nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ

    November 24, 2025

    450 ಮೆಟ್ಟಿಲುಗಳನ್ನು ಏರಿ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ 2 ವರ್ಷದ ಬಾಲಕ

    November 24, 2025

    ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು

    November 24, 2025
    Facebook Twitter Instagram
    ಟ್ರೆಂಡಿಂಗ್
    • ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ
    • 450 ಮೆಟ್ಟಿಲುಗಳನ್ನು ಏರಿ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ 2 ವರ್ಷದ ಬಾಲಕ
    • ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು
    • ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
    • ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ
    • ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
    • ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
    • ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧ್ವಜಾರೋಹಣ ಮಾಡುವ ಮೊದಲು ತಪ್ಪದೇ ಈ ನಿಯಮಗಳನ್ನು ತಿಳಿಯಿರಿ !
    ರಾಜ್ಯ ಸುದ್ದಿ August 14, 2024

    ಧ್ವಜಾರೋಹಣ ಮಾಡುವ ಮೊದಲು ತಪ್ಪದೇ ಈ ನಿಯಮಗಳನ್ನು ತಿಳಿಯಿರಿ !

    By adminAugust 14, 2024No Comments2 Mins Read
    flag

    ಭಾರತದ ಧ್ವಜ ಸಂಹಿತೆ 2002ರ ನಿಯಮದ ಪ್ರಕಾರ ಧ್ವಜವನ್ನು ಆಚರಿಸಲು ಅದರದ್ದೇ ಆದ ನಿಯಮಗಳಿದ್ದು, ಭಾರತೀಯ ನಾಗರಿಕರಾದ ನಾವು ಆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದು ಕಡ್ಡಾಯ. ಇಲ್ಲದಿದ್ದರೆ ಜೈಲೂಟ ಗ್ಯಾರಂಟಿ.

    ರಾಷ್ಟ್ರಧ್ವಜವನ್ನು ಹಾರಿಸುವ ನಿಯಮಗಳು:


    Provided by
    Provided by

    ಧ್ವಜ ಸಂಹಿತೆ 2002ರ ಪ್ರಕಾರ, ತ್ರಿವರ್ಣ ಧ್ವಜ 3:2 ಅನುಪಾತದಲ್ಲಿ ಇರಬೇಕು. ತಿರಂಗಾವನ್ನು ತಲೆಕೆಳಗಾಗಿ ಪ್ರದರ್ಶಿಸಬಾರದು. ಕೇಸರಿ ಬಣ್ಣವು ಮೇಲಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ. ಮೇಲೆ ಕೇಸರಿ, ಮಧ್ಯ ಬಳಿ, ಕೆಳಗೆ ಹಸಿರು ಬಣ್ಣ ಇರಬೇಕು.

    ಧ್ವಜವು ಗೌರವ ಸ್ಥಾನದಲ್ಲಿರಬೇಕು. ಧ್ವಜ ಹರಿದಿರಬಾರದು ಹಾಗೂ ಕೊಳಕು ಆಗಿರಬಾರದು. ಅದರ ಮೇಲೆ ಏನೂ ಬರೆಯಬಾರದು ಅಥವಾ ಮುದ್ರಿಸಬಾರದು. ಬೇರೆ ಯಾವುದೇ ಧ್ವಜವನ್ನೂ ತ್ರಿವರ್ಣ ಧ್ವಜಕ್ಕೆ ಸಮನಾಗಿ ಮತ್ತು ಎತ್ತರದಲ್ಲಿ ಹಾರಿಸಬಾರದು.

    ಬಾವುಟದ ಮಧ್ಯಭಾಗದಲ್ಲಿ 24 ಗೆರೆಗಳ ಅಶೋಕ ಚಕ್ರ ಹೊಂದಿರಬೇಕು. ಅದು ಕಡು ನೀಲಿಯದ್ದಾಗಿರಬೇಕು. ಒಂದು ವೇಳೆ ಮನೆಯಲ್ಲಿ ಧ್ವಜ ಹಾರಿಸುತ್ತಿದ್ದರೆ, ಧ್ವಜ ವಾಲದಂತೆ ಮತ್ತು ನೆಲ ಅಥವಾ ನೀರಿಗೆ ತಾಗದಂತೆ ನೋಡಿಕೊಳ್ಳಬೇಕು.

    ತ್ರಿವರ್ಣ ಧ್ವಜವನ್ನು ಲಂಬವಾಗಿ ಪ್ರದರ್ಶಿಸಿದಾಗ ಕೇಸರಿ ಬಣ್ಣದ ಪಟ್ಟಿಯು ಬಲಭಾಗದಲ್ಲಿ ಇರಬೇಕು. ಹೂವುಗಳು, ಹೂಮಾಲೆಗಳು ಅಥವಾ ಲಾಂಛನಗಳು ಯಾವುದೂ ರಾಷ್ಟ್ರಧ್ವಜದಲ್ಲಿ ಇರಬಾರದು. ತ್ರಿವರ್ಣ ಧ್ವಜವನ್ನು ಅಲಂಕಾರಿಕ ಉದ್ದೇಶಗಳಿಗಾಗಿ ಬಳಸಬಾರದು.

    ಭಾರತದ ಧ್ವಜ ಸಂಹಿತೆಯ ಭಾಗ 3ರ ವಿಭಾಗ 9ರಲ್ಲಿನ ನಿಬಂಧನೆಗಳ ಪ್ರಕಾರ, ವಾಹನದ ಬಾನೇಟಿನ ಮೇಲೆ ಧ್ವಜವನ್ನು ಹಾರಿಸಬೇಕು. ವಾಹನಗಳ ಬದಿ, ಹಿಂಭಾಗ, ಮೇಲ್ಭಾಗ ಮುಚ್ಚಲು ಬಳಸಬಾರದು. ಪ್ಲಾಸ್ಟಿಕನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸಬೇಡಿ.

    ನಾವು ಧ್ವಜಾರೋಹಣದ ವೇಳೆ ಎಷ್ಟು ಗೌರವ ನೀಡುತ್ತೇವೆಯೋ ಅದೇ ರೀತಿ ಇಳಿಸುವಾಗಲೂ ಅಷ್ಟೇ ಗೌರವ ನೀಡಬೇಕು. ಧ್ವಜ ತೆಗೆದ ನಂತರ ಮಡಚಲು ಅದರದ್ದೇ ನಿಯಮಗಳಿವೆ. ಇಬ್ಬರು ಧ್ವಜ ಮಡಚಬೇಕು. ಬಾವುಟದಲ್ಲಿ ಹಸಿರು ಬಣ್ಣವನ್ನು ಮೊದಲು ಮಡಚಬೇಕು.

    ನಂತರ ಹಸಿರು ಬಣ್ಣದ ಪಟ್ಟಿ ಮೇಲೆ ಕೇಸರಿ ಬಣ್ಣದ ಪಟ್ಟಿ ಮುಚ್ಚಬೇಕು. ಹೀಗೆ ಮಡಚಿದ ನಂತರ ಅಶೋಕ ಚಕ್ರ ಮೇಲ್ಭಾಗದಲ್ಲಿ ಕಾಣಿಸಬೇಕು. ನಂತರ ಅದನ್ನು ಸುರಕ್ಷಿತ ಸ್ಥಳದಲ್ಲಿಡಬೇಕು. ಒಂದು ವೇಳೆ ಧ್ವಜ ಹಾನಿಯಾದರೆ ಎಲ್ಲೆಂದರಲ್ಲಿ ಬಿಸಾಡಬಾರದು.

    ತ್ರಿವರ್ಣಧ್ವಜ ಹಾನಿಯಾಗಿದ್ದರೆ ಕಸದ ಬುಟ್ಟಿ ಅಥವಾ ಬೇರೆ ಯಾವುದೇ ಸ್ಥಳದಲ್ಲಿ ಎಸೆಯಬಾರದು. ಬದಲಿಗೆ ಗೌರವಯುತವಾಗಿ ಸುಡಬೇಕು ಅಥವಾ ಹೂಳಬೇಕು. ಸುಟ್ಟ ನಂತರ ಅದರ ಬೂದಿಯನ್ನು ನದಿ ನೀರಿನಲ್ಲಿ ಬಿಟ್ಟುಬರಬೇಕು.

    ಭಾರತದ ಧ್ವಜ ಸಂಹಿತೆ-2002, ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯಿದೆ-1971ಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ರಾಷ್ಟ್ರ ಧ್ವಜಕ್ಕೆ ಅವಮಾನಿಸಿದ್ದು, ಅಗೌರವಿಸಿದ್ದು, ದುರುಪಯೋಗ ಮಾಡಿಕೊಂಡರೆ ಮೂರು ವರ್ಷಗಳ ಜೈಲು ಶಿಕ್ಷೆ ಎದುರಿಸಬೇಕಾಗುತ್ತದೆ.

    ರಾಷ್ಟ್ರ ಧ್ವಜಕ್ಕೆ ಸಂಬಂಧಿಸಿ ಕಠಿಣ ಕಾನೂನು ನಿಯಮಗಳಿವೆ. ರಾಷ್ಟ್ರ ಗೀತೆ ಮತ್ತು ತ್ರಿವರ್ಣ ಧ್ವಜವನ್ನು ಗೌರವಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ. ಅದು ಪಾಲನೆಯಾಗದಿದ್ದರೆ ಶಿಕ್ಷಾರ್ಹ ಅಪರಾಧ. ಯಂತ್ರದಿಂದ ತಯಾರಿಸಿದ ಹಾಗೂ ಪಾಲಿಸ್ಟರ್ ನಿರ್ಮಿತ ರಾಷ್ಟ್ರಧ್ವಜ ಬಳಕೆಗೆ ಅವಕಾಶವಿರಲಿಲ್ಲ.

    ಭಾರತದ ಧ್ವಜವನ್ನು ಸೂರ್ಯೋದಯ ಮತ್ತು ಸೂರ್ಯಾಸ್ತದ ನಡುವೆ ಮಾತ್ರ ಹಾರಿಸಬಹುದು. ತ್ರಿವರ್ಣ ಧ್ವಜದ ಸಮವಸ್ತ್ರ ಧರಿಸಬಾರದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ

    November 24, 2025

    ತುಮಕೂರು: ನಗರದ ಶ್ರೀ ಸಿದ್ದಾರ್ಥ ಹೈಯರ್ ಎಜುಕೇಶನ್ ಅಕಾಡೆಮಿಯ 14ನೇ ವಾರ್ಷಿಕ ಘಟಿಕೋತ್ಸವದಲ್ಲಿ ಡಾ.ಇಂಪನಾ ಬಿ. ವರ್ಧನ್ ಅವರು ಅತ್ಯುತ್ತಮ…

    450 ಮೆಟ್ಟಿಲುಗಳನ್ನು ಏರಿ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ 2 ವರ್ಷದ ಬಾಲಕ

    November 24, 2025

    ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು

    November 24, 2025

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.