ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ವಾರ್ಡ್ ನಂ 24 ರಲ್ಲಿನ ಹುಳಿಯಾರ್ ರಸ್ತೆಯಲ್ಲಿರುವ ನಾಯಕ ಕ್ಯಾಂಪ್ ಬಳಿ ಇರುವ ಬೊಮ್ಮಕ್ಕ ದೇವಸ್ಥಾನದ ಎದುರು ಇರುವ ಬೀದಿ ದ್ವೀಪವು ಕೆಟ್ಟು ಹೋಗಿದ್ದು, ಆದರೆ ಇತ್ತ ಯಾವುದೇ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.
ವಿದ್ಯುತ್ ದೀಪ ಕೆಟ್ಟು ಹೋಗಿ 20 ದಿನಗಳು ಕಳೆದವು.ಆದರೆ, ಆಡಳಿತ ಅಧಿಕಾರಿಗಳಾಗಲಿ, ಸ್ಥಳೀಯ ಜನಪ್ರತಿನಿಧಿಗಳಾಗಲಿ, ಈವರೆಗೂ ದುರಸ್ತಿಗೊಳಿಸದೇ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯುತ್ ದೀಪ ಇಲ್ಲದ ಕಾರಣ ಈ ಭಾಗದಲ್ಲಿ ರಾತ್ರಿಯಾದರೆ, ಹೆಣ್ಣುಮಕ್ಕಳು ಓಡಾಡಲು ಹಿಂದೇಟು ಹಾಕುತ್ತಿದ್ದಾರೆ. ಶೀಘ್ರವೇ ಈ ಬಗ್ಗೆ ಸಂಬಂಧಪಟ್ಟವರು ಕ್ರಮಕೈಗೊಳ್ಳ ಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿ: ಮುರುಳಿಧರನ್ ಆರ್., ಹಿರಿಯೂರು (ಚಿತ್ರದುರ್ಗ – ದಾವಣಗೆರೆ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy