nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ | ಮೂಲಸೌಕರ್ಯ, ನಿರ್ವಹಣೆ ಸಮಸ್ಯೆಯಿಂದ ಬಳಲುತ್ತಿರುವ ಸರ್ಕಾರಿ ಕಾಲೇಜು

    October 7, 2025

    ಸರಗೂರು | ವಿವಿಧೆಡೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ

    October 7, 2025

    ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು

    October 7, 2025
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ | ಮೂಲಸೌಕರ್ಯ, ನಿರ್ವಹಣೆ ಸಮಸ್ಯೆಯಿಂದ ಬಳಲುತ್ತಿರುವ ಸರ್ಕಾರಿ ಕಾಲೇಜು
    • ಸರಗೂರು | ವಿವಿಧೆಡೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ
    • ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು
    • ಮುಖ್ಯ ನ್ಯಾಯಮೂರ್ತಿಯತ್ತ ಶೂ ಎಸೆತ: ಜಾನ್ಸನ್ ಘೋಡೆ ತೀವ್ರ ಖಂಡನೆ
    • ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ
    • ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ
    • ಮನೆಯಲ್ಲಿದ್ದುಕೊಂಡೇ ಹಣ ಗಳಿಕೆ:  ಫ್ಲಿಪ್‌ ಕಾರ್ಟ್ ಹೆಸರಲ್ಲಿ ವಂಚನೆ
    • ಖಾತೆದಾರನ ಗಮನಕ್ಕೆ ಬಾರದೇ ಫೋನ್ ಪೇಯಲ್ಲಿ 7.87 ಲಕ್ಷ ವರ್ಗಾವಣೆ!: ದೂರು ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆದರ್ಶ ಜೀವನಕ್ಕೆ ವಚನ ಸಾಹಿತ್ಯದ ಅರಿವು ಅಗತ್ಯ: ಪ್ರೊ.ಪ್ರಸನ್ನ ಕುಮಾರ್ ಕೆ.
    ತುಮಕೂರು March 28, 2025

    ಆದರ್ಶ ಜೀವನಕ್ಕೆ ವಚನ ಸಾಹಿತ್ಯದ ಅರಿವು ಅಗತ್ಯ: ಪ್ರೊ.ಪ್ರಸನ್ನ ಕುಮಾರ್ ಕೆ.

    By adminMarch 28, 2025No Comments2 Mins Read
    vachana

    ತುಮಕೂರು: ಈಗಿನ ಕಾಲದ ಯುವ ಜನತೆಗೆ ಬಸವಣ್ಣನವರ ಸಮಗ್ರ ಚಿಂತನೆಗಳನ್ನು ತಲುಪಿಸುವ ಅಗತ್ಯ ಇದೆ. ಆದರ್ಶ ಜೀವನ ನಡೆಸುವುದಕ್ಕೆ ವಚನ ಸಾಹಿತ್ಯದ ಅರಿವು ಬಹಳ ಮುಖ್ಯ ಎಂದು ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ. ಹೇಳಿದರು.

    ತುಮಕೂರು ವಿಶ್ವವಿದ್ಯಾನಿಲಯದ ಶ್ರೀ ಬಸವೇಶ್ವರ ಅಧ್ಯಯನ ಪೀಠ, ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗ ಬುಧವಾರ ಹಮ್ಮಿಕೊಂಡಿದ್ದ ‘ವಚನ ಗಾಯನ ಮತ್ತು ವ್ಯಾಖ್ಯಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by
    Provided by

    ತುಮಕೂರು ವಿವಿಯಲ್ಲಿ 16 ಅಧ್ಯಯನ ಪೀಠಗಳಿದ್ದು, ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳುವುದಕ್ಕೆ, ಸಾಮಾಜಿಕ, ಆರ್ಥಿಕ, ಕಲೆ, ಸಾಹಿತ್ಯ, ವಿಜ್ಞಾನ ಕ್ಷೇತ್ರಗಳ ಬಗ್ಗೆ ಹೆಚ್ಚಿನ ರೀತಿಯ ಅಧ್ಯಯನಗಳನ್ನು ಕೈಗೊಳ್ಳುವುದಕ್ಕೆ ವಿದ್ಯಾರ್ಥಿಗಳು ಈ ಪೀಠಗಳ ನೆರವು ಪಡೆಯಬೇಕು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ.ಪ್ರಕಾಶ್ ಎಂ.ಶೇಟ್ ಮಾತನಾಡಿ, ಸೂರ್ಯ ಚಂದ್ರ ಇರುವವರೆಗೂ ಬಸವಣ್ಣನವರ ವಚನಗಳು ಚಾಲ್ತಿಯಲ್ಲಿ ಇರುತ್ತವೆ. ಅವರು ರಚಿಸಿರುವ ವಚನಗಳನ್ನು ಸಮಗ್ರವಾಗಿ ಅಧ್ಯಯನ ಮಾಡಲು ಅಪಾರ ಪರಿಶ್ರಮ ಹಾಗೂ ಸಮಯದ ಅವಶ್ಯಕತೆ ಇದೆ ಎಂದರು.

    ಯುವಕರು ಬಸವಣ್ಣನವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಸಮಾಜದಲ್ಲಿರುವ ಅಸಮಾನತೆ, ಜಾತಿ ತಾರತಮ್ಯಗಳ ನಿರ್ಮೂಲನೆಗೆ ಶ್ರಮಿಸಬೇಕು ಎಂದರು.

    ಬಸವೇಶ್ವರ ಅಧ್ಯಯನ ಪೀಠದ ಸಂಯೋಜಕ ಡಾ. ವೆಂಕಟರೆಡ್ಡಿ ರಾಮರೆಡ್ಡಿ ಮಾತನಾಡಿ, ಅಧ್ಯಯನ ಪೀಠದ ಪ್ರಮುಖ ಧ್ಯೇಯೋದ್ದೇಶಗಳನ್ನು ವಿವರಿಸಿದರು. ಬಸವಣ್ಣನವರ ವಚನಗಳ ಪ್ರಚಾರ ಮತ್ತು ಪ್ರಸಾರ, ವಚನ ಸಾಹಿತ್ಯದ ಕುರಿತು ವಿಶೇಷ ಉಪನ್ಯಾಸ, ವಿಚಾರ ಸಂಕಿರಣ ಹಾಗೂ ಕಾರ್ಯಗಾರಗಳನ್ನು ಹಮ್ಮಿಕೊಳ್ಳುವುದು, ವಚನ ಸಾಹಿತ್ಯದ ಅನನ್ಯತೆ ಹಾಗೂ ಪ್ರಸ್ತುತತೆಯನ್ನು ಈ ಕಾಲದ ಯುವ ಜನತೆಗೆ ತಲುಪಿಸುವ ಕಾರ್ಯಗಳನ್ನು ಪೀಠ ಮಾಡಲಿದೆ ಎಂದರು.

    ಸಮಕಾಲಿನ ಸಾಂಸ್ಕೃತಿಕ ಸಂದರ್ಭದ ಅಗತ್ಯಗಳಾದ ಸೌಹಾರ್ದತೆ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಪಸರಿಸುವುದಕ್ಕಾಗಿ ಬಸವಣ್ಣನವರ ಮತ್ತು ಇತರ ವಚನಕಾರರ ವಚನಗಳ ಕುರಿತ ಅರಿವನ್ನು ನಾಡಿನಾದ್ಯಂತ ಬೆಳಗಬೇಕಿದೆ ಎಂದರು.
    ಪ್ರಸಿದ್ಧ ಹರಿಕಥಾ ವಿದ್ವಾಂಸ, ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಡಾ. ಲಕ್ಷ್ಮಣದಾಸ್ ಅವರು ವಚನಗಳ ಗಾಯನ ಹಾಗೂ ವ್ಯಾಖ್ಯಾನ ನಡೆಸಿಕೊಟ್ಟರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಟಿ.ಆರ್. ಲೀಲಾವತಿ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025

    ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ

    October 6, 2025

    ಮನೆಯಲ್ಲಿದ್ದುಕೊಂಡೇ ಹಣ ಗಳಿಕೆ:  ಫ್ಲಿಪ್‌ ಕಾರ್ಟ್ ಹೆಸರಲ್ಲಿ ವಂಚನೆ

    October 6, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ | ಮೂಲಸೌಕರ್ಯ, ನಿರ್ವಹಣೆ ಸಮಸ್ಯೆಯಿಂದ ಬಳಲುತ್ತಿರುವ ಸರ್ಕಾರಿ ಕಾಲೇಜು

    October 7, 2025

    ಮಧುಗಿರಿ: ಪಟ್ಟಣದ ಹೃದಯ ಭಾಗದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು ಮೂಲಸೌಕರ್ಯ ಕೊರತೆ ಮತ್ತು ನಿರ್ವಹಣೆ ಕೊರತೆಯನ್ನು ಎದುರಿಸುತ್ತಿದ್ದು,  ವಿದ್ಯಾರ್ಥಿಗಳು ಸೋರುತ್ತಿರುವ…

    ಸರಗೂರು | ವಿವಿಧೆಡೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ

    October 7, 2025

    ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು

    October 7, 2025

    ಮುಖ್ಯ ನ್ಯಾಯಮೂರ್ತಿಯತ್ತ ಶೂ ಎಸೆತ: ಜಾನ್ಸನ್ ಘೋಡೆ ತೀವ್ರ ಖಂಡನೆ

    October 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.