nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » KLE ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ: ಕ್ಯಾನ್ಸರ್ ಬಗ್ಗೆ ಅರಿವಿನ ತುರ್ತು ಅಗತ್ಯತೆ ಇದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    ಜಿಲ್ಲಾ ಸುದ್ದಿ January 5, 2025

    KLE ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ: ಕ್ಯಾನ್ಸರ್ ಬಗ್ಗೆ ಅರಿವಿನ ತುರ್ತು ಅಗತ್ಯತೆ ಇದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    By adminJanuary 5, 2025No Comments2 Mins Read
    kle

    ಬೆಳಗಾವಿ: ಕ್ಯಾನ್ಸರ್ ರೋಗವು ಜಗತ್ತಿನಾದ್ಯಂತ ವೇಗವಾಗಿ ಹರಡುತ್ತಿರುವುದು ಕಳವಳಕಾರಿ ಸಂಗತಿ. ಇದಕ್ಕೆ ಹಲವು ಕಾರಣಗಳಿದ್ದು, ನಮ್ಮ ಜೀವನ ಶೈಲಿ ಆರೋಗ್ಯದ ಮೇಲೆ ಬಹಳ ಪರಿಣಾಮ ಬೀರುತ್ತಿದೆ. ಹಾಗಾಗಿ, ಸದೃಢ ಆರೋಗ್ಯ ಮತ್ತು ಸೂಕ್ತ ಚಿಕಿತ್ಸೆಯ ಬಗ್ಗೆ ಜನರಲ್ಲಿ ಪರಿಣಮಕಾರಿಯಾಗಿ ಅರಿವು ಮೂಡಿಸುವ ತುರ್ತು ಅಗತ್ಯತೆ ಇದೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.

    ಕೆಎಲ್ ಇ ಡಾ‌‌.ಸಂಪತ್‌ ಕುಮಾರ ಶಿವಣಗಿ ನೂತನ ಕ್ಯಾನ್ಸರ್ ಆಸ್ಪತ್ರೆಯನ್ನು ಶುಕ್ರವಾರ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, “ವಿಶ್ವದ ಜನಸಂಖ್ಯೆಯಲ್ಲಿ ಪ್ರತಿ ವರ್ಷ 2 ಕೋಟಿ ಜನ ಕ್ಯಾನ್ಸರ್‌ ರೋಗಕ್ಕೆ ತುತ್ತಾಗುತ್ತಿದ್ದಾರೆ. ಇದರಲ್ಲಿ 97 ಲಕ್ಷ ಜನ ಸಾವನ್ನಪ್ಪುತ್ತಿದ್ದಾರೆ. ಭಾರತದಲ್ಲಿ ಕೂಡ ಕ್ಯಾನ್ಸರ್‌ ಆಘಾತಕಾರಿಯಾಗಿ ಹರಡುತ್ತಿದೆ. ಪ್ರತಿ 1 ಲಕ್ಷ ಜನರಲ್ಲಿ 100 ಜನರಿಗೆ ಕ್ಯಾನ್ಸರ್‌ ಬರುತ್ತಿದೆ. 2025ರಲ್ಲಿ ಕ್ಯಾನ್ಸರ್‌ ರೋಗ ಹರಡುವ ದರವು ಶೇ.13ರಷ್ಟು ಹೆಚ್ಚಲಿದೆ ಎಂದು ಐಸಿಎಂಆರ್‌ ಸಂಶೋಧನೆಯಿಂದ ಗೊತ್ತಾಗಿದೆ” ಎಂದರು.


    Provided by
    Provided by

    ಕ್ಯಾನ್ಸರ್ ರೋಗಿಗಳ ದೈಹಿಕ ಮತ್ತು ಮಾನಸಿಕ ಅಗತ್ಯಗಳನ್ನು ಪರಿಹರಿಸುವುದು ಮತ್ತು ಸಮಗ್ರ ಆರೈಕೆ ಮಾಡುವುದು ಆರೋಗ್ಯ ವೃತ್ತಿಪರರ ಪ್ರಮುಖ ಕರ್ತವ್ಯವಾಗಿದೆ. ವೈದ್ಯರು ಹೇಳುವ ಪ್ರತಿಯೊಂದು ಸಹಾನುಭೂತಿ ಮತ್ತು ವಿಶ್ವಾಸದ ಮಾತುಗಳು ರೋಗಿಯ ಜೀವನವನ್ನು ಉತ್ತಮವಾಗಿ ಬದಲಾಯಿಸುವ ಶಕ್ತಿಯನ್ನು ಹೊಂದಿದ್ದು, ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ” ಕರೆ ನೀಡಿದರು

    ವೈದ್ಯಕೀಯ ವೃತ್ತಿಗೆ ತನ್ನದೇ ಆದ ಘನತೆ ಮತ್ತು ಜವಾಬ್ದಾರಿ ಇದೆ. ವೃತ್ತಿಪರ ವೈದ್ಯರು ನಿಮ್ಮಲ್ಲಿಗೆ ಬರುವ ರೋಗಿಗಳಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು. ಯಾವುದೇ ರೋಗಕ್ಕೆ ಪ್ರಾಥಮಿಕ ಹಂತದಲ್ಲೇ ಸೂಕ್ತ ಚಿಕಿತ್ಸೆ ಪಡೆಯುವಂತೆ ಅರಿವು ಮೂಡಿಸುವ ಕೆಲಸ ಮಾಡಬೇಕು. ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಮಹತ್ತರ ಜವಾಬ್ದಾರಿ ವೈದ್ಯರ ಮೇಲಿದೆ. ಇನ್ನು ಕೇಂದ್ರ ಸರ್ಕಾರ ಎಲ್ಲ ವರ್ಗದ ಜನರಿಗೆ ಸಮರ್ಪಕ ಚಿಕಿತ್ಸೆ ದೊರೆಯಬೇಕು ಎಂಬ ಉದ್ದೇಶದಿಂದ ಆಯುಷ್ ಮಾನ್ ಸೇರಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

    ತಪ್ಪು ಆಹಾರ ಪದ್ಧತಿಯಿಂದ ರೋಗಗಳಿಗೆ ತುತ್ತಾಗುತ್ತಿದ್ದೇವೆ: ಕೇಂದ್ರ ಸಚಿವ ಪ್ರಲ್ಹಾದ್​

    ಜೋಶಿ ಮಾತನಾಡಿ, ರಾಷ್ಟ್ರಪತಿ‌ ದ್ರೌಪದಿ ಅವರು ಆದಿವಾಸಿಗಳು ಮತ್ತು ಹಿಂದುಳಿದವರ ಪರ ಸಾಕಷ್ಟು ಹೋರಾಡಿದ್ದಾರೆ. ಒಡಿಶಾದಲ್ಲಿ ಅತ್ಯುತ್ತಮ ಶಾಸಕಿ ಪ್ರಶಸ್ತಿ ಪಡೆದಿದ್ದರು

    ಆದಿವಾಸಿ ಸಮುದಾಯದ ಪ್ರಥಮ ಮಹಿಳೆ ರಾಷ್ಟ್ರಪತಿ ಆಗಿದ್ದು ನಮ್ಮೆಲ್ಲರ ಹೆಮ್ಮೆ. ಇವತ್ತಿನ ಜೀವನಶೈಲಿ, ತಪ್ಪು ಆಹಾರ ಪದ್ಧತಿಯಿಂದ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದೇವೆ.‌ ಸರ್ವಜ್ಞ ಅವರು ತಮ್ಮ ವಚನದ ಮೂಲಕ ಆಹಾರ ಪದ್ಧತಿ ಬಗ್ಗೆ ಆಗಲೇ ಎಚ್ಚರಿಸಿದ್ದರು.‌ ಈಗ 12.8ರಷ್ಟು ಜನಸಂಖ್ಯೆ ಕ್ಯಾನ್ಸರ್ ನಿಂದ ಬಳಲುತ್ತಿದೆ. ರೋಗ ಕಂಡು ಹಿಡಿದು, ಪ್ರಾಥಮಿಕ ಹಂತದಲ್ಲಿ ರೋಗ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಿದರೆ, ಕ್ಯಾನ್ಸರ್ ಗುಣಪಡಿಸಬಹುದು ಎಂದರು.

    ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಜಗತ್ತಿನ ಆರ್ಥಿಕ ರಾಜಧಾನಿಯಾಗಿ ಹೊರ ಹೊಮ್ಮುತ್ತಿದೆ. ವಿಶ್ವದ 5ನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಭವಿಷ್ಯದಲ್ಲಿ 3ನೇ ದೇಶವಾಗಲಿದೆ. ಅಲ್ಲದೇ ಆರೋಗ್ಯವಂತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಕೆಎಲ್ಇ ಶಿವಣಗಿ ಕ್ಯಾನ್ಸರ್ ಆಸ್ಪತ್ರೆ ಈ ಭಾಗದಲ್ಲಿ ಬಹುದೊಡ್ಡ ಕೊಡುಗೆ ನೀಡಲಿದೆ” ಎಂದು ಹೇಳಿದರು.

    ಪ್ರಾಸ್ತಾವಿಕವಾಗಿ ಕೆಎಲ್ ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ್ ಕೋರೆ ಮಾತನಾಡಿದರು. ದಾನಿಗಳಾದ ಡಾ.ಸಂಪತ್ ಕುಮಾರ ಶಿವಣಗಿ ಹಾಗೂ ಅವರ ಧರ್ಮಪತ್ನಿ ಡಾ.ಉದಯಾ ಶಿವಣಗಿ ಸೇರಿ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಭಾಗವಹಿಸಿದ್ದರು. ಕೆಎಲ್ ಇ ಅಧ್ಯಕ್ಷ ಮಹಾಂತೇಶ ಕೌಜಲಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.