ಪಾವಗಡ: ಪಾವಗಡ ಪಟ್ಟಣದ ವಾರ್ಡ್ ನಂಬರ್ 22ರಲ್ಲಿ ಇರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದ್ದು, ಸಂಬಂಧ ಪಟ್ಟವರ ನಿರ್ಲಕ್ಷ್ಯದಿಂದಾಗಿ ಇನ್ನೂ ಸರಿಪಡಿಸದೇ ಬೇಜವಾಬ್ದಾರಿ ಮೆರೆಯಲಾಗಿದೆ ಎಂಬ ಆಕ್ರೋಶ ಕೇಳಿ ಬಂದಿದೆ.
ಪಾವಗಡ ತಾಲ್ಲೂಕಿನ ಶಾಸಕರಾದ ವೆಂಕಟರಮಣಪ್ಪ ಅವರು ನಾಲ್ಕು ತಿಂಗಳ ಹಿಂದೆ ಈ ನೀರಿನ ಘಟಕವನ್ನು ಉದ್ಘಾಟಿಸಿದ್ದರು. ಆದರೆ ಇದೀಗ ಕೆಲವೇ ತಿಂಗಳುಗಳಲ್ಲಿ ನೀರಿನ ಘಟಕ ಕೆಟ್ಟು ಹೋಗಿದ್ದು, ಈ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಇಲ್ಲಿನ ಸಾರ್ವಜನಿಕರು ದೂರಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy