ಮಧುಗಿರಿ: ತಾಲೂಕಿನ ಐಡಿ ಹಳ್ಳಿ ಹೋಬಳಿಯ ಗ್ರಾಮದ ರೈತರು ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಾನಾ ಸಂಕಷ್ಟಕ್ಕೊಳಗಾಗಿದ್ದು, ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರತಿಭಟಿಸಿ, ಉಪತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.
ಕೆರೆ ಕೋಡಿ ಹರಿದು ರೈತರ ಜಮೀನಿನ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಕೃಷಿ ಮಾಡಲು ಅಡ್ಡಿಯಾಗಿದೆ. ರಾಜ ಕಾಲುವೆಗಳ ದುರಸ್ತಿ ಕಾರ್ಯ ನಡೆಯದೆ ರಾಜಕಾಲುವೆಗಳು ಮುಚ್ಚಿ ಹೋಗಿರುವ ಕಾರಣ ಕೃಷಿ ಭೂಮಿಯ ಮೇಲೆ ಕೆರೆ ಕೋಡಿ ಹರಿದಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ನೀರು ಹರಿದ ಪರಿಣಾಮ ಸ್ಮಶಾನದಲ್ಲಿದ್ದ ಶವಗಳು ನೀರಿನಲ್ಲಿ ತೇಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಮಶಾನ ಅಭಿವೃದ್ಧಿ ಮಾಡದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ರೈತ ಹೋರಾಟಗಾರರು, ಪ್ರಗತಿಪರರು ಹಾಗೂ ವಿವಿಧ ಸಂಘಟನೆಗಳ ಹೋರಾಟಗಾರರು ಭಾಗವಹಿಸಿದ್ದರು. ಉಪತಹಶೀಲ್ದಾರ್ ಇನಾಯತ ಉಲ್ಲಾ ಅವರಿಗೆ ಮನವಿ ಸಲ್ಲಿಸಿದರು.
R I ನಾರಾಯಣಪ್ಪ, ರೇಖಾ, ಪಲ್ಲವಿ, ಅಶೋಕ್ ರೆಡ್ಡಿ, ಬಾಲಕೃಷ್ಣ, ನರಸಿಂಹರೆಡ್ಡಿ, ಕೃಷ್ಣಾರೆಡ್ಡಿ, ನರೇಂದ್ರ, ಜನಾರ್ಧನ್ ರೆಡ್ಡಿ, ಜೈರಾಮ್ ಇನ್ನು ಮುಂತಾದವರು ಹಾಜರಿದ್ದರು.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz