nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ

    November 6, 2025

    ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ

    November 6, 2025

    ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ

    November 6, 2025
    Facebook Twitter Instagram
    ಟ್ರೆಂಡಿಂಗ್
    • ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
    • ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
    • ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
    • ಖ್ಯಾತ ಖಳನಟ ಹರೀಶ್ ರಾಯ್  ನಿಧನ
    • ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ
    • ಕುಣಿಗಲ್ | ಬೈಕ್‌ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು
    • ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
    • ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಒಡೆತನದ ಗೋಮಾಳ ಭೂಮಿಯನ್ನು ಖಾಸಗಿಯವರಿಗೆ ಮಾರಾಟ ವಿರೋಧಿಸಿ ಸಿ.ಪಿ.ಐ. ಪ್ರತಿಭಟನೆ
    ತುಮಕೂರು February 18, 2022

    ಸರ್ಕಾರಿ ಒಡೆತನದ ಗೋಮಾಳ ಭೂಮಿಯನ್ನು ಖಾಸಗಿಯವರಿಗೆ ಮಾರಾಟ ವಿರೋಧಿಸಿ ಸಿ.ಪಿ.ಐ. ಪ್ರತಿಭಟನೆ

    By adminFebruary 18, 2022No Comments2 Mins Read
    cpi

    ತುಮಕೂರು: ರಾಜ್ಯ ಸರ್ಕಾರದ ಬಳಿ: 19.39 ಲಕ್ಷ ಎಕರೆ ಜಮೀನು, ಲಭ್ಯವಿದ್ದು, ಈ ಜಮೀನನ್ನು ರಾಜ್ಯ ಸರ್ಕಾರ ಖಾಸಗಿ ಸಂಘ, ಸಂಸ್ಥೆ, ಧಾರ್ಮಿಕ ಕೇಂದ್ರ ಟ್ರಸ್ಟ್, ಇತ್ಯಾದಿ ಬೃಹತ್ ಉದ್ಯಮಿಗಳಿಗೆ ಗೋಮಾಳ ಸರ್ಕಾರಿ ಭೂಮಿಯನ್ನು ಗುತ್ತಿಗೆ ಭೋಗ್ಯಕ್ಕೆ ನೀಡಲು ಈಗಾಗಲೇ ಕಂದಾಯ ಸಚಿವರ ನೇತೃತ್ವದಲ್ಲಿ ಉಪ ಸಮಿತಿ ರಚನೆ ಮಾಡಿರುವುದು ಖಂಡನೀಯವಾಗಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ ತುಮಕೂರು ಘಟಕದ ಆಕ್ರೋಶ ವ್ಯಕ್ತಪಡಿಸಿದೆ.

    ಈ ಸಂಬಂಧ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸಿ.ಪಿ.ಐ. , ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿತು.


    Provided by
    Provided by

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐ ನ ಜಿಲ್ಲಾ ಕಾರ್ಯದರ್ಶಿ ಗಿರೀಶ್, ರಾಜ್ಯಾದ್ಯಂತ ಈ ಹಿಂದೆಯೇ ಲಕ್ಷಾಂತರ ಬಗರ್ ಹುಕುಂ ಸಾಗುವಳಿದಾರರು ತಾವು ಸಾಗುವಳಿ ಮಾಡುತ್ತಿರುವ ಸರ್ಕಾರಿ ಭೂಮಿಯ ಹಕ್ಕು ಪತ್ರ ಕೋರಿ ಫಾರ್ಮ್ ನಂಬರ್ 50, 53, ಮತ್ತು 57ರಲ್ಲಿ ಅಕ್ರಮ-ಸಕ್ರಮ ಸಮಿತಿಗೆ ಅರ್ಜಿ ಸಲ್ಲಿಸಿದ್ದಾರೆ. ಅವರಿಗೆ ಇನ್ನೂ ಭೂಮಿ ಮಂಜೂರಾಗಿಲ್ಲ. ಹೀಗಿರುವಾಗ ಇಂತಹ ಬಗರ್ ಹುಕುಂ ಸಾಗುವಳಿ ಭೂಮಿಯನ್ನು ಸರ್ಕಾರಿ ಭೂಮಿ ಎಂದು ಪರಿಗಣಿಸಿ ಖಾಸಗಿ ಸಂಸ್ಥೆಗಳಿಗೆ ಮಂಜೂರು ಮಾಡಿದ್ದಲ್ಲಿ ಲಕ್ಷಾಂತರ ಕುಟುಂಬಗಳು ಭೂ ರಹಿತವಾಗಿ ಬೀದಿಪಾಲಾಗಲಿದ್ದಾರೆ. ಇದು ಸಾಮಾಜಿಕ ಸಂಘರ್ಷಕ್ಕೂ ಕಾರಣವಾಗಲಿದೆ ಎಂದರು.

    ಈಗಾಗಲೇ ರಾಜ್ಯ ಸರ್ಕಾರ ನಿವೇಶನರಹಿತ ಸಮೀಕ್ಷೆ ನಡೆಸಿದ್ದು, ಅದರಂತೆ ಲಕ್ಷಾಂತರ ಕುಟುಂಬಗಳು ಸ್ವಂತ ವಾಸದ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅವರಿಗೆಲ್ಲಾ ಇದುವರೆಗೂ ನಿವೇಶನ ಸಿಕ್ಕಿಲ್ಲ, ರಾಜ್ಯದ ಬಹುತೇಕ ಗ್ರಾಮ ಪಂಚಾಯ್ತಿಗಳು ನಿವೇಶನಕ್ಕಾಗಿ ಭೂಮಿ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಿವೆ. ನಿವೇಶನ ನೀಡಲು ಅಗತ್ಯ ಸರ್ಕಾರಿ ಭೂಮಿ ಲಭ್ಯವಿಲ್ಲ ಎಂದು ಕಂದಾಯ ಇಲಾಖೆ ಹೇಳುತ್ತಿದ್ದು, ಅದಕ್ಕೆ ಪರಿಭಾವಿತ ಅರಣ್ಯ (Deemed Forest ) ಕಾರಣ ನೀಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಖಾಸಗಿ ಸಂಸ್ಥೆಗಳಿಗೆ ಭೂಮಿ ನೀಡುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ಕ್ರಮವಾಗುತ್ತದೆ ಎಂದರು.

    ಸಿಪಿಐ ಮುಖಂಡ ಕಂಬೇಗೌಡ ಮಾತನಾಡಿ, ರಾಜ್ಯದಲ್ಲಿ ಸರ್ಕಾರದ ಭೂಸ್ವಾಧೀನ ಕ್ರಮದಿಂದ ಭೂಮಿ ಕಳೆದುಕೊಂಡ ಭೂಸಂತ್ರಸ್ಥರಿಗೆ ಬದಲಿ ಭೂಮಿ ನೀಡುವ ನೂರಾರು ಪುನರ್ ವಸತಿ ಯೋಜನೆಗಳ ಪ್ರಕ್ರಿಯೆ ಪೂರ್ಣಗೊಳ್ಳದೆ. ಭೂ ಲಭ್ಯತೆಯ ಅನುಮೋದನೆ ರಾಜ್ಯ ಸರ್ಕಾರವನ್ನು ಎದುರು ನೋಡುತ್ತಿವೆ. ಈ ಹಂತದಲ್ಲಿ ಖಾಸಗಿ ಸಂಘ ಸಂಸ್ಥೆಗಳಿಗೆ ಭೂಮಿ ನೀಡಲು ಉದ್ದೇಶಿಸಿರುವುದು ಅಕ್ರಮ ಆದ್ಯತೆಯಾಗುತ್ತದೆ ಎಂದರು.

    ಜಿಲ್ಲಾಧಿಕಾರಿಗಳ ಪರವಾಗಿ ತುಮಕೂರು ತಹಶೀಲ್ದಾರ್ ಮೋಹನ್ ಅವರು ಸಿಪಿಐ ಕಾರ್ಯಕರ್ತರ ಮನವಿಯನ್ನು ಸ್ವೀಕರಿಸಿದರು. ಈ ವೇಳೆ ಸಿಪಿಐ ಸಂಘಟನೆ ಕಾಂತರಾಜು, ರಮೇಶ್, ರಾಮಸ್ವಾಮಿ, ದೊಡ್ಡತಾಯಮ್ಮ, ರವಿಕುಮಾರ್, ಉದಯ್, ವೆಂಕಟೇಶ್ , ಮಾರುತಿ ಸೇರಿದಂತೆ ಇತರರು ಉಪಸ್ಥಿತಿ ಇದ್ದರು.

    ವರದಿ: ಎ. ಎನ್. ಪೀರ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ

    November 6, 2025

    ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ

    November 6, 2025

    ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ

    November 6, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ

    November 6, 2025

    ತುಮಕೂರು: ತಾಲ್ಲೂಕಿನ ವಿವಿಧ ಕಡೆ ನವೆಂಬರ್ 7ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಲಿದೆ. ರಾಜ್ಯಪಾಲರಿಂದ ಜ್ಞಾನಸಿರಿ…

    ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ

    November 6, 2025

    ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ

    November 6, 2025

    ಖ್ಯಾತ ಖಳನಟ ಹರೀಶ್ ರಾಯ್  ನಿಧನ

    November 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.