ತಿಪಟೂರು: ಕೈ ಕೊಟ್ಟಿರುವ ಕೊಬ್ಬರಿ ಬೆಲೆ ರೈತರ ಜೀವನ ವಿಷ ಕುಡಿಯುವ ಪರಿಸ್ಥಿತಿಗೆ ಬಂದಿದೆ ಎಂದು ಜನಸ್ಪಂದನ ಟ್ರಸ್ಟ್ಅಧ್ಯಕ್ಷ ಕಾಂಗ್ರೆಸ್ ಮುಖಂಡ ಸಿ.ಬಿ.ಶಶಿಧರ್ ತಿಳಿಸಿದರು.
ತಾಲೂಕಿನಲ್ಲಿ ಗ್ರಾಮಸ್ಥರೊಂದಿಗೆ ಕೊಬ್ಬರಿ ಬೆಂಬಲ ಬೆಲೆ 13ನೇ ದಿನಕ್ಕೆ ಕಾಲಿಟ್ಟಿರುವ ರೈತ ಧರಣಿಗೆ ಬೆಂಬಲ ನೀಡಿದ ಅವರು, ಮೂರು ನಾಲ್ಕು ತಿಂಗಳ ಹಿಂದೆ ಕುಂಟರಿಗೆ 18,000 ಪಡೆಯುತ್ತಿದ್ದ ರೈತರು ಇದೀಗ ಬೆಲೆ ಶೇಕಡ 55 ಕಡಿಮೆ ಆಗಿರುವುದರಿಂದ ಸಂಕಷ್ಟದಲ್ಲಿದ್ದಾರೆ. ಬೆಲೆ ಕಡಿಮೆಯಾಗಿರುವುದು ರೈತರಿಗೆ ಸಂಕಷ್ಟವಾಗಿ ಪರಿಣಮಿಸಿದೆ ಎಂದು ಅವರು ಹೇಳಿದರು.
ಕೇಂದ್ರ ಸಚಿವ ಅಮಿತ್ ಶಾ ಅವರನ್ನ ಕರೆಸಿ ತಿಪಟೂರಿನಲ್ಲಿ ಅದ್ದೂರಿ ತೆಂಗು ಬೆಳೆಗಾರರ ಸಮಾವೇಶ ಮಾಡಿ, ರೈತರಿಗೆ ಭರವಸೆ ನೀಡಿದರು. ಆದರೆ ಸಚಿವ ಬಿ.ಸಿ.ನಾಗೇಶ್ ಸೇರಿದಂತೆ ಜಿಲ್ಲೆಯ ಮೂವರು ಸಚಿವರು ಕೂಡ ಮಾತಿಗೆ ತಪ್ಪಿದ್ದಾರೆ. ಕೊಬ್ಬರಿ ಬೆಲೆ ಇಳಿಕೆಯ ಬಗ್ಗೆ ಶಾಸಕರಾಗಲಿ ಮಂತ್ರಿಗಳಾಗಲಿ ಕಿಂಚಿತ್ತೂ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ಧರಣಿಯಲ್ಲಿ ಬೈರನಾಯಕನಹಳ್ಳಿ ಗ್ರಾಮಸ್ಥರು, ಮಹಿಳೆಯರು ಭಾಗವಹಿಸಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA