್ರತಿ ಐವರಲ್ಲಿ ಮೂವರು, ಪುರುಷ ಮತ್ತು ಪುರುಷ ಲೈಂಗಿಕ ಸಂಪರ್ಕ ಮಾಡಿರುವವರು ಎಂದು ಡಬ್ಲ್ಯುಎಚ್‌ಒ ವರದಿ ಮಾಡಿದೆ.

    ಮಂಕಿಪಾಕ್ಸ್ ಪ್ರಕರಣಗಳು ಏರಿಕೆಯಾಗುತ್ತಿರುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮುಖ್ಯಸ್ಥ ಟೆಡ್ರೋಸ್ ಗೆಬ್ರೇಯೇಸಸ್ ಕಳವಳ ವ್ಯಕ್ತಪಡಿಸಿದ್ದು, ಸದ್ಯ ಈ ಸೋಂಕು ಆರೋಗ್ಯ ತುರ್ತುಸ್ಥಿತಿಯಲ್ಲ ಎಂದು ಹೇಳಿದ್ದರು.
    ಪ್ರಮುಖವಾಗಿ ಪಶ್ಚಿಮ ಮತ್ತು ಮಧ್ಯ ಆಫ್ರಿಕಾ ದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದ ಮಂಕಿಪಾಕ್ಸ್ ಪ್ರಕರಣಗಳು ಮೇ ತಿಂಗಳಿನಿಂದ ಈಚೆಗೆ ಇತರ ದೇಶಗಳಲ್ಲಿಯೂ ಉಲ್ಬಣಗೊಂಡಿವೆ. ಹೆಚ್ಚಾಗಿ ಪಶ್ಚಿಮ ಯುರೋಪ್‌ನಲ್ಲಿ ಪತ್ತೆಯಾಗುತ್ತಿವೆ.
    ಅದೇ ರೀತಿ, ಸುಮಾರು ೫೦ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಈ ವರ್ಷ ೩,೨೦೦ಕ್ಕಿಂತ ಅಧಿಕ ಮಂಕಿಪಾಕ್ಸ್ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ಮಂಗಳೂರು: ಜೀವನದಲ್ಲಿ ಎದುರಾದ ಅತಿದೊಡ್ಡ ದುರಂತವನ್ನೇ ಮೆಟ್ಟಿ ನಿಂತು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ…

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026

    ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ

    April 10, 2026

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    April 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.