nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home »  ಜಂಪೇನಹಳ್ಳಿ ಕೆರೆಗೆ ಡಾಬಾಗಳ ತ್ಯಾಜ್ಯ, ಕಲುಷಿತ ನೀರನ್ನು ಬಿಡದಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಭಾಗ್ಯಮ್ಮ ಖಡಕ್ ಸೂಚನೆ
    ಕೊರಟಗೆರೆ August 20, 2023

     ಜಂಪೇನಹಳ್ಳಿ ಕೆರೆಗೆ ಡಾಬಾಗಳ ತ್ಯಾಜ್ಯ, ಕಲುಷಿತ ನೀರನ್ನು ಬಿಡದಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಭಾಗ್ಯಮ್ಮ ಖಡಕ್ ಸೂಚನೆ

    By adminAugust 20, 2023No Comments3 Mins Read
    koratagere news

    ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.

    ಕೊರಟಗೆರೆ : ಪಟ್ಟಣದ ಕುಡಿಯುವ ನೀರಿನ ಜಂಪೇನಹಳ್ಳಿ ಕೆರೆಗೆ ಡಾಬಾ ಮತ್ತು ಲಾಡ್ಜ್ ಗಳಿಂದ ಹೊರಬರುವ ಕಲುಷಿತ ನೀರನ್ನು ಪ.ಪಂ ಮುಖ್ಯಾಧಿಕಾರಿ ಭಾಗ್ಯಮ್ಮ ತಡೆಗಟ್ಟಿದ ಘಟನೆ ನಡೆದಿದೆ.


    Provided by
    Provided by

    ಕೊರಟಗೆರೆ ಪಟ್ಟಣಕ್ಕೆ ಸರಬರಾಜು ಆಗುವ ಕುಡಿಯುವ ನೀರಿನ ಜಂಪೇನಹಳ್ಳಿ ಕೆರೆಗೆ ಡಾಬಗಳ ತ್ಯಾಜ್ಯ, ಕಲುಶಿತ ನೀರು ಬಿಡಲಾಗುತ್ತಿದ್ದು, ಇದನ್ನು ತಡೆಗಟ್ಟುವ ಕಾರ್ಯಾಚರಣೆ ವೇಳೆ  ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮತ್ತು ಡಾಬಾ ಮಾಲೀಕರ ನಡುವೆ ಸುರಿವ ಮಳೆಯಲ್ಲೇ  ವಾಗ್ವಾದ,  ಕಾಮಗಾರಿಗೆ ತಡೆ ನಡೆಸಿದ ಘಟನೆ ನಡೆದಿದೆ.

    ಜಂಪೇನಹಳ್ಳಿ ಕೆರೆಯ ದಂಡೆಯ ಮೇಲಿರುವ ಕೆಲವು ಡಾಬಾಗಳು ಮತ್ತು ಲಾಡ್ಜ್ ಗಳಿಂದ ಹೊರಬರುವ ಕಲುಶಿತ ನೀರು ಮತ್ತು ಮಲೀನ ತ್ಯಾಜ್ಯ ಬಿಡುವುದನ್ನು ತಡೆಗಟ್ಟಲು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಭಾಗ್ಯಮ್ಮ, ಆರೋಗ್ಯಾಧಿಕಾರಿ ಮಹಮದ್ ಹುಸೇನ್ ಸೇರಿದಂತೆ ಸಿಬ್ಬಂದಿಗಳು ಸಾರ್ವಜನಿಕರ ದೂರಿನ ಮೇಲೆ ಸ್ಥಳಕ್ಕೆ ತೆರಳಿ ಕಾರ್ಯಾಚರಣೆಗೆ ಮುಂದಾದರು, ಆಗ ಡಾಬಾಗಳ ಮಾಲೀಕರು ಈ ಕೆರೆಯ ಜಾಗ ನಮ್ಮದು ಇದಕ್ಕೆ ಸರ್ಕಾರದಿಂದ ಪರಿಹಾರ ಬಂದಿಲ್ಲ ನಮ್ಮ ಜಮೀನಿನಲ್ಲಿ ಡಾಬಾ ಕಟ್ಟಿಕೊಂಡಿದ್ದೇವೆ ನಮಗೆ ಸೇರಿದ ಜಮೀನಿಗೆ ಬರಲು ನೀವು ಯಾರು ಎಂದು ಪ್ರಶ್ನಿಸಿದರು. ಆಗ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕೆರೆಯ ಜಾಗ ಸಾರ್ವಜನಿಕರ ಹಿತಾಸಕ್ತಿಗೆ ಸೇರಿದ್ದು, ನಿಮಗೆ ಪರಿಹಾರ ದೊರೆಂಯುವುದಿಲ್ಲ ಎಂದರೆ ಸರ್ಕಾರವನ್ನು ಕೇಳಬೇಕು, ಕೆರೆ ಮತ್ತು ಕೋಡಿಯನ್ನು ಮುಚ್ಚಿದ್ದು ಮೊದಲ ತಪ್ಪಾದರೆ ನಿಮ್ಮ ಡಾಬಾ ಮತ್ತು ಹೋಟೆಲ್‍ಗಳ ಕಲುಷಿತ ನೀರನ್ನು ಕೆರೆಗೆ ಬಿಡುತ್ತಿದ್ದೀರಿ, ಡಾಬಾದಲ್ಲಿನ ಉಪಯೋಗಿಸವು ಮಧ್ಯದ ಖಾಲಿ ಬಾಟಲ್ ಮತ್ತು ಪ್ಲಾಸ್ಟಿಕ್ ಹಾಗೂ ಇತರೆ ತ್ಯಾಜ್ಯವನ್ನು ಕೆರೆಗೆ ಹಾಕಿದ್ದೀರಿ, ಇದು ಕಾನೂನು ರೀತಿಯಲ್ಲಿ ಅಪರಾದ ಈ ಕೆರೆಯ ನೀರನ್ನು ಪಟ್ಟಣದ ಸಾರ್ವಜನಿಕರ ಕುಡಿಯುವ ನೀರಿಗೆ ಬಳಸಲಾಗುತ್ತಿದ್ದು ನೀವು ತ್ಯಾಜ್ಯ ಬಿ ಜನರ ಆರೋಗ್ಯದ ಗತಿ ಏನು, ಕೂಡಲೆ ಮಾಲಿನ್ಯವನ್ನು ಬಂದ್ ಮಾಡಬೇಕು ತಪ್ಪಿದರೆ ನಮ್ಮ ಕರ್ತವ್ಯ ಮಾಡುತ್ತೇವೆ ಎಂದು ಕಲುಷಿತ ನೀರಿನ ಪೈಪ್‍ಗಳನ್ನು ಮುಚ್ಚಿಸಿ ಕೆಲವು ಕಡೆ ತೆರೆವುಗೊಳಿಸಿದರು. ಸ್ಥಳಕ್ಕೆ ಕೊರಟಗೆರೆ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.

    ಸುರಿಯ ಮಳೆಯಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿ;- ಕೆರೆಯ ಕಲುಷಿತ ನೀರಿನ ಪೈಪ್‍ಗಳನ್ನು ಮುಚ್ಚಿಸುವ ಕಾರ್ಯದಲ್ಲಿ ಮಳೆಯು ಜೋರಾಗಿ ಸುರಿಯುತ್ತಿದ್ದು, ಡಾಬದ ಮಾಲೀಕ ಕೊಡೆ ಹಿಡಿದುಕೊಂಡು ತಡೆ ಹೊಡ್ಡುತ್ತಿದ್ದರೆ ಮುಖ್ಯಾಧಿಕಾರಿ ಭಾಗ್ಯಮ್ಮ ಮತ್ತು ಅಧಿಕಾರಿ ವರ್ಗ ಸುರಿವ ಮಳೆಯಲ್ಲೆ ನೆನೆದು ಕೊಂಡು ಪೈಪ್ ಮುಚ್ಚಿಸುವ ಕೆಲಸ ಮಾಡಿದರು.

    ಪ.ಪಂ.ಮುಖ್ಯಾಧಿಕಾರಿ ಭಾಗ್ಯಮ್ಮ ಕೆರೆಯನ್ನು ಮುಚ್ಚುವ ಅಧಿಕಾರ ಯಾರಿಗೂ ಇಲ್ಲ, ಆದರೆ ಇಲ್ಲಿ ಕೆಲವರು ಪರಿಹಾರ ಬಂದಿಲ್ಲ ಎಂಬ ನೆಪ ಇಟ್ಟುಕೊಂಡು ಕೆರೆಯನ್ನು ಮುಚ್ಚಿ ಡಾಬಾ ನಿರ್ಮಾಣ ಮಾಡಿ ಅದರ ಕಲುಷಿತ ನೀರು ಮತ್ತು ತ್ಯಾಜ್ಯವನ್ನು ಪಟ್ಟಣದ ಸಾರ್ವಜನಿರು ಕುಡಿಯುವ ನೀರಿನ ಕೆರೆಗೆ ಬಿಡುತ್ತಿದ್ದಾರೆ, ಈ ಬಗ್ಗೆ ಡಾಬದವರಿಗೆ ಹಲವು ಬಾರಿ ಮೌಖಿಕ ಮತ್ತು ಲಿಖಿತ ನೋಟಿಸ್ ನೀಡಿದ್ದೇವೆ ಆದರೂ ಅವರು ಕೆರೆಯನ್ನು ಕಲುಶಿತ ಮಾಡುತ್ತಿದ್ದಾರೆ ಇದು ಕಾನೂನಿನ ರೀತಿಯಲ್ಲಿ ಅಪರಾದ ಎಂದರು.

    ಡಾಬಾ ಮಾಲೀಕ ಶಿವಕುಮಾರ್ ಕೆರೆಯ ಜಾಗ ನಮ್ಮ ಪೂರ್ವಿಕರದು ನಮ್ಮಗಳಿಗೆ ಪರಿಹಾರ ಬಂದಿಲ್ಲ ಅದಕ್ಕೆ ನಾವು ನಮ್ಮ ಜಮೀನಿಲ್ಲಿ ಡಾಬಾ ನಿರ್ಮಿಸಿ ಜೀವನ ನಡೆಸುತ್ತಿದ್ದೇವೆ, ಎತ್ತಿನಹೊಳೆ ಕಾಮಗಾರಿಯಿಂದ ಇಷ್ಠೆಲ್ಲಾ ಅವಾಂತರವಾಗಿದೆ, ತ್ಯಾಜ್ಯಗಳನ್ನು ಇನ್ನು ಮುಂದೆ ಹಾಕದೆ ಬೇರೆಡೆ ಹಾಕುತ್ತೇವೆ, ಕೆರೆ ಕೊಡಿ ಸಹ ನಮ್ಮದೇ ಎಂದರು.

     ಇಚ್ಚಾಶಕ್ತಿ ಕೊರತೆ: ಕೊರಟಗೆರೆ ಪಟ್ಟಣದ ಜನಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ನಗರ ಬೆಳೆಯುತ್ತಿದೆ, ಕುಡಿಯುವ ನೀರಿಗೆ ಅಗ್ರಹಾರ ಮತ್ತು ಜಂಪೇನಹಳ್ಳಿ ಕೆರೆಯನ್ನು ಅವಲಂಬಿಸಿದೆ, ಆದರೆ ಕೆರೆಯ ಒತ್ತುವರಿ ಮತ್ತು ಜಮೀನು ಮಾಲಿಕರ ಪರಿಹಾರ ಯಾರೂ ಗಂಭೀರವಾಗಿ ಪರಿಗಣಿಸಿಲ್ಲ ಇನ್ನಾದರೂ ಜನಪ್ರತಿನಿಧಿಗಳು ಇದನ್ನು ಪರಿಹರಿಸಬೇಕಿದೆ.

    ಭೂಸ್ವಾದೀನ ಕಡತದ ಗಂಟೇ ಮಾಯ;- ಕೆಲವು ಮಾಹಿತಿಗಳ ಪ್ರಕಾರ ಕಳೆದ 8-9 ವರ್ಷಗಳ ಹಿಂದೆ ಮಧುಗಿರಿ ಉಪವಿಭಾಗಾಧಿಕರಿಗಳ ಕಛೇರಿಯಿಂದ ಕೊರಟಗೆರೆ ತಾಲೂಕು ಕಛೇರಿಗೆ ಜಂಪೇನಹಳ್ಳಿ ಕೆರೆಯ ಭೂ ಸ್ವಾದೀನದ ಕಡತಗಳ ಗಂಟು ಬಂದಿದ್ದು ಕೆಲವು ರಾಜಕೀಯ ಪಟ್ಟ ಭದ್ರ ಹಿತಾಶಕ್ತಿಗಳಿಂದ ಗಂಟು ಕಾಣೆಯಾಗಿದೆ ಎಂದು ಹೇಳಲಾಗುತ್ತಿದೆ, ಇದರ ಸತ್ಯಾಸತ್ಯೆಗಳನ್ನು ಅಧಿಕಾರಿಗಳು ಪರಿಶೀಲಿಸಬೇಕಿದೆ,

    ಅಬಕಾರಿ ಇಲಾಖೆಯ ಕೊಡುಗೆ;- ಜಂಪೇನಹಳ್ಳಿ ಕೆರೆಯಲ್ಲಿ ಮೂಟೆಗಟ್ಟಲೆ ಅಬಕಾರಿಯ ಪ್ಲಾಸ್ಟಿಕ್ ಮತ್ತು ಖಾಲಿ ಬಾಟಲ್‍ನ ತ್ಯಾಜ್ಯಗಳು ಬಿದ್ದಿದ್ದು ಈ ಫ್ಯಾಮಿಲಿ ಡಾಬಾ ಗಳಲ್ಲಿ ಮದ್ಯ ಸೇವಿಸಲು ಅವಕಾಶ ವಿಲ್ಲದಿದ್ದರೂ ಹಲವು ವರ್ಷಗಳಿಂದ ಇಲ್ಲಿ ಮಧ್ಯಮಾರಾಟವಾಗುತ್ತಿದೆ, ಈ ಸಂಗತಿಯು ಕೊರಟಗೆರೆ ತಾಲೂಕಿನ ಅಬಕಾರಿ ಅಧಿಕಾರಿ ಶ್ರೀಲತಾ ರವರಿಗೆ ತಿಳಿದಿದ್ದರೂ ಎಲ್ಲಾವು ಮಾಮೂಲಿಯಲ್ಲಿ ನಡೆದುಕೊಂಡು ಹೋಗುತ್ತಿತ್ತೇ ಎಂದು ಸಾರ್ವಜನಿಕರು ಅನುಮಾನ ವ್ಯಕ್ತ ಪಡಿಸಿದ್ದಾರೆ, ಕೆರೆಯ ಕಲುಷಿತಕ್ಕೆ ಅಬಕಾರಿ ಇಲಾಖೆಯು ಕಾರಣವಾಗಿದೆ ಎನ್ನಲಾಗಿದೆ ಈ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ.

    ಒಟ್ಟರೆ ಈ ಘಟನೆ ಗಂಭೀರ ವಿಷಯವಾಗಿದ್ದು ಜನರ ಆರೋಗ್ಯ ಮತ್ತು ಮುಂದಿನ ಕುಡಿಯುವ ನೀರಿನ ಭವಿಷ್ಯವಾಗಿದೆ, ಅದೇ ರೀತಿ ಡಾಬಾ ಮಾಲೀಕರಿಗೆ ಪರಿಹಾರ ಚಿಂತೆಯಾಗಿದೆ ಇದನ್ನು ಕ್ಷೇತ್ರದ ಶಾಸಕರು, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಹಾಗೂ ತುಮಕೂರು ಜಿಲ್ಲಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಬಗೆ ಹರಿಸ ಬೇಕಿದೆ, ಈ ಬಗ್ಗೆ ಜಿಲ್ಲಾಧಿಕಾರಿಗಳು ಗಮನ ಅರಿಸಿ ತ್ವರಿತ ಗತಿಯಲ್ಲಿ ಕಾರ್ಯ ಕೈಗೊಳ್ಳಬೇಕಾಗಿದೆ.

     

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ…

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.