nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ

    January 1, 2026
    Facebook Twitter Instagram
    ಟ್ರೆಂಡಿಂಗ್
    • ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
    • ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
    • ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
    • ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
    • ತುಮಕೂರು: ಗಾಜಿನ ಮನೆಯಲ್ಲಿ  ‘ಸಿರಿಧಾನ್ಯ ಖಾದ್ಯಗಳ’ ಘಮಲು!
    • 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್‌ ಗೆ ಪದೋನ್ನತಿ
    • ತುಮಕೂರು ಡಿಸಿ ಶುಭಕಲ್ಯಾಣ್‌  ರಿಗೆ ಸಿಇಒ ಹೆಚ್ಚುವರಿ ಹೊಣೆ: ಸಿಇಒ ಜಿ.ಪ್ರಭು  ಡಿಸಿಯಾಗಿ ವರ್ಗಾವಣೆ
    • ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home »  ಜಂಪೇನಹಳ್ಳಿ ಕೆರೆಗೆ ಡಾಬಾಗಳ ತ್ಯಾಜ್ಯ, ಕಲುಷಿತ ನೀರನ್ನು ಬಿಡದಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಭಾಗ್ಯಮ್ಮ ಖಡಕ್ ಸೂಚನೆ
    ಕೊರಟಗೆರೆ August 20, 2023

     ಜಂಪೇನಹಳ್ಳಿ ಕೆರೆಗೆ ಡಾಬಾಗಳ ತ್ಯಾಜ್ಯ, ಕಲುಷಿತ ನೀರನ್ನು ಬಿಡದಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಭಾಗ್ಯಮ್ಮ ಖಡಕ್ ಸೂಚನೆ

    By adminAugust 20, 2023No Comments3 Mins Read
    koratagere news

    ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.

    ಕೊರಟಗೆರೆ : ಪಟ್ಟಣದ ಕುಡಿಯುವ ನೀರಿನ ಜಂಪೇನಹಳ್ಳಿ ಕೆರೆಗೆ ಡಾಬಾ ಮತ್ತು ಲಾಡ್ಜ್ ಗಳಿಂದ ಹೊರಬರುವ ಕಲುಷಿತ ನೀರನ್ನು ಪ.ಪಂ ಮುಖ್ಯಾಧಿಕಾರಿ ಭಾಗ್ಯಮ್ಮ ತಡೆಗಟ್ಟಿದ ಘಟನೆ ನಡೆದಿದೆ.


    Provided by
    Provided by

    ಕೊರಟಗೆರೆ ಪಟ್ಟಣಕ್ಕೆ ಸರಬರಾಜು ಆಗುವ ಕುಡಿಯುವ ನೀರಿನ ಜಂಪೇನಹಳ್ಳಿ ಕೆರೆಗೆ ಡಾಬಗಳ ತ್ಯಾಜ್ಯ, ಕಲುಶಿತ ನೀರು ಬಿಡಲಾಗುತ್ತಿದ್ದು, ಇದನ್ನು ತಡೆಗಟ್ಟುವ ಕಾರ್ಯಾಚರಣೆ ವೇಳೆ  ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮತ್ತು ಡಾಬಾ ಮಾಲೀಕರ ನಡುವೆ ಸುರಿವ ಮಳೆಯಲ್ಲೇ  ವಾಗ್ವಾದ,  ಕಾಮಗಾರಿಗೆ ತಡೆ ನಡೆಸಿದ ಘಟನೆ ನಡೆದಿದೆ.

    ಜಂಪೇನಹಳ್ಳಿ ಕೆರೆಯ ದಂಡೆಯ ಮೇಲಿರುವ ಕೆಲವು ಡಾಬಾಗಳು ಮತ್ತು ಲಾಡ್ಜ್ ಗಳಿಂದ ಹೊರಬರುವ ಕಲುಶಿತ ನೀರು ಮತ್ತು ಮಲೀನ ತ್ಯಾಜ್ಯ ಬಿಡುವುದನ್ನು ತಡೆಗಟ್ಟಲು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಭಾಗ್ಯಮ್ಮ, ಆರೋಗ್ಯಾಧಿಕಾರಿ ಮಹಮದ್ ಹುಸೇನ್ ಸೇರಿದಂತೆ ಸಿಬ್ಬಂದಿಗಳು ಸಾರ್ವಜನಿಕರ ದೂರಿನ ಮೇಲೆ ಸ್ಥಳಕ್ಕೆ ತೆರಳಿ ಕಾರ್ಯಾಚರಣೆಗೆ ಮುಂದಾದರು, ಆಗ ಡಾಬಾಗಳ ಮಾಲೀಕರು ಈ ಕೆರೆಯ ಜಾಗ ನಮ್ಮದು ಇದಕ್ಕೆ ಸರ್ಕಾರದಿಂದ ಪರಿಹಾರ ಬಂದಿಲ್ಲ ನಮ್ಮ ಜಮೀನಿನಲ್ಲಿ ಡಾಬಾ ಕಟ್ಟಿಕೊಂಡಿದ್ದೇವೆ ನಮಗೆ ಸೇರಿದ ಜಮೀನಿಗೆ ಬರಲು ನೀವು ಯಾರು ಎಂದು ಪ್ರಶ್ನಿಸಿದರು. ಆಗ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕೆರೆಯ ಜಾಗ ಸಾರ್ವಜನಿಕರ ಹಿತಾಸಕ್ತಿಗೆ ಸೇರಿದ್ದು, ನಿಮಗೆ ಪರಿಹಾರ ದೊರೆಂಯುವುದಿಲ್ಲ ಎಂದರೆ ಸರ್ಕಾರವನ್ನು ಕೇಳಬೇಕು, ಕೆರೆ ಮತ್ತು ಕೋಡಿಯನ್ನು ಮುಚ್ಚಿದ್ದು ಮೊದಲ ತಪ್ಪಾದರೆ ನಿಮ್ಮ ಡಾಬಾ ಮತ್ತು ಹೋಟೆಲ್‍ಗಳ ಕಲುಷಿತ ನೀರನ್ನು ಕೆರೆಗೆ ಬಿಡುತ್ತಿದ್ದೀರಿ, ಡಾಬಾದಲ್ಲಿನ ಉಪಯೋಗಿಸವು ಮಧ್ಯದ ಖಾಲಿ ಬಾಟಲ್ ಮತ್ತು ಪ್ಲಾಸ್ಟಿಕ್ ಹಾಗೂ ಇತರೆ ತ್ಯಾಜ್ಯವನ್ನು ಕೆರೆಗೆ ಹಾಕಿದ್ದೀರಿ, ಇದು ಕಾನೂನು ರೀತಿಯಲ್ಲಿ ಅಪರಾದ ಈ ಕೆರೆಯ ನೀರನ್ನು ಪಟ್ಟಣದ ಸಾರ್ವಜನಿಕರ ಕುಡಿಯುವ ನೀರಿಗೆ ಬಳಸಲಾಗುತ್ತಿದ್ದು ನೀವು ತ್ಯಾಜ್ಯ ಬಿ ಜನರ ಆರೋಗ್ಯದ ಗತಿ ಏನು, ಕೂಡಲೆ ಮಾಲಿನ್ಯವನ್ನು ಬಂದ್ ಮಾಡಬೇಕು ತಪ್ಪಿದರೆ ನಮ್ಮ ಕರ್ತವ್ಯ ಮಾಡುತ್ತೇವೆ ಎಂದು ಕಲುಷಿತ ನೀರಿನ ಪೈಪ್‍ಗಳನ್ನು ಮುಚ್ಚಿಸಿ ಕೆಲವು ಕಡೆ ತೆರೆವುಗೊಳಿಸಿದರು. ಸ್ಥಳಕ್ಕೆ ಕೊರಟಗೆರೆ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.

    ಸುರಿಯ ಮಳೆಯಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿ;- ಕೆರೆಯ ಕಲುಷಿತ ನೀರಿನ ಪೈಪ್‍ಗಳನ್ನು ಮುಚ್ಚಿಸುವ ಕಾರ್ಯದಲ್ಲಿ ಮಳೆಯು ಜೋರಾಗಿ ಸುರಿಯುತ್ತಿದ್ದು, ಡಾಬದ ಮಾಲೀಕ ಕೊಡೆ ಹಿಡಿದುಕೊಂಡು ತಡೆ ಹೊಡ್ಡುತ್ತಿದ್ದರೆ ಮುಖ್ಯಾಧಿಕಾರಿ ಭಾಗ್ಯಮ್ಮ ಮತ್ತು ಅಧಿಕಾರಿ ವರ್ಗ ಸುರಿವ ಮಳೆಯಲ್ಲೆ ನೆನೆದು ಕೊಂಡು ಪೈಪ್ ಮುಚ್ಚಿಸುವ ಕೆಲಸ ಮಾಡಿದರು.

    ಪ.ಪಂ.ಮುಖ್ಯಾಧಿಕಾರಿ ಭಾಗ್ಯಮ್ಮ ಕೆರೆಯನ್ನು ಮುಚ್ಚುವ ಅಧಿಕಾರ ಯಾರಿಗೂ ಇಲ್ಲ, ಆದರೆ ಇಲ್ಲಿ ಕೆಲವರು ಪರಿಹಾರ ಬಂದಿಲ್ಲ ಎಂಬ ನೆಪ ಇಟ್ಟುಕೊಂಡು ಕೆರೆಯನ್ನು ಮುಚ್ಚಿ ಡಾಬಾ ನಿರ್ಮಾಣ ಮಾಡಿ ಅದರ ಕಲುಷಿತ ನೀರು ಮತ್ತು ತ್ಯಾಜ್ಯವನ್ನು ಪಟ್ಟಣದ ಸಾರ್ವಜನಿರು ಕುಡಿಯುವ ನೀರಿನ ಕೆರೆಗೆ ಬಿಡುತ್ತಿದ್ದಾರೆ, ಈ ಬಗ್ಗೆ ಡಾಬದವರಿಗೆ ಹಲವು ಬಾರಿ ಮೌಖಿಕ ಮತ್ತು ಲಿಖಿತ ನೋಟಿಸ್ ನೀಡಿದ್ದೇವೆ ಆದರೂ ಅವರು ಕೆರೆಯನ್ನು ಕಲುಶಿತ ಮಾಡುತ್ತಿದ್ದಾರೆ ಇದು ಕಾನೂನಿನ ರೀತಿಯಲ್ಲಿ ಅಪರಾದ ಎಂದರು.

    ಡಾಬಾ ಮಾಲೀಕ ಶಿವಕುಮಾರ್ ಕೆರೆಯ ಜಾಗ ನಮ್ಮ ಪೂರ್ವಿಕರದು ನಮ್ಮಗಳಿಗೆ ಪರಿಹಾರ ಬಂದಿಲ್ಲ ಅದಕ್ಕೆ ನಾವು ನಮ್ಮ ಜಮೀನಿಲ್ಲಿ ಡಾಬಾ ನಿರ್ಮಿಸಿ ಜೀವನ ನಡೆಸುತ್ತಿದ್ದೇವೆ, ಎತ್ತಿನಹೊಳೆ ಕಾಮಗಾರಿಯಿಂದ ಇಷ್ಠೆಲ್ಲಾ ಅವಾಂತರವಾಗಿದೆ, ತ್ಯಾಜ್ಯಗಳನ್ನು ಇನ್ನು ಮುಂದೆ ಹಾಕದೆ ಬೇರೆಡೆ ಹಾಕುತ್ತೇವೆ, ಕೆರೆ ಕೊಡಿ ಸಹ ನಮ್ಮದೇ ಎಂದರು.

     ಇಚ್ಚಾಶಕ್ತಿ ಕೊರತೆ: ಕೊರಟಗೆರೆ ಪಟ್ಟಣದ ಜನಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ನಗರ ಬೆಳೆಯುತ್ತಿದೆ, ಕುಡಿಯುವ ನೀರಿಗೆ ಅಗ್ರಹಾರ ಮತ್ತು ಜಂಪೇನಹಳ್ಳಿ ಕೆರೆಯನ್ನು ಅವಲಂಬಿಸಿದೆ, ಆದರೆ ಕೆರೆಯ ಒತ್ತುವರಿ ಮತ್ತು ಜಮೀನು ಮಾಲಿಕರ ಪರಿಹಾರ ಯಾರೂ ಗಂಭೀರವಾಗಿ ಪರಿಗಣಿಸಿಲ್ಲ ಇನ್ನಾದರೂ ಜನಪ್ರತಿನಿಧಿಗಳು ಇದನ್ನು ಪರಿಹರಿಸಬೇಕಿದೆ.

    ಭೂಸ್ವಾದೀನ ಕಡತದ ಗಂಟೇ ಮಾಯ;- ಕೆಲವು ಮಾಹಿತಿಗಳ ಪ್ರಕಾರ ಕಳೆದ 8-9 ವರ್ಷಗಳ ಹಿಂದೆ ಮಧುಗಿರಿ ಉಪವಿಭಾಗಾಧಿಕರಿಗಳ ಕಛೇರಿಯಿಂದ ಕೊರಟಗೆರೆ ತಾಲೂಕು ಕಛೇರಿಗೆ ಜಂಪೇನಹಳ್ಳಿ ಕೆರೆಯ ಭೂ ಸ್ವಾದೀನದ ಕಡತಗಳ ಗಂಟು ಬಂದಿದ್ದು ಕೆಲವು ರಾಜಕೀಯ ಪಟ್ಟ ಭದ್ರ ಹಿತಾಶಕ್ತಿಗಳಿಂದ ಗಂಟು ಕಾಣೆಯಾಗಿದೆ ಎಂದು ಹೇಳಲಾಗುತ್ತಿದೆ, ಇದರ ಸತ್ಯಾಸತ್ಯೆಗಳನ್ನು ಅಧಿಕಾರಿಗಳು ಪರಿಶೀಲಿಸಬೇಕಿದೆ,

    ಅಬಕಾರಿ ಇಲಾಖೆಯ ಕೊಡುಗೆ;- ಜಂಪೇನಹಳ್ಳಿ ಕೆರೆಯಲ್ಲಿ ಮೂಟೆಗಟ್ಟಲೆ ಅಬಕಾರಿಯ ಪ್ಲಾಸ್ಟಿಕ್ ಮತ್ತು ಖಾಲಿ ಬಾಟಲ್‍ನ ತ್ಯಾಜ್ಯಗಳು ಬಿದ್ದಿದ್ದು ಈ ಫ್ಯಾಮಿಲಿ ಡಾಬಾ ಗಳಲ್ಲಿ ಮದ್ಯ ಸೇವಿಸಲು ಅವಕಾಶ ವಿಲ್ಲದಿದ್ದರೂ ಹಲವು ವರ್ಷಗಳಿಂದ ಇಲ್ಲಿ ಮಧ್ಯಮಾರಾಟವಾಗುತ್ತಿದೆ, ಈ ಸಂಗತಿಯು ಕೊರಟಗೆರೆ ತಾಲೂಕಿನ ಅಬಕಾರಿ ಅಧಿಕಾರಿ ಶ್ರೀಲತಾ ರವರಿಗೆ ತಿಳಿದಿದ್ದರೂ ಎಲ್ಲಾವು ಮಾಮೂಲಿಯಲ್ಲಿ ನಡೆದುಕೊಂಡು ಹೋಗುತ್ತಿತ್ತೇ ಎಂದು ಸಾರ್ವಜನಿಕರು ಅನುಮಾನ ವ್ಯಕ್ತ ಪಡಿಸಿದ್ದಾರೆ, ಕೆರೆಯ ಕಲುಷಿತಕ್ಕೆ ಅಬಕಾರಿ ಇಲಾಖೆಯು ಕಾರಣವಾಗಿದೆ ಎನ್ನಲಾಗಿದೆ ಈ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ.

    ಒಟ್ಟರೆ ಈ ಘಟನೆ ಗಂಭೀರ ವಿಷಯವಾಗಿದ್ದು ಜನರ ಆರೋಗ್ಯ ಮತ್ತು ಮುಂದಿನ ಕುಡಿಯುವ ನೀರಿನ ಭವಿಷ್ಯವಾಗಿದೆ, ಅದೇ ರೀತಿ ಡಾಬಾ ಮಾಲೀಕರಿಗೆ ಪರಿಹಾರ ಚಿಂತೆಯಾಗಿದೆ ಇದನ್ನು ಕ್ಷೇತ್ರದ ಶಾಸಕರು, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಹಾಗೂ ತುಮಕೂರು ಜಿಲ್ಲಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಬಗೆ ಹರಿಸ ಬೇಕಿದೆ, ಈ ಬಗ್ಗೆ ಜಿಲ್ಲಾಧಿಕಾರಿಗಳು ಗಮನ ಅರಿಸಿ ತ್ವರಿತ ಗತಿಯಲ್ಲಿ ಕಾರ್ಯ ಕೈಗೊಳ್ಳಬೇಕಾಗಿದೆ.

     

    admin
    • Website

    Related Posts

    ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ

    December 29, 2025

    ಅಟಲ್‌ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ

    December 27, 2025

    ಪಿ.ಎನ್.ಕೃಷ್ಣ ಮೂರ್ತಿ ಹುಟ್ಟು ಹಬ್ಬ:   ಪೌರ ಕಾರ್ಮಿಕರಿಗೆ ಬೆಚ್ಚನೆಯ ಹೊದಿಕೆ ವಿತರಣೆ

    December 27, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026

    ತುಮಕೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ…

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ

    January 1, 2026

    ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ

    January 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.